Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಹಾರ್ಟ್ ಅಟ್ಯಾಕ್ ನಿಂದ ತುಮಕೂರಿನಲ್ಲಿ ಬಿಜೆಪಿ ಯುವ ಮೋರ್ಚಾ ಮುಖಂಡ ಸಾವು..!

---Advertisement---

 

 

ತುಮಕೂರು: ಬೆಳಗ್ಗೆ ಆದ್ರೆ ಒಂದಲ್ಲ ಒಂದು ಹಾರ್ಟ್ ಅಟ್ಯಾಕ್ ಸ್ಟೋರಿ ಇದ್ದೆ ಇರುತ್ತೆ. ಹಾಸನದಲ್ಲಂತೂ ಹಾರ್ಟ್ ಅಟ್ಯಾಕ್ ನಿಂದ ಸತ್ತವರು ಸಾಕಷ್ಟು ಮಂದಿ ಇದ್ದಾರೆ. ಪ್ರತಿ ದಿನ ಒಬ್ಬರು, ಇಬ್ಬರು ಸಾವನ್ನಪ್ಪಿದ್ದಾರೆ. ನಿನ್ನೆ ಶಿವಮೊಗ್ಗದಲ್ಲೂ ಇಬ್ಬರು ಸಾವನ್ನಪ್ಪಿದ್ದರು. ಇದೀಗ ತುಮಕೂರಿನಲ್ಲೂ ಹಾರ್ಟ್ ಅಟ್ಯಾಕ್ ನಿಂದ ಬಿಜೆಪಿಯ ಯುವ ಮೋರ್ಚಾ ಮುಖಂಡರೊಬ್ಬರು ಸಾವನ್ನಪ್ಪಿದ್ದಾರೆ.

ಹೆಬ್ಬಾಕ ನೀಲಕಂಠಸ್ವಾಮಿ ಹಾರ್ಟ್ ಅಟ್ಯಾಕ್ ನಿಂದ ನಿಧನರಾಗಿರುವವರು. ಇವರಿಗೆ ಈಗಿನ್ನು 36 ವರ್ಷ ವಯಸ್ಸು. ಮಗಳನ್ನ ಶಾಲೆಗೆ ಬಿಟ್ಟು ಬರುವಾಗ ಎದೆ ನೋವು ಕಾಣಿಸಿಕೊಂಡಿದೆ. ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದರು ಅದರಿಂದ ಪ್ರಯೋಜನವಾಗಿಲ್ಲ. ಹಾರ್ಟ್ ಅಟ್ಯಾಕ್ ಎಂಬ ಭೂತದಿಂದ ಉಸಿರು ಚೆಲ್ಲಿದ್ದಾರೆ. ನೀಲಕಂಠಸ್ವಾಮಿ ಮನೆಯಲ್ಲಿ ದುಃಖ ಮಡುಗಟ್ಟಿದೆ. ಸಣ್ಣ ಸಣ್ಣ ವಯಸ್ಸಿನವರನ್ನೆರ ಈ ಹಾರ್ಟ್‌ ಅಟ್ಯಾಕ್ ಎಂಬ ಭೂತ ಹೀಗೆ ಎತ್ತಿಕೊಂಡು ಹೋದರೆ ಹೇಗೆ ಎಂಬ ಪ್ರಶ್ನೆ ಎಲ್ಲರನ್ನ ಕಾಡುತ್ತಿದೆ.

ನೀಲಕಂಠಸ್ವಾಮಿ ತುಮಕೂರಿನ ಕುವೆಂಪು ನಗರದಲ್ಲಿ ವಾಸವಾಗಿದ್ದರು. ಮಗಳನ್ನು ಶಾಲೆಗೆ ಬಿಟ್ಟು ಬಂದ ಬಳಿಕ ಎದೆನೋವು ಕಾಣಿಸಿಕೊಂಡಿದೆ, ತಲೆ ಸುತ್ತಿ ಬಿದ್ದಿದ್ದಾರೆ. ತಕ್ಷಣ ಅವರನ್ನು ಹತ್ತಿರದಲ್ಲಿಯೇ ಇದ್ದ ಸಿದ್ದಗಂಗಾ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ನೀಡುವ ಎಲ್ಲಾ ಪ್ರಯತ್ನ ಕೂಡ ನಡೆದಿತ್ತು. ಆದರೆ ಅದು ಫಲಿಸಲೇ ಇಲ್ಲ. ನೀಲಕಂಠಸ್ವಾಮಿ ನಿಧನರಾಗಿದ್ದಾರೆ. ಆ ಮಗಳಿಗೆ ಅದೇ ಕೊನೆಯ ಭೇಟಿ, ಅಪ್ಪ ಇನ್ಯಾವತ್ತು ಶಾಲೆಗೆ ಬಿಡುವುದಕ್ಕೆ ಬರಲ್ಲ ಅನ್ನೋದನ್ನ ಹೇಗೆ ಜೀರ್ಣಿಸಿಕೊಳ್ಳುತ್ತಾಳೆ. ಹಾಸನ, ವಿಜಯಪುರ, ಶಿವಮೊಗ್ಗ, ಚಿಕ್ಕಮಗಳೂರು ಈ ಭಾಗದಲ್ಲಿಯೇ ಹಾರ್ಟ್ ಅಟ್ಯಾಕ್ ಜಾಸ್ತಿಯಾಗಿದೆ. ಸದ್ಯದ ಸ್ಥಿತಿಯಲ್ಲಿ ನಮ್ಮ ಜೀವನ ಶೈಲಿಯೂ ಇಲ್ಲಿ ಬಹಳ ಮುಖ್ಯವಾಗುತ್ತದೆ. ದೇಹಕ್ಕೆ ಒಂದಿಷ್ಟು ವ್ಯಾಯಾಮ, ಉತ್ತಮವಾದ ಊಟ, ಒಂದೊಳ್ಳೆ ನಿದ್ದೆ ಮಾಡುವ ಅಭ್ಯಾಸವನ್ನ ಜನ ಮಾಡಿಕೊಳ್ಳಬೇಕು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment