ಅಹ್ಮದಾಬಾದ್; ಇಂದು ನಡೆದ ವಿಮಾನ ದುರಂತದಲ್ಲಿ ಪ್ರಯಾಣ ಮಾಡ್ತಾ ಇದ್ದ ಯಾರೊಬ್ಬರು ಜೀವಂತವಾಗಿ ಬದುಕಿ ಬರಲೇ ಇಲ್ಲ. ಸಿಬ್ಬಂದಿ ಸೇರಿ 242 ಮಂದಿಯೂ ಅಸು ನೀಗಿದ್ದಾರೆ. ಅದರಲ್ಲಿ ಗುಜರಾತ್ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಕೂಡ ಈ ದುರಂತದಲ್ಲಿ ಕೊನೆಯುಸಿರೆಳಿದಿದ್ದಾರೆ. ಇಂದಿನ ಈ ಕರಾಳ ದಿನಕ್ಕೆ ಎಲ್ಲರೂ ಕಂಬನಿ ಮಿಡಿದಿದ್ದಾರೆ. ಪ್ರಯಾಣಿಸುತ್ತಿದ್ದ ಅಷ್ಟು ಮಂದಿ ಸಾವನ್ನಪ್ಪಿರುವ ಬಗ್ಗೆ ಪೊಲೀಸರು ಅಧಿಕೃತ ಮಾಹಿತಿ ನೀಡಿದ್ದಾರೆ.
ಭೀಕರ ದುರಂತದಲ್ಲಿ ಯಾರೋಬ್ಬರು ಬದುಕುಳಿದಿರುವ ಸಾಧ್ಯತೆ ಇಲ್ಲ. ಜೊತೆಗೆ ಜನವಸತಿ ಹಾಗೂ ಕಚೇರಿಗಳು ಇರುವ ಸ್ಥಳದಲ್ಲಿ ವಿಮಾನ ಪತನವಾಗಿರುವ ಕಾರಣ ಸಾವು ನೋವು ಜನ್ನಷ್ಟು ಜಾಸ್ತಿಯಾಗಬಹುದು ಎಂದು ಪೊಲೀಸ್ ಕಮಿಷನರ್ ಜಿಎಸ್ ಮಲ್ಲಿಕ್ ಮಾಹಿತಿ ನೀಡಿದ್ದಾರೆ.
ಇನ್ನು ವಿಮಾನ ಪತನಕ್ಕೂ ಮುನ್ನ ಪೈಲೆಟ್ ತುರ್ತು ಕರೆ ಮಾಡಿದ್ದು, ಇದು ನನ್ನ ಕೊನೆಯ ಕರೆ. ನನ್ನಿಂದ ಏನು ಮಾಡಲು ಸಾಧ್ಯವಿಲ್ಲ. ಕ್ರ್ಯಾಶ್ ಲ್ಯಾಂಡಿಂಗ್ ಮಾಡುತ್ತಿದ್ದೇನೆ ಎಂದು ಹೇಳಿದ್ದಾರೆ. ಭಾರತದಲ್ಲಿ ಸಂಭವಿಸಿದ ಘೋರ ದುರಂತಗಳ ಸಾಲಿಗೆ ಇದು ಸೇರ್ಪಡೆಯಾಗುತ್ತಿದೆ. ಲಂಡನ್ ಕಡೆಗೆ ಪ್ರಯಾಣ ಬೆಳೆಸುವ ವಿಮಾನಕ್ಕೆ ಹೆಚ್ಚಿನ ಪ್ರಮಟಣದಲ್ಲಿ ಇಂಧನದ ಅಗತ್ಯತೆ ಇರುತ್ತದೆ. ಹೀಗಾಗಿ ಸುಮಾರು 58 ಸಾವಿರ ಲೀಟರ್ ಪೆಟ್ರೋಲ್ ತುಂಬಿಸಲಾಗಿತ್ತು. ಆದರೆ ಇಷ್ಟಮದು ಭಾರೀ ಪ್ರಮಾಣದಲ್ಲಿ ವೈಟ್ ಪೆಟ್ರೋಲ್ ತುಂಬಿಸಿದ್ದ ಏರ್ ಇಂಡಿಯಾದ ಲಂಡನ್ ವಿಮಾನ ಕೆಳಗೆ ಬಿದ್ದು ಬ್ಲಾಸ್ಟ್ ಆಗಿದೆ. ಒಂದೇ ಅಪಘಾತದಲ್ಲಿ 242 ಮಂದಿ ಸಾವನ್ನಪ್ಪಿದ್ದಾರೆ. ಮೃತರಲ್ಲಿ ಯಾರ್ಯಾರು ಎಲ್ಲಿನವರು ಎಂಬ ಮಾಹಿತಿ ಇನ್ನಷ್ಟೇ ಹೊರಬೀಳಬೇಕಿದೆ.





