Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಶಿವಮೊಗ್ಗದ ಭದ್ರಾವತಿಯಲ್ಲಿ ಮೂಢನಂಬಿಕೆಗೆ ಮಹಿಳೆ ಬಲಿ..!

---Advertisement---

ಶಿವಮೊಗ್ಗ: ಜಗತ್ತು ಎಷ್ಟೇ ಬದಲಾದರೂ ಇನ್ನು ಕೆಲವರು ಬದಲಾಗಿಲ್ಲ. ಅದರಲ್ಲೂ ಮೂಢನಂಬಿಕೆ ವಿಚಾರದಲ್ಲಂತೂ ಕೆಲವರು ಬದಲಾಗಿಯೇ ಇಲ್ಲ. ಮೂಢನಂಬಿಕೆಯನ್ನ ಈಗಲೂ ಪಾಲಿಸುತ್ತಲೇ ಇದ್ದಾರೆ. ಇದೇ‌ ಮೂಢನಂಬಿಕೆಯಿಂದಾಗಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ದೆವ್ವ ಬಿಡಿಸ್ತೀನಿ ಎಂಬ ನೆಪದಲ್ಲಿ ಮಂತ್ರವಾದಿ ಮಾಡಿದ ಅವಾಂತರಕ್ಕೆ ಶಿವಮೊಗ್ಗದ ಭದ್ರಾವತಿಯ ಮಹಿಳೆ ಸಾವಾಗಿದೆ.

ಭದ್ರಾವತಿ ತಾಲೂಕಿನ ಜಂಬರಘಟ್ಟ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಜಂಬರಘಟ್ಟದ 35 ವರ್ಷದ ಗೀತಾ ಎಂಬ ಮಹಿಳೆ ಮಂತ್ರವಾದಿಯ ಹೊಡೆತಕ್ಕೆ ಜೀವ ಬಿಟ್ಟಿದ್ದಾಳೆ. ಗೀತಾಗೆ ದೆವ್ವ ಹಿಡಿದಿತ್ತು ಎಂದು, ಆಶಾ ಎಂಬ ಮಹಿಳೆ ದೆವ್ವ ಬಿಡಿಸುವುದಕ್ಕೆ ಮುಂದಾಗಿದ್ದಾಳೆ. ದೆವ್ವ ಬಿಡಿಸುತ್ತೇನೆಂದು ಕೋಲಿನಿಂದ ಹೊಡೆಯುವುದಕ್ಕೆ ಶುರು ಮಾಡಿದ್ದಾರೆ. ಈ ಹೊಡೆತದಿಂದ ಗೀತಾ ತೀವ್ರವಾಗಿ ಅಸ್ವಸ್ಥರಾಗಿದ್ದಾರೆ. ಬೆಳಗ್ಗೆ ಆ ನೋವಿನಿಂದಲೇ ಜೀವ ಬಿಟ್ಟಿದ್ದಾರೆ.

ಗೀತಾ, ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಆದರೆ ಮನೆಯಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸದೆ, ಮಂತ್ರವಾದಿಯ ಬಳಿ ಕರೆದುಕೊಂಡು ಬಂದಿದ್ದಾರೆ. ಆಗ ಆಶಾ ತಮ್ಮಲ್ಲಿಂದ ಕೋಲಿನಿಂದ, ನಿಂಬೆ ಹಣ್ಣಿನಿಂದ ಹೊಡೆದಿದ್ದಾರೆ. ಗೀತಾ ಆರೋಗ್ಯವಾಗಿಯೇ ಇದ್ದರು. ಆದರೆ ಕಳೆದೆರಡು ದಿನದಿಂದ ಮಾತ್ರ ಸ್ವಲ್ಪ ಆರೋಗ್ಯ ಕೈಕೊಟ್ಟಿತ್ತು. ಆಕೆಯ ಮಗ ನಕಲಿ ಮಂತ್ರವಾದಿ ಬಳಿ ಕರೆದುಕೊಂಡು ಹೋಗಿದ್ದಾರೆ.

ಆಶಾ, ಕಳೆದ ಕೆಲವು ಚೌಡಮ್ಮ ಬರುತ್ತಾಳೆ ಎಂದು ಹೇಳಿಕೊಂಡು ತಿರುಗಾಡೋದಕ್ಕೆ ಶುರು ಮಾಡಿ ಕೇವಲ ಹದಿನೈದು ದಿನ ಕೂಡ ಆಗಿಲ್ಲ. ಆದ್ರೆ ಈಗ ನೋಡಿದ್ರೆ ಒಂದು ಹೆಣ್ಣು ಮಗಳ ಜೀವವೇ ಹೋಗಿದೆ. ಈ ಘಟನೆ ಸಂಬಂಧ ಹೊಳೆ ಹೊನ್ನೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment