ಐಶ್ವರ್ಯಾ ಗೌಡ ಕೇಸ್ ಸಂಬಂಧ ಡಿಕೆ ಸುರೇಶ್ ಗೆ ಸಮನ್ಸ್..!

suddionenews
1 Min Read

ಬೆಂಗಳೂರು; ಕಳೆದ ಕೆಲವು ದಿನಗಳ ಹಿಂದಷ್ಟೇ ಐಶ್ಚರ್ಯಾ ಗೌಡ ತಗಲಾಕಿಕೊಂಡಿದ್ರು. ಪೊಲೀಸರ ಅತಿಥಿಯಾಗಿದ್ರು. ಆಗ ಮಾಜಿ ಸಂಸದ ಡಿಕೆ ಸುರೇಶ್ ಅವರ ಹೆಸರನ್ನು ಹೇಳಿದ್ರು. ಇದೀಗ ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಡಿಕೆ ಸುರೇಶ್ ಅವರಿಗೆ ಇಡಿ ಸಮನ್ಸ್ ಜಾರಿ ಮಾಡಿದೆ. ಡಿಕೆ ಸುರೇಶ್ ಅವರ ಸಹೋದರಿ ಅಂತ ಹೇಳಿಕೊಂಡು ಐಶ್ವರ್ಯಾ ಗೌಡ ದೊಡ್ಡ ಮಟ್ಟಕ್ಕೆ ವಂಚನೆ ಮಾಡಿದ್ದರು.

ಕೋಟ್ಯಾಂತರ ರೂಪಾಯಿ ಮೌಲ್ಯದ ಚಿನ್ನಾಭರಣವನ್ನು ಐಶ್ವರ್ಯಾ ಗೌಡ ವಂಚನೆ ಮಾಡಿದ್ದರು. ಇದೀಗ ಆ ಕೇಸ್ ಗೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಇಡಿ ಸಮನ್ಸ್ ಜಾರಿ ಮಾಡಿದೆ‌. ಗುರುವಾರ ವಿಚಾರಣೆಗೆ ಹಾಜರಾಗುವಂತೆ ಇಡಿ ತಿಳಿಸಿದೆ. ಐಶ್ವರ್ಯಾ ಗೌಡ ಜೊತೆಗೆ ಆರ್ಥಿಕ ವ್ಯವಹಾರಗಳ ಅನುಮಾನದ ಹಿನ್ನೆಲೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿದೆ.

ಈ ನೋಟೀಸ್ ಬಗ್ಗೆ ಮಾತನಾಡಿರುವ ಡಿಕೆ ಸುರೇಶ್, ಮಂಗಳವಾರ ಮಧ್ಯಾಹ್ನ 12.30ಕ್ಕೆ ನಾನು ಹೊರಗೆ ಹೋಗಿದ್ದೆ. ಈ ವೇಳೆ ಇಡಿ ಅಧಿಕಾರಿಗಳು ಬಂದಿದ್ದಾರೆ. ಬಳಿಕ ನಾನು ಅವರನ್ನು ಮನೆಯಲ್ಲಿ ಭೇಟಿ ಮಾಡಿದಾಗ, ಇಡಿ ಸಮನ್ಸ್ ಅಂದ್ರು. ಯಾವ ವಿಚಾರವಾಗಿ ಅಂತ ನೋಡಿದ್ರೆ ಐಶ್ವರ್ಯಾ ಗೌಡ ಕೇಸ್ ಎಂದು ಗೊತ್ತಾಯ್ತು. ಜೂನ್ 19ಕ್ಕೆ ವಿಚಾರಣೆಗೆ ಹಾಜರಾಗಲು ಹೇಳಿದ್ದಾರೆ. ಆದರೆ ಅವತ್ತು, ಪೂರ್ವನಿಶ್ಚುತ ಕಾರ್ಯಕ್ರಮ ಇದೆ. ಹಾಗಾಗಿ ಹಾಜರಾಗುವುದಕ್ಕೆ ಸಾಧ್ಯವಿಲ್ಲ ಎಂದಿದ್ದೇನೆ. ಅದಕ್ಕೆ ಲಿಖಿತ ರೂಪದಲ್ಲಿ ಕೊಡಲು ಹೇಳಿದ್ದಾರೆ ಎಂದು ಐಶ್ವರ್ಯಾ ಗೌಡ ಕೇಸ್ ಗೆ ಸಂಬಂಧಿಸಿದಂತೆ ಉತ್ತರ ನೀಡಿದ್ದಾರೆ. ಐಶ್ವರ್ಯಾ ಗೌಡ, ಡಿಕೆ ಸುರೇಶ್ ಅವರನ್ನ ಅಣ್ಣ ಎಂದು ಹೇಳಿಕೊಂಡು ಮೋಸ ಮಾಡಿದ್ದರು.

Share This Article
Leave a Comment

Leave a Reply

Your email address will not be published. Required fields are marked *

Enable Notifications OK No thanks