Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದುರ್ಗೋತ್ಸವ ಆಚರಿಸಿ : ಕರುನಾಡ ವಿಜಯಸೇನೆ ಒತ್ತಾಯ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜೂನ್. 20 : : ದುರ್ಗೋತ್ಸವ ಆಚರಿಸದೆ ಐತಿಹಾಸಿಕ ಚಿತ್ರದುರ್ಗವನ್ನು ಕಡೆಗಣಿಸುತ್ತಿರುವ ರಾಜ್ಯ ಸರ್ಕಾರದ ವಿರುದ್ದ ಕರುನಾಡ ವಿಜಯಸೇನೆ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಿ ಕಚೇರಿ ಸಹಾಯಕರ ಮೂಲಕ ರಾಜ್ಯದ ಮುಖ್ಯಮಂತ್ರಿಗೆ ಮನವಿ ರವಾನಿಸಿದರು.

ರಾಜಮಹಾರಾಜರು, ವೀರವನಿತೆ ಒನಕೆ ಓಬವ್ವ ಆಳಿದಂತ ಚಿತ್ರದುರ್ಗದ ಏಳುಸುತ್ತಿನ ಕೋಟೆಯಲ್ಲಿ ಇಲ್ಲಿಯವರೆಗೂ ಮೂರು ಬಾರಿ ಮಾತ್ರ ದುರ್ಗೋತ್ಸವ ಆಚರಿಸಲಾಗಿದೆ. ಅನೇಕ ಸಾರಿ ಸರ್ಕಾರದ ಮೇಲೆ ಒತ್ತಡ ಹೇರಿದ್ದರೂ ಸ್ಪಂದಿಸುತ್ತಿಲ್ಲ. ದೇಶ-ವಿದೇಶಗಳಿಂದ ಪ್ರವಾಸಿಗರು ಚಿತ್ರದುರ್ಗಕ್ಕೆ ಆಗಮಿಸಿ ಕೋಟೆ ವೀಕ್ಷಿಸುತ್ತಾರೆ. ಜೋಗಿಮಟ್ಟಿ, ಚಂದ್ರವಳ್ಳಿ, ಆಡುಮಲ್ಲೇಶ್ವರ, ದವಳಪ್ಪನಗುಡ್ಡ, ಮುರುಘಾಮಠ ಹೀಗೆ ಜಿಲ್ಲೆ ಅನೇಕ ಪ್ರವಾಸಿ ಸ್ಥಳಗಳಿಗೆ ಹೆಸರುವಾಸಿಯಾಗಿದೆ. ಹಂಪಿ ಉತ್ಸವದಂತೆ ಪ್ರತಿ ವರ್ಷವೂ ದುರ್ಗೋತ್ಸವ ಆಚರಿಸಿದರೆ ಚಿತ್ರದುರ್ಗದ ಇತಿಹಾಸವನ್ನು ಇಂದಿನ ಪೀಳಿಗೆಗೆ ಪರಿಚಯಿಸಿದಂತಾಗುತ್ತದೆ ಎಂದು ಪ್ರತಿಭಟನಾಕಾರರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.

ದುರ್ಗೋತ್ಸವ ಆಚರಿಸುವಂತೆ ಐದಾರು ತಿಂಗಳ ಹಿಂದೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಮಾಡಿಕೊಂಡ ಹಿನ್ನೆಲೆಯಲ್ಲಿ ಜೂನ್ ಅಂತ್ಯದೊಳಗೆ ಆಚರಿಸುವುದಾಗಿ ಭರವಸೆ ನೀಡಿದ್ದಾರೆ. ಹುಸಿಯಾಗಬಾರದು. ದುರ್ಗೋತ್ಸವ ಆಚರಿಸಿ ರಾಜಾವೀರಮದಕರಿನಾಯಕರಿಗೆ ಹಾಗು ಒನಕೆ ಓಬವ್ವಳಿಗೆ ಗೌರವ ಸಲ್ಲಿಸಬೇಕೆಂಬುದು ನಮ್ಮ ಆಸೆ ಎಂದು ಕರುನಾಡ ವಿಜಯಸೇನೆ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್ ಆಗ್ರಹಿಸಿದರು.

 

ಕರುನಾಡ ವಿಜಯಸೇನೆ ಮಹಿಳಾ ಘಟಕದ ಅಧ್ಯಕ್ಷೆ ವೀಣಗೌರಣ್ಣ, ಉಪಾಧ್ಯಕ್ಷೆ ರತ್ನಮ್ಮ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗೋಪಿನಾಥ್, ಉಪಾಧ್ಯಕ್ಷ ಮುಜಾಯಿದ್
ಕಾರ್ಯದರ್ಶಿ ಅಣ್ಣಪ್ಪ, ಜಗದೀಶ್, ನಗರಾಧ್ಯಕ್ಷ ಅವಿನಾಶ್, ಹರೀಶ್‍ಕುಮಾರ್, ವಿಜಯಬಾಬು, ನಿಸಾರ್‍ಅಹಮದ್, ತಿಪ್ಪೇಸ್ವಾಮಿ, ಶಶಿಧರ, ಕಮಲಮ್ಮ, ಮಧುಸೂದನ್
ನಾಗೇಶ್, ಸುರೇಶ್ ಇನ್ನು ಅನೇಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment