ಬೆಂಗಳೂರು: ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಬಿ.ಸರೋಜಾದೇವಿ ಇಂದು ನಿಧನರಾಗಿದ್ದಾರೆ. ಯಶವಂತಪುರದಲ್ಲಿರುವ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರಿಗೆ 87 ವರ್ಷ ವಯಸ್ಸಾಗಿತ್ತು. ಕನ್ನಡ ಚಿತ್ರರಂಗದ ಪ್ರಮುಖ ನಾಟಿಯಾಗಿದ್ದವರು. ಇಂದು ಎಲ್ಲರನ್ನು ಅಗಲಿದ್ದಾರೆ.
ಕನ್ನಡ ಚಿತ್ರರಂಗದಲ್ಲಿ ಸರೋಜಾದೇವಿ ಅವರನ್ನು ಅಭಿನಯ ಸರಸ್ವತಿ ಎಂದೇ ಕರೆಯಲಾಗುತ್ತಿತ್ತು. ಕನ್ನಡ ಮಾತ್ರವಲ್ಲ ಆಗಿನ ಕಾಲಕ್ಕೆ ತಮಿಳು, ತೆಲುಗು ಮತ್ತು ಹಿಂದಿ ಚಿತ್ರಗಳಲ್ಲಿ ನಟಿಸಿದ್ದರು. 161 ಸಿನಿಮಾಗಳಲ್ಲಿ ನಟಿಸಿದ್ದಾರೆ. ಕನ್ನಡ ಚಿತ್ರರಂಗಕ್ಕೆ ಅಪಾರವಾದ ಕೊಡುಗೆ ನೀಡಿದ್ದರು. ಮಹಾಕವಿ ಕಾಳಿದಾಸ, ಕಿತ್ತೂರು ಚೆನ್ನಮ್ಮ, ಅಣ್ಣಾ ತಮ್ಮ, ಭಕ್ತ ಕನಕದಾಸ, ಬಾಳೇ ಬಂಗಾರ, ನಾಗಕನ್ಯೆ, ಬೆಟ್ಟದ ಹೂವು, ಕಸ್ತೂರಿ ನಿವಾಸ ಸೇರಿದಂತೆ ಅನೇಕ ಕನ್ನಡ ಚಿತ್ರಗಳಲ್ಲಿ ನಟಿಸಿದ್ದರು.
ನಾಡೋಡಿ ಮನ್ನನ್, ಕರ್ಪೂತ ಕರಸಿ, ಪಾಂಡುರಂಗ ಮಹಾತ್ಯಂ, ತಿರುಮಣಂ ಎಂಬ ತಮಿಳು ಸಿನಿಮಾಗಳಲ್ಲೂ ನಟಿಸಿದ್ದರು. ಸರೋಜಾ ದೇವಿ ಅವರಿಗೆ 1969ರಲ್ಲಿ ಪದ್ಮಶ್ರೀ ಪ್ರಶಸ್ತಿ ಮತ್ತು 1992ರಲ್ಲಿ ಪದ್ಮಭೂಷಣ ಪ್ರಶಸ್ತಿ ಲಭಿಸಿತ್ತು. ಬೆಂಗಳೂರು ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಮತ್ತು ತಮಿಳುನಾಡಿನಿಂದ ಕಲೈಮಾಮಣಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











