Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕನ್ನಡಪರ ಹೋರಾಟಗಾರ ರೂಪೇಶ್ ರಾಜಣ್ಣ ಅರೆಸ್ಟ್..!

---Advertisement---

ಜಮೀರ್ ಅಹ್ಮದ್ ಖಾನ್ ಆಪ್ತ ಸರ್ಫರಾಜ್ ಖಾನ್ ನೀಡಿದ ದೂರಿನ ಹಿನ್ನೆಲೆ ಕನ್ನಡ ಪರ ಹೋರಾಟಗಾರ ರೂಪೇಶ್ ರಾಜಣ್ಣ ಅವರನ್ನು ಅರೆಸ್ಟ್ ಮಾಡಲಾಗಿದೆ. ಸರ್ಫರಾಜ್ ಖಾನ್ ಅವರು ರೂಪೇಶ್ ರಾಜಣ್ಣ ಅವರ ಮೇಲೆ ಗಂಭೀರ ಆರೋಪ ಮಾಡಲಾಗಿತ್ತು. ಅದರ ಬಗ್ಗೆ ಕೇಳುವುದಕ್ಕೆಂದು ಬಂದಾಗ ರಾಜಣ್ಣ ಅವರ ಬಂಧನವಾಗಿದೆ.

ಸೆವೆನ್ ಮಿನಿಸ್ಟರ್ ಕ್ವಾಟ್ರಸ್ ನಲ್ಲಿರುವ ಸಚಿವ ಜಮೀರ್ ಅವರ ಸರ್ಕಾರಿ ನಿವಾಸಕ್ಕೆ ಆಗಮಿಸಿದ್ದ ರೂಪೇಶ್ ರಾಜಣ್ಣ, ನನ್ನ ಮೇಲೆ ಸಚಿವರ ಪಿಎ ಸರ್ಫರಾಜ್ ಖಾನ್ ಸುಳ್ಳು ಆರೋಪ ಮಾಡಿದ್ದಾರೆ. ನೀವೂ ಸತ್ಯ ತಿಳಿಸದೆ ನಾನು ಹಿಂದೆ ಸರಿಯಲ್ಲ. ನೀವು ಹೇಳಿರುವುದು ಸತ್ಯ ಅಂತ ದಾಖಲೆ ಸಹಿತ ನಿರೂಪಿಸಿ ಎಂದು ರೂಪೇಶ್ ರಾಜಣ್ಣ ಪಟ್ಟು ಹಿಡಿದಿದ್ದರು. ರೂಪೇಶ್ ರಾಜಣ್ಣ ಆಗಮನ ಹಿನ್ನೆಲೆಯಲ್ಲಿ ಸಚಿವ ಜಮೀರ್ ಸರ್ಕಾರಿ ನಿವಾಸಕ್ಕೆ ಪೊಲೀಸರು ಭದ್ರತೆ ನೀಡಿದ್ದರು. ಇದೇ ವೇಳೆ ಜಮೀರ್ ಸರ್ಕಾರಿ ನಿವಾಸದ ಮುಂದೆ ಹೈಡ್ರಾಮಾ ನಡೆದಿದೆ.

ಅಲ್ಲದೆ ಜಮೀರ್ ಪಿಎ ವಿರುದ್ಧ ರೂಪೇಶ್ ರಾಜಣ್ಣ ಕಿಡಿಕಾರಿದ್ದಾರೆ. ಹೇಡಿಗಳಂತೆ ಪೊಲೀಸರನ್ನು ಹಾಕಿ ಪ್ರತಿಭಟನೆ ಹತ್ತಿಕ್ಕುತ್ತಿದ್ದಾರೆ. ಹೇಡಿಗಳಂತೆ ಪೊಲೀಸರನ್ನ ಹಾಕಿ ಪ್ರತಿಭಟನೆ ಹತ್ತಿಕ್ಕುತ್ತಿದ್ದಾರೆಂದು ಕೂಗುತ್ತಿದ್ದ ರೂಪೇಶ್ ರಾಜಣ್ಣ ಹಾಗೂ ಅವರ ಬೆಂಬಲಿಗರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

 

ಸಚಿವ ಜಮೀರ್ ಅಹ್ಮದ್ ಖಾನ್​ ಆಪ್ತ ಕಾರ್ಯದರ್ಶಿ ಸರ್ಫರಾಜ್ ಖಾನ್ ವಿರುದ್ಧ ಅಕ್ರಮ ರೆಸಾರ್ಟ್ ನಿರ್ಮಾಣ ಮಾಡಿದ ಆರೋಪ ಕೇಳಿ ಬಂದಿತ್ತು. ಈ ಬಗ್ಗೆ ಸ್ಪಷ್ಟನೆ ನೀಡಿದ ಸರ್ಫರಾಜ್​ ಖಾನ್, ಯಾರೋ ಒಬ್ಬ ರೂಪೇಶ್​ ರಾಜಣ್ಣ ಅಂತ ಹುಟ್ಟಿಕೊಂಡಿದ್ದಾನೆ. ಅವನು ನನ್ನ ಕಚೇರಿಗೆ ಬಂದಿದ್ದ. ನಾನು ಹಿಜಾಬ್​ ಬಗ್ಗೆ ಕೆಲಸ ಮಾಡುತ್ತೇನೆ. ಹಣ ನೀಡಿ ಎಂದು ಕೇಳಿದ್ದ. ನಾನು ಬಿಗ್​ಬಾಸ್​ಗೆ ಹೋಗಿದ್ದೆ, ಅಲ್ಲಿಂದ ನಾನೊಬ್ಬ ಸ್ಟಾರ್ ಸೆಲೆಬ್ರಿಟಿ ಅಂದುಕೊಂಡು ಹಣ ಕೇಳಿದ್ದ. ಈ ರೀತಿ ಬ್ಲ್ಯಾಕ್ ಮೇಲ್ ಮಾಡುವವರು ಸಮಾಜದಲ್ಲಿ ಉಳಿದುಕೊಂಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...