ಪ್ರತಿಭಾ ಪುರಸ್ಕಾರಕ್ಕೆ ಅಲಕ್ಷಿತ ಸಣ್ಣ ಸಮುದಾಯಗಳ ಮಹಾವೇದಿಕೆಯಿಂದ ಅರ್ಜಿ ಆಹ್ವಾನ

1 Min Read

 

ಚಿತ್ರದುರ್ಗ, ಜೂನ್. 27 : ಕರ್ನಾಟಕ ರಾಜ್ಯ ಅಲಕ್ಷಿತ ಸಣ್ಣ ಸಮುದಾಯಗಳ ಮಹಾವೇದಿಕೆ (ರಿ) ಯಿಂದ ಪ್ರತಿವರ್ಷದಂತೆ ಈ ವರ್ಷವೂ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಪ್ರಸ್ತುತ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇ. 85 ರಷ್ಟು ಹಾಗೂ ಪಿ.ಯು.ಸಿಯಲ್ಲಿ ಶೇ.80 ಕ್ಕಿಂತಲೂ ಹೆಚ್ಚು ಅಂಕಗಳಿಸಿರುವ ಹಿಂದುಳಿದ ಸಣ್ಣ ಸಮುದಾಯಗಳಿಗೆ ಸೇರಿರುವ ವಿದ್ಯಾರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸಲು ಜುಲೈ 10 ಕಡೆ ದಿನಾಂಕವಾಗಿದ್ದು, ಆಸಕ್ತಿ ಹೊಂದಿರುವ ವಿದ್ಯಾರ್ಥಿಗಳು ತಮ್ಮ ಅಂಕಪಟ್ಟಿ ನಕಲು, ಭಾವಚಿತ್ರ ಹಾಗೂ ವಿಳಾಸ ದೃಢೀಕರಣ ಪತ್ರದೊಂದಿಗೆ ಅರ್ಜಿ ಸಲ್ಲಿಸಬಹುದು. ಆಯ್ಕೆಯಾದ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಜಿಲ್ಲಾ ಮಟ್ಟದ ಕಾರ್ಯಕ್ರಮದಲ್ಲಿ ಸನ್ಮಾನಿಸಿ ಗೌರವಿಸಲಾಗುವುದು. ಜೊತೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ವಿದ್ಯಾರ್ಥಿಗಳಿಗೆ ವಿಶೇಷ ಪುರಸ್ಕಾರವೂ ಇರುವುದು.

ಅರ್ಜಿಗಳನ್ನು ನೇರವಾಗಿ ಅಥವ ಅಂಚೆ, ಕೋರಿಯರ್ ಮೂಲಕ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ವಿಳಾಸ; ಟಿ.ತಿಪ್ಪೇಸ್ವಾಮಿ ಸಂಪಿಗೆ, ಅಧ್ಯಕ್ಷರು, ಅಲಕ್ಷಿತ ಸಣ್ಣ ಸಮುದಾಯಗಳ ಮಹಾವೇದಿಕೆ (ರಿ), ಕನ್ನಡ ಸಂಪಿಗೆ ನಿಲಯ, ವೇಮನ ನಗರ, ಪ್ರಸಾದ್ ಆಸ್ಪತ್ರೆ ಬಳಿ, ಚಳ್ಳಕೆರೆ ರಸ್ತೆ, ಚಿತ್ರದುರ್ಗ-577501. ವಿವರಗಳಿಗೆ ಮೊಬೈಲ್ ಸಂಖ್ಯೆ; 9731338670 ಸಂಪರ್ಕಿಸಲು ಕೋರಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *

Enable Notifications OK No thanks