Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮಾವು ಬೆಳೆಗಾರರಿಗೆ ಗುಡ್ ನ್ಯೂಸ್ : ಕುಮಾರಸ್ವಾಮಿ ಬರೆದ ಪತ್ರಕ್ಕೆ ಕೇಂದ್ರ ಕೊಡ್ತು ಗ್ರೀನ್ ಸಿಗ್ನಲ್

---Advertisement---

ಇತ್ತೀಚೆಗೆ ಮಾವು ಬೆಳೆಗಾರರಿಗೆ ಸಂಕಷ್ಟ ಎದುರಾಗಿತ್ತು. ಬೆಳೆದ ಮಾವೆಲ್ಲಾ ಬೀದಿ ಬದಿಗೆ ಬಿಸಾಡುವಂತ ಪರಿಸ್ಥಿತಿ ಬಂದೊದಗಿತ್ತು. ಇದರಿಂದ ರೈತರು ಕಂಗಲಾಗಿದ್ದರು. ಆದರೆ ಇದೀಗ ಗುಡ್ ನ್ಯೂಸ್ ಸಿಕ್ಕಿದೆ. ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರಿಂದ ರೈತರಿಗೆ ಗುಡ್ ನ್ಯೂಸ್ ಒಂದು ಒದಗಿ ಬಂದಿದೆ. ಕೇಂದ್ರದಿಂದ ಮಾವು ಬೆಳೆಗೆ ಬೆಂಬಲ ಬೆಲೆ ಸಿಗುವ ಸೂಚನೆ ಸಿಕ್ಕಿದೆ.

ಕುಮಾರಸ್ವಾಮಿ ಅವರು ಬರೆದ ಒಂದೇ ಒಂದು ಪತ್ರದಿಂದ ಮಾವು ಬೆಳೆಗಾರರಿಗೆ ಬೆಂಬಲ ಬೆಲೆ ಸಿಕ್ಕಿದೆ. ಮಾವು ಬೆಲೆ ಕುಸಿತದಿಂದ ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ ರಾಜ್ಯದ ಮಾವು ಬೆಳೆಗಾರರು ಕಂಗಲಾಗಿದ್ದು, ನೆರವಿಗೆ ಬರಬೇಕೆಂದು ಕೇಂದ್ರ ಕೃಷಿ ಸಚಿವ ಶಿವರಾಜ್ ತಂಗಡಗಿ ಅವರಿಗೆ ಕುಮಾರಸ್ವಾಮಿ ಅವರು ಪತ್ರವೊಂದನ್ನ ಬರೆದಿದ್ದರು. ಇದಕ್ಕೆ ಕೇಂದ್ರ ಕೃಷಿ ಸಚಿವರು ಕೂಡ ಸ್ಪಂದಿಸಿದ್ದಾರೆ.

ಸದ್ಯಕ್ಕೆ ಪ್ರತಿ ಕ್ವಿಂಟಾಲ್ ಗೆ 1,616 ಪರಿಹಾರ ಧನ ಸಿಗಲಿದೆ. ರಾಜ್ಯದಲ್ಲಿ 2,50,000 ಮೆಟ್ರಿಕ್ ಟನ್ ಗಳ ಮಾವಿಗೆ ಪರಿಹಾರ ಧನ ಸಿಗಲಿದೆ. ಇದು ಮಾವು ಬೆಳೆಗಾರರಿಗೆ ಖುಷಿ ನೀಡಿದ್ದು, ಹೆಚ್.ಡಿ.ಕುಮಾರಸ್ವಾಮಿ ಅವರು ಕೂಡ ಟ್ವೀಟ್ ಮೂಲಕ ಸಂತಸ ವ್ಯಕ್ತಪಡಿಸಿದ್ದಾರೆ. ಕರ್ನಾಟಕದ ಮಾವು ಬೆಳೆಗಾರರ ನೆರವಿಗೆ ಧಾವಿಸಿದ ಗೌರವಾನ್ವಿತ ಪ್ರಧಾನಿಗಳಾದ ಶ್ರೀ @narendramodi ಅವರ ಸರಕಾರದ ರೈತಪರ ಬದ್ಧತೆ, ಅಚಲತೆಗೆ ನನ್ನ ಹೃದಯಪೂರ್ವಕ ಧನ್ಯವಾದಗಳು.

ಬೆಲೆ ಕುಸಿತದಿಂದ ಕಂಗಾಲಾಗಿದ್ದ ರಾಜ್ಯದ ಮಾವು ಬೆಳೆಗಾರರ ಹಿತದೃಷ್ಟಿಯಿಂದ ಮನವಿ ಮಾಡಿದ ತಕ್ಷಣವೇ ಮಾರುಕಟ್ಟೆ ಮಧ್ಯಸ್ಥಿಕೆ ಬೆಲೆ ಯೋಜನೆ (Market Intervention Scheme-MIS) ಅಡಿಯಲ್ಲಿ ಬೆಂಬಲ ಬೆಲೆ ಘೋಷಿಸಿದ್ದಕ್ಕಾಗಿ ಕೇಂದ್ರದ ಕೃಷಿ ಸಚಿವರಾದ ಶ್ರೀ @ChouhanShivraj ಅವರಿಗೆ ಕರ್ನಾಟಕದ ಮಾವು ಬೆಳೆಗಾರರ ಪರವಾಗಿ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ಶ್ರೀ ನರೇಂದ್ರ ಮೋದಿ ಅವರ ಆಡಳಿತದಲ್ಲಿ ರೈತರ ಉತ್ಪನ್ನಗಳಿಗೆ ಸ್ಥಿರ ಬೆಲೆಯ ಖಾತರಿ ಸದಾ ಇರುತ್ತದೆ ಎಂಬುದನ್ನು ಈ ಉಪಕ್ರಮವು ಮತ್ತೊಮ್ಮೆ ಸಾಬೀತುಪಡಿಸಿದೆ ಎಂದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment