ಸುದ್ದಿಒನ್, ಹಿರಿಯೂರು, ಜುಲೈ. 15 : ತಾಲೂಕಿನ ಮಸ್ಕಲ್ ಗ್ರಾಮದ ಗ್ರಾಮ ದೇವತೆ ಶ್ರೀ ಕರಿಯಮ್ಮ ದೇವಿಯ ಜಾತ್ರಾ ಮಹೋತ್ಸವ ಬಹಳ ಅದ್ದೂರಿಯಾಗಿ ನೆರವೇರಿತು. ಆಷಾಡ ಮಾಸದಲ್ಲಿ ಈ ಜಾತ್ರೆಯನ್ನು ಆಚರಿಸಲಾಗುತ್ತದೆ. ಮೂರು ವರ್ಷಕ್ಕೊಮ್ಮೆ ಜಾತ್ರೆ ಅದ್ದೂರಿಯಾಗಿ ನಡೆಯಿತು.
ಜಾತ್ರೆ ಅಂಗವಾಗಿ ದೇವಿಗೆ ವಿವಿಧ ಹೂವುಗಳಿಂದ ಅಲಂಕಾರ ಮಾಡಲಾಗಿತ್ತು. ಮಂಗಳವಾರ ಬೆಳಿಯಿಂದಲೂ ರಾತ್ರಿಯವರಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.
ಜಾತ್ರಾ ಮಹೋತ್ಸವ ಅಂಗವಾಗಿ ದೇವರಿಗೆ ಮಸ್ಕಲ್, ಟಿಬಿ ಗೊಲ್ಲರಹಟ್ಟಿ, ಚಿತ್ರದೇವರಹಟ್ಟಿ, ಮಲ್ಲೇಣು, ದೇವಿ ಕಾಲೋನಿ, ಪುಟ್ಟಯ್ಯನಕಟ್ಟೆ ಗ್ರಾಮಸ್ಥರು ತಂಡೋಪತಂಡವಾಗಿ ಕುಟುಂಬದ ಸದಸ್ಯರೊಂದಿಗೆ ಬಂದು ಪೂಜೆ ಸಲ್ಲಿಸಿದರು. ಇದೇ ವೇಳೆ ಮಹಿಳೆಯರು ದೇವಿಗೆ ತಂಬಿಟ್ಟಿನ ಆರತಿ ಬೆಳಗಿದರು. ತಾಲೂಕಿನಲ್ಲಿ ಉತ್ತಮ ಮಳೆ, ಬೆಳೆಯಾಗಲಿ ಎಂದು ವಿಶೇಷ ಪೂಜೆ ಸಲ್ಲಿಸಿ, ಪ್ರಾರ್ಥಿಸಲಾಯಿತು.

ಈ ಸಂದರ್ಭದಲ್ಲಿ ದೇವಸ್ಥಾನ ಕೈವಾಡಸ್ಥರು, ಸಾವಿರಾರು ಭಕ್ತರು ಸುತ್ತ ಮುತ್ತಲಿನ ಗ್ರಾಮಸ್ಥರು ಭಾಗವಹಿಸಿದ್ದರು.
















