ಬೆಂಗಳೂರು; ಇಂಧನ ಇಲಾಖೆಯ ಕಾರ್ಯಕ್ರಮದಲ್ಲಿ ಇಂದು ಮುಂದಿನ ಸಿಎಂ ಘರ್ಜನೆ ಜೋರಾಗಿತ್ತು. ಅದರಲ್ಲೂ ಸಿಎಂ ಸಿದ್ದರಾಮಯ್ಯ ಎದುರೇ ಡಿಸಿಎಂ ಡಿಕೆ ಶಿವಕುಮಾರ್, ಸಿಎಂ ಆಗುವ ಆಸೆಯನ್ನ ಜೋರಾಗಿಯೇ ಕೂಗಿ ಹೇಳಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಸದ್ಯ ಸಿಎಂ ಸಿದ್ದರಾಮಯ್ಯ ಬಣ ಹಾಗೂ ಡಿಕೆ ಶಿವಕುಮಾರ್ ಬಣ ಅಂತ ಇದೆ. ಯಾವುದೇ ಕಾರ್ಯಕ್ರಮವಿರಲಿ ಆಯಾ ಅಭಿಮಾನಿಗಳು ಅವರ ಪರ ಘೋಷಣೆ ಕೂಗುತ್ತಾರೆ. ಡಿಸಿಎಂ ಡಿಕೆ ಶಿವಕುಮಾರ್ ಅವರ ಬಗ್ಗೆ ಮುಂದಿನ ಸಿಎಂ ಅಂತಾನೇ ಘೋಷಣೆ ಕೂಗುತ್ತಾರೆ. ಕಾರ್ಯಕ್ರಮದಲ್ಲಿ ಮಾತನಾಡಿದ ಡಿಕೆ ಶಿವಕುಮಾರ್ ಅವರು, ಬರೀ ಡಿಕೆ ಡಿಕೆ ಎಂದು ಕೂಗೋದಲ್ಲ. ಮುಂದೆ ಮತ್ತೆ ಡಿಕೆ ನೇತೃತ್ವದ ಸರ್ಕಾರವನ್ನು ಅಧಿಕಾರಕ್ಕೆ ತರಬೇಕು ಎಂದಿದ್ದಾರೆ.
ಇದೇ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಕೂಡ ಇದ್ದರು. ಅವರ ಮುಂದೆಯೇ ಅಬ್ಬರದ ಭಾಷಣ ಮಾಡಿದ್ದಾರೆ. ಸುಮ್ಮನೆ ಎಲ್ಲರೂ ಡಿಕೆ ಡಿಕೆ ಅನ್ನೋದಲ್ಲ. ನಾವೂ ನಿಮಗಮ ಪರವಾಗಿ ಕೆಲಸ ಮಾಡಿದ್ದೇವೆ. ನೀವೂ ನಮ್ಮ ಉಪಕಾರ ಸ್ಮರಣೆ ಮಾಡಬೇಕು. ಇಲ್ಲಿಗೆ ಬಂದು ಜ್ಯೋತಿ ಬೆಳಗಿಸಿ ಹೋಗುವುದಲ್ಲ. ಮುಂದೆ ಡಿಕೆಯನ್ನು ಮತ್ತೆ ಅಧಿಕಾರಕ್ಕೆ ತರಬೇಕು. ಡಿಕೆ ಸರ್ಕಾರ ತರಬೇಕು ಎಂದರು.
2023ರಲ್ಲಿ ಕಾಂಗ್ರೆಸ್ ಸರ್ಕಾರ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಾಗಲೇ ಸಿಎಂ ಆಗುವ ಆಕಾಂಕ್ಷೆಯನ್ನು ಡಿಕೆ ಶಿವಕುಮಾರ್ ವ್ಯಕ್ತಪಡಿಸಿದ್ದರು. ಬೇಡಿಕೆ ಕೂಡ ಇಟ್ಟಿದ್ದರು. ಆದರೆ ಹೈಕಮಾಂಡ್ ನಿಂದ ಸಿದ್ದರಾಮಯ್ಯ ಅವರನ್ನು ಸಿಎಂ ಸ್ಥಾನಕ್ಕೆ ಕೂರಿಸಲಾಯ್ತು. ಈಗಲೂ ಸಿಎಂ ಖುರ್ಚಿಗಾಗಿ ಒಳಗೊಳಗೆ ಕಾದಾಟ ನಡೆಯುತ್ತಾ ಇದೆ.
ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!
ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






