Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಜಾತಿಗಣತಿ ಸಮೀಕ್ಷೆ ಯಶಸ್ವಿ : ನ್ಯಾ.ನಾಗಮೋಹನ್ ದಾಸ್ ಅವರಿಗೆ ಅಭಿನಂದನೆ

---Advertisement---

ಬೆಂಗಳೂರು, ಜು.06: ಪರಿಶಿಷ್ಟ ಜಾತಿಗೆ ಸೀಮಿತಗೊಳಿಸಿ ನಡೆಸಿರುವ ಜಾತಿಗಣತಿ ಸಮೀಕ್ಷೆ ವರದಿಯನ್ನು ಶೀಘ್ರ ರಾಜ್ಯ ಸರ್ಕಾರಕ್ಕೆ ಸಲ್ಲಿಸುವಂತೆ ಮಾದಿಗ ಮುಖಂಡರು ಮನವಿ‌ ಮಾಡಿದರು.

ಬೆಂಗಳೂರಿನಲ್ಲಿ ನ್ಯಾ.ನಾಗಮೋಹನ್ ದಾಸ್ ಏಕಸದಸ್ಯ ವಿಚಾರಣಾ ಆಯೋಗದ ಕಚೇರಿಗೆ ಮಾಜಿ ಸಚಿವ ಎಚ್.ಆಂಜನೇಯ ನೇತೃತ್ವದಲ್ಲಿ ಮಾದಿಗ ಮುಖಂಡರ ನಿಯೋಗ ಸೋಮವಾರ ಭೇಟಿ ಮಾಡಿ ಮನವಿ ಸಲ್ಲಿಸಿತು.

ರಾಜ್ಯದಲ್ಲಿ ಮಾದಿಗ ಮತ್ತು ಛಲವಾದಿ ಸಮುದಾಯ ಎಕೆ, ಎಡಿ, ಆದಿಆಂಧ್ರ ಹೆಸರಿನಲ್ಲಿ ಗುರುತಿಸಿಕೊಂಡು ಗೊಂದಲದ ಕಾರಣ ಒಳಮೀಸಲಾತಿ ಜಾರಿಗೆ ತಾಂತ್ರಿಕ ಅಡಚಣೆ ಆಗಿತ್ತು.
ಈ ನಿಟ್ಟಿನಲ್ಲಿ ಎಸ್ಸಿಯಲ್ಲಿನ ಎಲ್ಲ ಜಾತಿಗಳ ಮೂಲ ಜಾತಿ ಜೊತೆಗೆ ಆರ್ಥಿಕ, ಶೈಕ್ಷಣಿಕ, ಸಾಮಾಜಿಕ ಹಿಂದುಳಿಯುವಿಕೆ ಗುರುತಿಸಲು ರಾಜ್ಯ ಸರ್ಕಾರ ತಮ್ಮ ನೇತೃತ್ವದಲ್ಲಿ ನಡೆಸಿದ ಜಾತಿಗಣತಿ ಸಮೀಕ್ಷೆ ಕಾರ್ಯ ಯಶಸ್ವಿಗೊಂಡಿದ್ದು, ದೇಶಕ್ಕೆ ಮಾದರಿ ಆಗಿದೆ ಎಂದು ಸಂತಸ ವ್ಯಕ್ತಪಡಿಸಿದರು.

ಮೇ 5ರಂದು ಆರಂಭಗೊಂಡ ಸಮೀಕ್ಷೆ ಕಾರ್ಯ  ರಾಜ್ಯಾದ್ಯಂತ ಜೂನ್ 30 ಹಾಗೂ ಬೆಂಗಳೂರು ಮಹಾನಗರ ಪಾಲಿಕೆಗೆ ಸೀಮಿತಗೊಳಿಸಿ ಜುಲೈ 6ರ ವರೆಗೆ ನಡೆಸಲಾಗಿದೆ. ಈ ಮೂಲಕ ಜಾತಿಗಣತಿ ಸಮೀಕ್ಷೆ ಕಾರ್ಯದಲ್ಲಿ ನೋಂದಣಿ ಮಾಡಿಕೊಳ್ಳಲು ಬಹಳಷ್ಟು ಅವಕಾಶವನ್ನು ಆಯೋಗ ಕಲ್ಪಿಸಿದೆ. ಈಗ ಸಮೀಕ್ಷೆ ಕಾರ್ಯ ಪೂರ್ಣಗೊಂಡಿದ್ದು, ತಕ್ಷಣ ಆಯೋಗ ದತ್ತಾಂಶದ ಸಮಗ್ರ ವರದಿಯನ್ನು ಶೀಘ್ರ ರಾಜ್ಯ ಸರ್ಕಾರಕ್ಕೆ ಸಲ್ಲಿಸುವ ಮೂಲಕ ಪರಿಶಿಷ್ಟ ಜಾತಿಯಲ್ಲಿನ ಎಲ್ಲ ವರ್ಗಗಳಿಗೆ ಮೀಸಲಾತಿ ಸೌಲಭ್ಯ ಹಂಚಿಕೆ ಮಾಡಲು ಸಹಕರಿಸಬೇಕೆಂದು ಕೋರಿದರು.

ಈ ವೇಳೆ ನ್ಯಾ.ನಾಗಮೋಹನ್ ದಾಸ್ ಅವರನ್ನು ನಿಯೋಗದ ಸದಸ್ಯರು ಹೂಮಾಲೆ ಹಾಕಿ ಅಭಿನಂದಿಸಿದರು.
ಮಾಜಿ ಸಂಸದ ಬಿ.ಎಂ.ಚಂದ್ರಪ್ಪ, ಸಮುದಾಯದ ಮುಖಂಡರಾದ ಕೆ.ಜೆ.ಜಗದೀಶ್, ಕೋಗಿಲು ವೆಂಕಟೇಶ್,  ಮುತ್ತುರಾಜು,  ದೊಡ್ಡಗುಬ್ಬಿ ಸತೀಶ್,  ಅನಿಲ್ ಕೋಟಿ, ದೇವದಾಸ್,  ಎಂ.ಶ್ರೀನಿವಾಸ್ ನ್ಯಾಯವಾದಿಗಳಾದ ಮೋಹನ್ ರಾಜ್, ಶ್ರೀ ಮಂಜುನಾಥ, ತುಳಸಿರಾಮ್, ಆದಿನಾರಾಯಣಪ್ಪ ಮುಂತಾದವರು ಇದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...