ಸುದ್ದಿಒನ್, ಚಿತ್ರದುರ್ಗ, ಜೂನ್.26 : ಸುಮಾರು 4 ಲಕ್ಷಕ್ಕೂ ಹೆಚ್ಚು ಪರಿಶಿಷ್ಟ ಪಂಗಡಗಳ ಜನರು ವಾಸಿಸುತ್ತಿರುವ ಚಿತ್ರದುರ್ಗ ಜಿಲ್ಲೆಗೆ ಹಾಲಿ ಇರುವ ಏಕಲವ್ಯ ವಸತಿ ಶಾಲೆಯ ಜೊತೆಗೆ ಇನ್ನೊಂದು ಹೆಚ್ಚುವರಿ ಏಕಲವ್ಯ ವಸತಿ ಶಾಲೆಯನ್ನು ಮಂಜೂರು ಮಾಡಲು ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವರಿಗೆ ಶಿಫಾರಸ್ಸು ಮಾಡುವಂತೆ ಸಂಸದ ಗೋವಿಂದ ಎಂ.ಕಾರಜೋಳ ರವರು ನಿನ್ನೆ(ಜೂನ್. 25, ಬುಧವಾರ) ನವದೆಹಲಿಯಲ್ಲಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ರಾಷ್ಟ್ರೀಯ ಬಿ.ಜೆ.ಪಿ.ಅಧ್ಯಕ್ಷರಾದ ಜೆ.ಪಿ.ನಡ್ಡಾರವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.
ಚಿತ್ರದುರ್ಗ ಜಿಲ್ಲೆಯಲ್ಲಿ ಸಾಕಷ್ಟು ಪರಿಶಿಷ್ಟ ಪಂಗಡಕ್ಕೆ ಸೇರಿದವರ ಜನಸಂಖ್ಯೆಯಿದೆ, ಅದರಲ್ಲೂ ಚಳ್ಳಕೆರೆ ಹಾಗೂ ಮೊಳಕಾಲ್ಮೂರು ತಾಲ್ಲೂಕುಗಳಲ್ಲಿ ಅತಿ ಹೆಚ್ಚು ಪರಿಶಿಷ್ಟ ವರ್ಗದ ಜನರು ವಾಸಿಸುತ್ತಿದ್ದಾರೆ, ಜಿಲ್ಲೆಯಲ್ಲಿ ಹಾಲಿ ಇರುವ ಏಕಲವ್ಯ ವಸತಿ ಶಾಲೆ ಬೇಡಿಕೆಯನ್ನೂ ಪೂರೈಸಲಾಗುತ್ತಿಲ್ಲ, ಪರಿಶಿಷ್ಟ ವರ್ಗಗಳ ಮಕ್ಕಳೂ ಕೂಡ ಗುಣಮಟ್ಟದ ಶಿಕ್ಷಣ ಪಡೆದು ಮುಖ್ಯವಾಹಿನಿಗೆ ಬರಬೇಕು ಎನ್ನುವ ಆಶಯ ನನ್ನದಾಗಿದೆ ಎಂಬದನ್ನು ಸಚಿವರಿಗೆ ಸಂಸದರು ಮನದಟ್ಟು ಮಾಡಿದ್ದಾರೆ. ಏಕಲವ್ಯ ವಸತಿ ಶಾಲೆಗೆ ಅಗತ್ಯವಾಗಿರುವ 15 ಎಕರೆ ಜಮೀನನ್ನೂ ಸಹ ಗುರುತಿಸಲು ಈಗಾಗಲೇ ಕ್ರಮಕೈಗೊಂಡಿರುವುದಾಗಿ ಪತ್ರದಲ್ಲಿ ಸಂಸದರು ತಿಳಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











