Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಿಗಂಧೂರು ಸೇತುವೆಗೆ ಯಡಿಯೂರಪ್ಪರ ಹೆಸರಿಡುವಂತೆ ಒತ್ತಾಯ : ಸರ್ಕಾರಕ್ಕೆ ನೋಟೀಸ್ ಕೊಟ್ಟ ಹೈಕೋರ್ಟ್..!

---Advertisement---

ಬೆಂಗಳೂರು: ಸಿಗಂಧೂರು ಸೇತುವೆ ರೆಡಿಯಾಗಿದೆ. ದೊಡ್ಡ ಮಟ್ಟದಲ್ಲಿ ಸೇತುವೆ ಸಿದ್ಧಗೊಂಡಿದ್ದು, ಓಡಾಟ ಈಗ ಇನ್ನು ಸುಲಭವಾಗಿದೆ. ಈ ಸೇತುವೆಗೆ ಇದೀಗ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಹೆಸರಿಡುವಂತೆ ಒತ್ತಾಯ ಕೇಳಿ ಬಂದಿದೆ. ಹೈಕೋರ್ಟ್ ಗೆ ಅರ್ಜಿ ಕೂಡ ಸಲ್ಲಿಕೆಯಾಗಿದೆ. ಇಂದು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸುನೀಲ್ ದತ್ತ ಯಾದವ್ ಅವರಿದ್ದ ನ್ಯಾಯಪೀಠವು, ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ನೋಟೀಸ್ ಜಾರಿ ಮಾಡಿ, ವಿಚಾರಣೆಯನ್ನು ಜುಲೈ 17ಕ್ಕೆ ಮುಂದೂಡಿಕೆ ಮಾಡಿದೆ.

 

ಸೇತುವೆ ನಿರ್ಮಾಣಕ್ಕೆ ಯಡಿಯೂರಪ್ಪ ಅವರದ್ದು ಸಾಕಷ್ಟು ಶ್ರಮವಿದೆ. ಸೇತುವೆ ನಿರ್ಮಾಣಕ್ಕೆ ಮೂಲ ಕಾರಣರಾದವರು ಯಡಿಯೂರಪ್ಪ ಅವರು. ಇದರ ಹಿಂದೆ ಅವರ ಶ್ರಮ ಸಾಕಷ್ಟಿದೆ. ಸಾಗರ ತಾಲೂಕಿನ ಜನರ ಭಾವನೆಗಳನ್ನು ಪರಿಗಣಿಸುವಂತೆ ಅರ್ಜಿ ಸಲ್ಲಿಕೆ ಮಾಡಲಾಗಿತ್ತು. ಶಿವಮೊಗ್ಗದ ಬಿದರೆ ಗ್ರಾಮದ ಕೆ.ಹರನಾಥ್ ಅವರು ಈ ಅರ್ಜಿಯನ್ನ ಸಲ್ಲಿಕೆ ಮಾಡಿದ್ದರು. ಸದ್ಯಕ್ಕೆ ವಿಚಾರಣೆ ನಡೆಸಿದ ಹೈಕೋರ್ಟ್ ನೋಟೀಸ್ ನೀಡಿ, ವಿಚಾರಣೆ ಮುಂದೂಡಿಕೆ ಮಾಡಿದೆ.

ಹೈಕೋರ್ಟ್ ಗೆ ಅರ್ಜಿ ಸಲ್ಲಿಕೆಗೂ ಮೊದಲೇ ಹೊಸ ಸೇತುವೆಗೆ ಯಡಿಯೂರಪ್ಪ ಅವರ ಹೆಸರಿಡುವಂತೆ ಕೋರಿ ಜುಲೈ 7ರಂದು ಕೇಂದ್ರ ಮತ್ತು ಭೂಸಾರಿಗೆ ಇಲಾಖೆ ಮತ್ತು ರಾಜ್ಯ ಸರ್ಕಾರದ ಲೋಕೋಪಯೋಗಿ ಇಲಾಖೆಗೆ ಮನವಿ ಸಲ್ಲಿಸಲಾಗಿತ್ತು. ಆದರೆ ನಂತರದ ದಿನಗಳಲ್ಲಿ ಯಾವುದೇ ಪ್ರತಿಕ್ರಿಯೆ ಬರದ ಕಾರಣ, ಬಳಿಕ ಹೈಕೋರ್ಟ್ ಗೆ ಅರ್ಜಿಯನ್ನ ಸಲ್ಲಿಕೆ ಮಾಡಲಾಗಿದೆ. ಈಗಾಗಲೇ ಸಿಗಂಧೂರು ಸೇತುವೆ ಸಂಪೂರ್ಣವಾಗಿದೆ. ಉದ್ಘಾಟನೆಗೆ ರೆಡಿಯಾಗಿದೆ. ಉದ್ಘಾಟನೆಗೂ ಮುನ್ನ ಯಡಿಯೂರಪ್ಪ ಅವರ ಹೆಸರಿಡಿ ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment