Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಿಸಿಯೂಟದಲ್ಲಿ ಹಲ್ಲಿಬಿದ್ದ ಪರಿಣಾಮ ಹಾವೇರಿ ಜಿಲ್ಲೆಯಲ್ಲಿ 81 ಮಕ್ಕಳು ಅಸ್ವಸ್ಥ..!

Facebook
Twitter
Telegram
WhatsApp

ಹಾವೇರಿ: ಇತ್ತೀಚೆಗೆ ಈ ರೀತಿಯ ಸುದ್ದಿಗಳನ್ನ ಹೆಚ್ಚಾಗುತ್ತಿವೆ. ಕಳೆದ ಕೆಲವು ದಿನಗಳಿಂದ ವಸತಿ ಶಾಲೆ ಸೇರಿದಂತೆ ಎರಡ್ಮೂರು ಈ ರೀತಿಯ ಪ್ರಕರಣವನ್ನು ಕೇಳಿದ್ದೇವೆ. ಇದೀಗ ಮತ್ತೊಂದು ಅಂಥದ್ದೇ ಘಟನೆ ನಡೆದಿದೆ. ಮಧ್ಯಾಹ್ನದ ಬಿಸಿಯೂಟ ತಿಂದು 81 ಮಕ್ಕಳು ಅಸ್ವಸ್ಥರಾಗಿರುವ ಘಟನೆ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ವೆಂಕಟಾಪುರ ತಾಂಡಾದಲ್ಲಿ ನಡೆದಿದೆ.

ಮಧ್ಯಾಹ್ನ ಎಂದಿನಂತೆ ಇಲ್ಲಿಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಮಧ್ಯಾಹ್ನದ ಊಟ ಬಡಿಸಲಾಗಿದೆ. ಒಬ್ಬ ಬಾಲಕನಿಗೆ ಊಟ ಬಡಿಸುವಾಗ ತಟ್ಟೆಗೆ ಸತ್ತ ಹಲ್ಲಿ ಬಿದ್ದಿದೆ. ಅಷ್ಟರಲ್ಲಿ ಮಕ್ಕಳೆಲ್ಲಾ ಊಟ ತಿಂದಿದ್ದಾರೆ. ಒಬ್ಬ ಬಾಲಕನಿಗೆ ವಾಂತಿಯಾಗಿದೆ. ಹಲ್ಲಿ ನೋಡಿದ ಭಯಕ್ಕೇನೆ ಮಕ್ಕಳಿಗೆ ವಾಂತಿಯಾಗಿದೆ. ಅಸ್ವಸ್ಥಗೊಂಡಿದ್ದಾರೆ. ತಕ್ಷಣ ಮಕ್ಕಳನ್ನ ಆಸ್ಪತ್ರೆಗೆ ಸೇರಿಸಲಾಗಿದೆ. ಸದ್ಯ ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಡಿಡಿಪಿಐ ಅಂದಾನಪ್ಪ ವಡಗೇರಿ ಆಸ್ಪತ್ರೆಗೆ ಭೇಟಿ ನೀಡಿ, ಮಕ್ಕಳ ಆರೋಗ್ಯ ವಿಚಾರಿಸಿದ್ದಾರೆ. ಅದರಲ್ಲಿ ಐದು ಮಕ್ಕಳು ತಲೆನೋವು, ವಾಂತಿಯಿಂದ ಅಸ್ವಸ್ಥರಾಗಿದ್ದಾರೆ. ಇನ್ನುಳಿದ ಮಕ್ಕಳು ಆರೋಗ್ಯವಾಗಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅವಕಾಶ ಸಿಗದೆ ಅಲ್ಲು ಅರ್ಜುನ್ ಕೂಡ ನೊಂದಿದ್ದರು.. ಇಂದು ಪ್ಯಾನ್ ಇಂಡಿಯಾ ನಟ..!

ಇಂದು ಸ್ಟಾರ್ ನಟರಾಗಿರುವ, ಪ್ಯಾನ್ ಇಂಡಿಯಾ ಮಟ್ಟದಲ್ಲಿ ಗುರುತಿಸಿಕೊಳ್ಳುವ ನಟ-ನಟಿಯರ ಹಿಂದೆಯೂ ಸಾಕಷ್ಟು ಪರಿಶ್ರಮ ಅಡಗಿದೆ. ಆರಂಭದಲ್ಲಿ ಅವಕಾಶಕ್ಕಾಗಿ ಪರಿತಪಿಸಿದ್ದಾರೆ. ಅವಕಾಶ ಸಿಗದೆ ಅವಮಾನ ಎದುರಿಸಿದ್ದಾರೆ. ಅದರಲ್ಲಿ ಇಂದು ತೆಲುಗು ಇಂಡಸ್ಟ್ರಿಯ ಟಾಪ್ ಒನ್

ರಾಜ್ಯದ ಗಮನ ಸೆಳೆಯಲು ನನ್ನ ಮೇಲೆ ಗೂಬೆ ಕೂರಿಸುತ್ತಿದ್ದಾರೆ : ಕುಮಾರಸ್ವಾಮಿಗೆ ಡಿಕೆಶಿ ಟಾಂಗ್

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ನಿನ್ನೆಯಿಂದ ಡಿಸಿಎಂ ಡಿಕೆ ಶಿವಕುಮಾರ್ ಅವರ ಹೆಸರು ಓಡಾಡುತ್ತಿದೆ. ಅವರೇ ಪೆನ್ ಡ್ರೈವ್ ಹಂಚಿರುವುದು ಅಂತ ಜೆಡಿಎಸ್ ನಾಯಕರು ಆಕ್ರೋಶ ಹೊರ ಹಾಕಿದ್ದಾರೆ. ಕುಮಾರಸ್ವಾಮಿ ಅವರಿಗೆ

ವಿಶ್ವ ರೆಡ್‍ಕ್ರಾಸ್ ದಿನಾಚರಣೆ | ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ಚಿತ್ರದುರ್ಗ ಮೇ. 08 :  ವಿಶ್ವ ರೆಡ್‍ಕ್ರಾಸ್ ದಿನಾಚರಣೆಯ ಅಂಗವಾಗಿ ಭಾರತೀಯ ರೆಡ್‍ಕ್ರಾಸ್ ಸಂಸ್ಥೆ ಚಿತ್ರದುರ್ಗ ಶಾಖೆ ಹಾಗೂ ಎಸ್.ಜಿ.ಸುರಕ್ಷಾ ನರ್ಸಿಂಗ್ ಮತ್ತು ಪ್ಯಾರಾಮೆಡಿಕಲ್ ಕಾಲೇಜು ಸಂಯುಕ್ತಾಶ್ರಯದಲ್ಲಿ ಮೇ. 8 ರ ಇಂದು ಕಾಲೇಜಿನಲ್ಲಿ

error: Content is protected !!