Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಹಿರಿಯೂರು : ವಿಜೃಂಭಣೆಯಿಂದ ನೆರವೇರಿದ ಗುರು ಪೌರ್ಣಮಿ ಮಹೋತ್ಸವ

---Advertisement---

 

ಸುದ್ದಿಒನ್, ಹಿರಿಯೂರು, ಜುಲೈ. 10 : ತಾಲೂಕಿನ ಗುಯಿಲಾಳು ಟೋಲ್ ಬಳಿ ಇರುವ ಶ್ರೀ ಸದ್ಗುರು ಸಾಯಿ ದತ್ತಾಶ್ರಮದಲ್ಲಿ ಗುರುವಾರ ಗುರು ಪೌರ್ಣಮಿ ಮಹೋತ್ಸವ ಬಹಳ ವಿಜೃಂಭಣೆಯಿಂದ ಜರುಗಿತು.

ಗುರು ಪೌರ್ಣಮಿ ಅಂಗವಾಗಿ ಸಾಯಿಮಂದಿರಲ್ಲಿ ಬೆಳಿಗ್ಗೆ ಗಂಗಾಪೂಜೆ ಯೊಂದಿಗೆ ವಿವಿಧ ಧಾರ್ಮಿಕ ಪೂಜಾ ಕಾರ್ಯಕ್ರಮಗಳು ಆರಂಭಗೊಂಡವು. ಶ್ರೀ ಬಾಬಾ ಅವರಿಗೆ ಅಭಿಷೇಕ, ಅಲಂಕಾರ ಪಂಚಾಮೃತ ಅಭಿಷೇಕ, ವ್ಯಾಸ ಪೂಜೆ, ಸದ್ಗುರು ಪೂಜೆ, ಕುಂಭಾಭಿಷೇಕ, ಸಂಜೆ ಆರತಿ, ಶ್ರೀ ಬಾಬಾರ ಪಾದಸ್ಪರ್ಶ, ಶೇಜ ಆರತಿ ಸೇರಿದಂತೆ ವಿವಿಧ ಪೂಜಾ ಕೈಂಕರ್ಯಗಳು ಜರುಗಿದವು. ಗುರು ಪೌರ್ಣಮಿ ಮಹೋತ್ಸವ ಅಂಗವಾಗಿ ಸಾಯಿ ದತ್ತಾಶ್ರಮದಲ್ಲಿ ವಿವಿಧ ಬಣ್ಣದ ವಿದ್ಯುತ್ ದೀಪಾಲಂಕಾರ ಮಾಡಲಾಗಿತ್ತು. ಬಾಳೆ ಕಂದು, ಮಾವಿನ ತಳಿರು ತೋರಣಗಳಿಂದ ಅಲಂಕರಿಸಿದ್ದರು. ಶ್ರೀ ಸಾಯಿ ದತ್ತಾಶ್ರಮದಲ್ಲಿ ಬೆಳಿಗ್ಗೆಯಿಂದ ರಾತ್ರಿಯವರೆಗೂ ಸಾವಿರಾರು ಭಕ್ತರು ಗುರು ಪೌರ್ಣಮಿ ಮಹೋತ್ಸವ ಪೂಜೆಯಲ್ಲಿ ಪಾಲ್ಗೊಂಡು ಬಾಬಾರ ದರ್ಶನ ಪಡೆದರು.ನೆರೆದಿದ್ದ ಭಕ್ತರಿಗೆ ಅನ್ನದಾಸೋಹ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಮಹಿಳೆಯರಿಂದ ಭಜನೆ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಮಾಜಿ ಕೃಷಿಕ ಸಮಾಜದ ಅಧ್ಯಕ್ಷ ಹೆಚ್. ಆರ್. ತಿಮ್ಮಯ್ಯ, ವಕೀಲ ಬಬ್ಬೂರು ಸುರೇಶ್, ಬಿ. ರಾಜಶೇಖರ್, ಗಿಡ್ಡೊಬೆನಹಳ್ಳಿ ಅಶೋಕ್, ಮೇಟಿಕುರ್ಕೆ ಗ್ರಾಮಸ್ಥರು ಸೇರಿದಂತೆ ಸಾವಿರಾರು ಮಂದಿ ಭಕ್ತರು ಬಾಬಾರವರ ದರ್ಶನ ಪಡೆದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment