Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ : ಬೊಮ್ಮೇನಹಳ್ಳಿಯಲ್ಲಿ ಮೊಹರಂ ಆಚರಣೆ

---Advertisement---

ಸುದ್ದಿಒನ್, ಚಿತ್ರದುರ್ಗ, ಜುಲೈ. 08 : ತಾಲ್ಲೂಕಿನ ಬೊಮ್ಮನಹಳ್ಳಿ ಗ್ರಾಮದಲ್ಲಿ ಹಿಂದೂ ಮುಸ್ಲಿಮರು ಭಾವೈಕ್ಯತೆಯಿಂದ ಆಚರಿಸುವ ಮೊಹರಂ ಹಬ್ಬವನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು.

ಪ್ರತಿ ವರ್ಷದಂತೆ ಈ ವರ್ಷವೂ ಕೆಂಡದ ಗುಂಡಿಗೆ ಹರಿಕೆ ಹೊತ್ತ ಸಾವಿರಾರು ಭಕ್ತರು ಸುಮಾರು 15 ರಿಂದ 20 ಟ್ರಾಕ್ಟರ್ ನಲ್ಲಿ ಕಟ್ಟಿಗೆ ತಂದು ಹಾಕಿದರು. ಸೋಮವಾರ ಬೆಳಗ್ಗೆ ದೇವರ ಭೇಟಿ ನಡೆಯಿತು. ಸಂಜೆ ಹೆಣ್ಣು ಮಕ್ಕಳು ಬೆಳಗಿನಿಂದ ಉಪಾಸವಿದ್ದು ಕೆಂಡದ ಗುಂಡಿಗೆ ದುಗ್ಗಳ ರೂಪದಲ್ಲಿ ಕೆಂಡವನ್ನು ಹೊತ್ತು ಪ್ರದಕ್ಷಣೆ ಮಾಡುತ್ತಾರೆ. ತದನಂತರ ಮಂಗಳವಾರ ಬೆಳಗಿನ ಜಾವ ಐದು 5.00 ಗಂಟೆಗೆ ಕೆಂಡ ತುದಿಯಲಾಯಿತು. ಸುಮಾರು 500 ರಿಂದ 600 ಜನರು ಕೆಂಡವನ್ನು ತುಳಿದರು. ನಂತರ ದೇವರಿಗೆ ಹರಕೆ ಹೊತ್ತಂತ ಭಕ್ತಾದಿಗಳು ಬೆಲ್ಲ ಸಕ್ಕರೆ ಹೂವಿನ ಹಾರ ವನ್ನು ದೇವರಿಗೆ ಸಮರ್ಪಣೆ ಮಾಡಿದರು.

ಗ್ರಾಮ ಪಂಚಾಯಿತಿ ಸದಸ್ಯ ಮಂಜುನಾಥ ಮಾತನಾಡಿ ನಮ್ಮ ಗ್ರಾಮದಲ್ಲಿ ಹಿಂದಿನ ಕಾಲದಿಂದಲೂ ಈ ಪದ್ಧತಿ ನಡೆದುಕೊಂಡು ಬಂದಿದೆ. ಹಿಂದಿನ ಕಾಲದಲ್ಲಿ ಎತ್ತಿನ ಗಾಡಿಯಲ್ಲಿ ಕಟ್ಟಿಗೆಯನ್ನು ತಂದು ಕೆಂಡದ ಗುಂಡಿಗೆ ಹಾಕುತ್ತಿದ್ದರು. ಗ್ರಾಮದಲ್ಲಿ ಮದುವೆಯಾಗಿ ಹೋದಂತ ಹೆಣ್ಣು ಮಕ್ಕಳು ಮೊಹರಂ ಹಬ್ಬಕೋಸ್ಕರ ಗ್ರಾಮಕ್ಕೆ ಬರುತ್ತಾರೆ. ಹೊರ ರಾಜ್ಯದಿಂದಲೂ ಹಬ್ಬಕ್ಕೆ ಗ್ರಾಮಕ್ಕೆ ಬರುತ್ತಾರೆ. ಹೈದರಾಬಾದ್‌, ಆಂಧ್ರ, ಬೆಂಗಳೂರು, ಶಿವಮೊಗ್ಗ, ಬಳ್ಳಾರಿ, ಸೇರಿದಂತೆ ಹಲವು ಜಿಲ್ಲೆಗಳಿಂದಲೂ ಭಕ್ತರು ಆಗಮಿಸುತ್ತಾರೆ. ನಮ್ಮ ಗ್ರಾಮದಲ್ಲಿ ಜಾತಿ ಭೇದವಿಲ್ಲದಂತೆ ಮೊಹರಂ ಹಬ್ಬವನ್ನು ಆಚರಿಸುತ್ತೇವೆ ಎಂದು ತಿಳಿಸಿದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment