ಉತ್ತರ ಕನ್ನಡದ ಮಾಜಿ ಸಂಸದ ಅನಂತ್ ಕುಮಾರ್ ಹೆಗ್ಡೆ ನೆಲಮಂಗದಲ್ಲಿ ಗಲಾಟೆ : ಸುರೇಶ್ ಗೌಡರಿಂದ ಕ್ಲಾರಿಟಿ..!

1 Min Read

ಬೆಂಗಳೂರು; ನೆಲಮಂಗಲ ತಾಲೂಕಿನ ಹಳೆ ನಿಜಗಲ್ ಬಳಿ ಇನ್ನೋವಾ ಕಾರಿನಲ್ಲಿದ್ದ ನಾಲ್ವರ ಮೇಲೆ ಹಲ್ಲೆ, ಗೂಂಡಾಗಿರಿ ನಡೆಸಿದ ಆರೋಪದ ಮೇಲೆ ಉತ್ತರ ಕನ್ನಡ ಕ್ಷೇತ್ರದ ಮಾಜಿ ಸಂಸದ ಅನಂತ್ ಕುಮಾರ್ ಹೆಗ್ಡೆ, ಅವರ ಕಾರು ಚಾಲಕ ಹಾಗೂ ಗನ್ ಮ್ಯಾನ್ ಮೇಲೆ ಎಫ್ಐಆರ್ ದಾಖಲಾಗಿದೆ. ಅನಂತ್ ಕುಮಾರ್ ಹೆಗ್ಡೆ ಪುತ್ರ ಅಶುತೋಶ್, ಗನ್ ಮ್ಯಾನ್ ಶ್ರೀಧರ್, ಚಾಲಕ ಮಹೇಶ್ ವಿರುದ್ಧ ದೂರು ದಾಖಲಾಗಿದೆ. ಘಟನೆ ವೇಳೆ ಅನಂತ್ ಕುಮಾರ್ ಹೆಗ್ಡೆ ಅವರು ಕೂಡ ಕಾರಿನಲ್ಲಿದ್ದ ಕಾರಣ ಅವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ.

ಅನಂತ್ ಕುಮಾರ್ ಹೆಗಡೆ ಅವರು ತೆರಳುತ್ತಿದ್ದ ಕಾರನ್ನ ಓವರ್ ಟೇಕ್ ಮಾಡಿದ್ದಕ್ಕೆ ಅವರ ಪುತ್ರ ಅಶುತೋಷ್ ಹಾಗೂ ಚಾಲಕ, ಗನ್ ಮ್ಯಾನ್ ಸೇರಿ ಆ ಇನ್ನೋವಾ ಕಾರಿನಲ್ಲಿದ್ದ ಸಲ್ಮಾನ್, ಸೈಫ್, ಇಲಿಯಾಜ್ ಖಾನ್ ಹಾಗೂ ಉನ್ನೀಸಾ ಎಂಬುವವರ ಮೇಲೆ ಹಲ್ಲೆ ಮಾಡಿದ್ದಾರೆ. ಸದ್ಯ ಅವರಿಗೆ ದಾಬಸ್ ಪೇಟೆಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಪೊಲೀಸ್ ವಿಚಾರಣೆ ಎ ಅನಂತ್ ಕುಮಾರ್ ಹೆಗ್ಡೆ ಅವರು, ಕಾರಿಗೆ ಸಣ್ಣದಾಗಿ ಟಚ್ ಆಗಿದ್ದಕ್ಕೆ ಗಲಾಟೆ ನಡೆದಿದೆ. ಹಲ್ಲೆ ನಾನು ಮಾಡಿಲ್ಲ ಎಂದು ಹೇಳಿಕೆ ಕೊಟ್ಟಿದ್ದಾರೆ.

ಘಟನೆ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿ, ಈ ಸಂಬಂಧ ತುಮಕೂರು ಗ್ರಾಮಾಂತರ ಶಾಸಕ ಬಿ.ಸುರೇಶ್ ಗೌಡ ಅವರು ಪ್ರತಿಕ್ರಿಯೆ ನೀಡಿದ್ದು, ಸಣ್ಣ ಮಟ್ಟಿನ ಕಾರು ಅಪಘಾತದಿಂದ ಈ ಗಲಾಟೆ ನಡೆದಿದೆ. ಹಲ್ಲೆಗೊಳಗಾದವರ ಬಳಿ ಮಾತುಕತೆ ನಡೆಸಿದ್ದೇನೆ. ಮುಸ್ಲಿಂ ಮುಖಂಡರ ಬಳಿಯೂ ಮಾತುಕತೆ ನಡೆಸಿದ್ದೇನೆ ಎಂದಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *

Enable Notifications OK No thanks