ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಬೆಂಗಳೂರು; ಕಳೆದ ಕೆಲವು ದಿನಗಳಿಂದ ಮಳೆ ಸ್ವಲ್ಪ ಬ್ರೇಕ್ ಕೊಟ್ಟಿತ್ತು. ಇದೀಗ ಮತ್ತೆ ಮಳೆ ಶುರುವಾಗಿದೆ. ಮುಂಗಾರು ಮಳೆ ಆರಂಭವಾಗಿದ್ದು, ಹವಮಾನ ಇಲಾಖೆ ಎಚ್ಚರಿಕೆಯನ್ನ ನೀಡಿದೆ. ಅಷ್ಟಕ್ಕೂ ಮಳೆ ಎಷ್ಟು ದಿನ ಇರಲಿದೆ, ಎಲ್ಲೆಲ್ಲಾ ಹೆಚ್ಚು ಆಗಿರಲಿದೆ ಎಂಬೆಲ್ಲಾ ಮಾಹಿತಿ ಇಲ್ಲಿದೆ ನೋಡಿ. ಈಗಾಗಲೇ ಬೆಂಗಳೂರು ಸೇರಿದಂತೆ ಹಲವೆಡೆ ಸಂಜೆ ವೇಳೆಗೆ ಮಳೆಯಾಗಿದೆ.
ಕಳೆದ ವಾರ ವರುಣ ಬಿಡುವು ಕೊಟ್ಡಿದ್ದರಿಂದ ತಾಪಮಾನದಲ್ಲೂ ಏರಿಕೆಯಾಗಿತ್ತು. ಕಳೆದ ಮೂರ್ನಾಲ್ಕು ದಿನಗಳಿಂದ 32 ಡಿಗ್ರಿವರೆಗೂ ಗರಿಷ್ಠ ಉಷ್ಣಾಂಶ ದಾಖಲಾಗಿತ್ತು. ಇಂದು ಮಧ್ಯಾಹ್ನದಿಂದಾನೇ ಮಳೆಯಾಗಿದೆ. ಮೇಖ್ರಿ ಸರ್ಕಲ್, ಪ್ಯಾಲೇಸ್ ರಸ್ತೆ, ಗಾಲ್ಫ್ ರಸ್ತೆ, ರಾಜಭವನ, ವಿಧಾನಸೌಧ, ಶಿವಾನಂದ ವೃತ್ತ, ವಸಂತನಗರ, ಹೆಬ್ಬಾಳ, ನಾಗವಾರ, ಕಲ್ಯಾಣ ನಗರ, ಮಾನ್ಯತಾ ಟೆಕ್ ಪಾರ್ಕ್ ಸೇರಿದಂತೆ ಹಲವು ಭಾಗದಲ್ಲಿ ಮಳೆ ಬಂದಿದೆ.
ಇನ್ನು ಇಂದಿನಿಂದ ಮುಂಗಾರು ಮಳೆಯ ಅಬ್ಬರ ಜೋರಾಗಿದ್ದು, ಜೂನ್ 13ರ ತನಕ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್ 11, 12 ಮತ್ತು 13 ರಾಜ್ಯದ ಬಹುತೇಕ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಜೂನ್ 11ರಂದು ಬಳ್ಳಾರಿ, ದಾವಣಗೆರೆ, ವಿಜಯನಗರಕ್ಕೆ ಯೆಲ್ಲೋ ಅಲರ್ಟ್ ಘೋಷಣೆಯನ್ನು ಮಾಡಿದ್ದಾರೆ. ಇನ್ನು ಜೂನ್ 12ಕ್ಕೆ ವಿಜಯನಗರ, ಕೊಡಗು, ದಾವಣಗೆರೆ, ಚಿಕ್ಕಬಳ್ಳಾಪುರ, ಬಳ್ಳಾರಿ, ವಿಜಯಪುರ, ಕಲ್ಬುರ್ಗಿ, ಬೆಳಗಾವಿ, ಬಾಗಲಕೋಟೆ ಮತ್ತು ಕರಾವಳಿಯ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆಯಾಗಿದೆ. ಜೂನ್ 13ರವರೆಗೂ ರಾಜ್ಯಾದ್ಯಂತ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಹೀಗಾಗಿ ಹೊರಗೆ ಹೋಗುವ ಜನತೆ ಕೂಡ ಮುಂಜಾಗ್ರತ ಕ್ರಮ ತೆಗೆದುಕೊಳ್ಳಿ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್