ಆರೋಪಿಗಳನ್ನು ಅರೆಸ್ಟ್ ಮಾಡಿಕೊಂಡು ಬರುವಾಗ ಇನ್ಸ್‌ಪೆಕ್ಟರ್ ಸಾವು : ಬೆಂಗಳೂರಿನಲ್ಲಿ ದುರಂತ..!

1 Min Read

ಬೆಂಗಳೂರು: ಸಾವು ಯಾವಾಗ ಬರುತ್ತೆ ಅನ್ನೋದೆ ಗೊತ್ತಾಗಲ್ಲ. ಅದರಲ್ಲೂ ಇತ್ತೀಚಿನ ದಿನಗಳಲ್ಲಿ ಆಕ್ಸಿಡೆಂಟ್, ಹಾರ್ಟ್ ಅಟ್ಯಾಕ್ ನಿಂದ ಸಾಯುತ್ತಿರುವವರ ಸಂಖ್ಯೆ ಜಾಸ್ತಿಯಾಗಿದೆ. ಇಂದು ಆರೋಪಿಗಳನ್ನ ಅರೆಸ್ಟ್ ಮಾಡಿಕೊಂಡು ಬರುವಾಗ ಅಪಘಾತ ಸಂಭವಿಸಿ, ಇನ್ಸ್‌ಪೆಕ್ಟರ್ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಸೂರ್ಯ ಸಿಟಿ ಬಳಿ ನಡೆದಿದೆ.

ಜೂನ್ 24ರಂದು ಗಾಂಜಾ ಕೇಸ್ ಒಂದರಲ್ಲಿ ಅತ್ತಿಬೆಲೆಯಲ್ಲಿ ಆರೋಪಿಗಳನ್ನ ಬಂಧಿಸಿದ್ದರು. ಬಳಿಕ ಆರೋಪಿಗಳನ್ನ ಕರೆ ತರುತ್ತಿದ್ದರು. ಆದರೆ ಸ್ವಲ್ಪ ಸಮಯ ಕಾರು ನಿಲ್ಲಿಸಿ, ಸಬ್ ಇನ್ಸ್‌ಪೆಕ್ಟರ್ ಮೈಬೂಬ್ ಗುಡ್ಡಳ್ಳಿ ಅವರು ಕೆಳಗೆ ಇಳಿದಿದ್ದಾರೆ. ಫೋನ್ ನಲ್ಲಿ ಮಾತನಾಡುತ್ತಿದ್ದಾಗ ಅಪಘಾತ ನಡೆದಿದೆ. ಹಿಂಬದಿಯಿಂದ ವೇಗವಾಗಿ ಬಂದ ಲಾರಿ, ಇನ್ಸ್‌ಪೆಕ್ಟರ್ ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಇನ್ಸ್‌ಪೆಕ್ಟರ್ ಸಾವನ್ನಪ್ಪಿದ್ದಾರೆ.

ಅಪಘಾತ ನಡೆದದ್ದನ್ನು ಕಂಡವರು ಮೈಬೂಬ್ ಗುಡ್ಡಳ್ಳಿ ಅವರನ್ನು ತಕ್ಷಣ ಆಸ್ಪತ್ರೆಗೆ ಸೇರಿಸಿದ್ದಾರೆ. ಆದರೆ ಯಾವುದೇ ಪ್ರಯೋಜನವಾಗಿಲ್ಲ. ಅಪಘಾತದ ತೀವ್ರತೆಗೆ ಮೈಬೂಬ್ ಗುಡ್ಡಳ್ಳಿ ಪ್ರಾಣ ಬಿಟ್ಟಿದ್ದಾರೆ. ಈ ಘಟನೆಯ ಬಳಿಕ ಆರೋಪಿಗಳಿಗೆ ಒಳ್ಳೆ ಸಮಯವೇ ಸಿಕ್ಕಂತೆ ಆಗಿದೆ. ಇನ್ಸ್‌ಪೆಕ್ಟರ್ ಆಕ್ಸಿಡೆಂಟ್ ಆದ ಕೂಡಲೇ ಆರೋಪಿಗಳು ಅಲ್ಲಿಂದ ಎಸ್ಕೇಪ್ ಆಗಿದ್ದಾರೆ. ಮೈಬೂಬ್ ಗುಡ್ಡಳ್ಳಿ ನಿಧನಕ್ಕೆ ಇಡೀ ಪೊಲೀಸ್ ಸಿಬ್ಬಂದಿ ಸಂತಾಪ ಸೂಚಿಸಿದ್ದಾರೆ. ಕುಟುಂಬಸ್ಥರಿಗೆ ಈ ನೋವನ್ನ ತಡೆದುಕೊಳ್ಳುವ ಶಕ್ತಿ ಭಗವಂತನೇ ಕೊಡಲಿ ಎಂದು ಎಲ್ಲರು ಪ್ರಾರ್ಥನೆ ಮಾಡಿದ್ದಾರೆ. ಕರ್ತವ್ಯದಲ್ಲಿದ್ದಾಗಲೇ ಈ ರೀತಿಯಾಗಿ ಸಾವು ಬಂದಿದೆ. ಈಗಂತು ದಿನ ಬೆಳಗ್ಗೆ ಆದ್ರೆ ಅಲ್ಲಿ ಸಾವು, ಇಲ್ಲಿ ಸಾವು ಅಂತ ಕೇಳಿ ಕೇಳಿನೆ ಜನಕ್ಕೆ ಆತಂಕ ಸೃಷ್ಟಿಯಾಗಿದೆ.

Share This Article
Leave a Comment

Leave a Reply

Your email address will not be published. Required fields are marked *

Enable Notifications OK No thanks