Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅಪ್ಪು ಇಲ್ಲದ 2 ತಿಂಗಳು : ನೇತ್ರದಾನಕ್ಕೆ ಒತ್ತು ನೀಡಲು ರಾಘಣ್ಣ ಮನವಿ..!

Facebook
Twitter
Telegram
WhatsApp

 

ಬೆಂಗಳೂರು: ಕರ್ನಾಟಕ ರತ್ನ, ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅಗಲಿ ಇಂದಿಗೆ 2 ತಿಂಗಳು. ಒಂದು ಕಡೆ ಭಜರಂಗಿ ಸಿನಿಮಾ ರಿಲೀಸ್ ಆಗಿದ್ದ ಖುಷಿ. ಎಲ್ಲರೂ ಆ ಸಂತಸದಲ್ಲಿ ತೇಲುತ್ತಿರುವಾಗ್ಲೆ, ಶಿಳ್ಳೆ ಚಪ್ಪಾಳೆ ಹೊಡೆದು ಎಂಜಾಯ್ ಮಾಡುತ್ತಿರುವಾಗ್ಲೇ ಎಲ್ಲರ ಮನಸ್ಸಿಗೂ ಸಿಡಿಲು ಬಡಿದಂತ ಸುದ್ದಿ ಬಂದಿದ್ದು. ಅದು ಅಪ್ಪು ಸಾವಿನ ಸುದ್ದಿ.

ಅಕ್ಷರಶಃ ಇಡೀ ಕರುನಾಡೇ ಶಾಕ್ ನಲ್ಲಿತ್ತು. ಯಾರಲ್ಲಿಯೂ ಆ ವಿಚಾರವನ್ನ ನಂಬೋದಕ್ಕೆ ಆಗ್ತಿರಲಿಲ್ಲ. ಬಳಿಕ ಸತ್ಯವನ್ನ ಯಾರಿಗೂ ಅರಗಿಸಿಕೊಳ್ಳೋದಕ್ಕೂ ಆಗಿರಲಿಲ್ಲ. ಇಂದಿಗೂ ಅಪ್ಪು ನಮ್ಮ ಜೊತೆ ಇಲ್ಲ ಅನ್ನೋ ಆ ಕಹಿ ಸತ್ಯವನ್ನ ಒಪ್ಪಿಕೊಳ್ಳಲು ಯಾರಿಗೂ ಮನಸ್ಸಿಲ್ಲ. ಅವರನ್ನ ಕೋಟ್ಯಾಂತರ ಜನ ಮಿಸ್ ಮಾಡಿಕೊಳ್ಳುತ್ತಿದ್ದಾರೆ.

ಇಂದು ಅವರ 2 ತಿಂಗಳ ಪುಣ್ಯ ಸ್ಮರಣೆ. ಹೀಗಾಗಿ ಕುಟುಂಬ ಸದಸ್ಯರೆಲ್ಲ ಸಮಾಧಿ ಬಳಿ ಬಂದು ಪೂಜೆ ಸಲ್ಲಿಸಿದ್ದಾರೆ. ಪ್ರತಿದಿನ ಬಂದಂತೆ ಇವತ್ತು ಕೂಡ ಅಭಿಮಾನಿಗಳು ಸಾಗಾರೋಪಾದಿಯಲ್ಲೇ ಹರಿದು ಬಂದಿದ್ದಾರೆ.

ಪುನೀತ್ ಪತ್ನಿ ಅಶ್ವಿನಿ ಪುನೀತ್ ರಾಜ್‍ಕುಮಾರ್, ಮಕ್ಕಳು, ರಾಘಣ್ಣ, ಅಪ್ಪು ಸಹೋದರಿಯರು ಸೇರಿದಂತೆ ಕುಟುಂಬಸ್ಥರೆಲ್ಲಾ ಸೇರಿ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ಮಾತನಾಡಿದ ರಾಘಣ್ಣ, ಪುನೀತ್ ನಿಧನದ ಬಳಿಕ ನೇತ್ರದಾನದ ಬಗ್ಗೆ ಅರಿವು ಹೆಚ್ಚಾಗಿದೆ. ನೋಂದಣಿ ಮಾಡಿಕೊಳ್ಳುವವರ ಸಂಖ್ಯೆಯೂ ಹೆಚ್ಚಾಗಿದೆ. ಜೊತೆಗೆ ಈಗ ತುಂಬಾ ಸುಲಭವಾಗಿದೆ. 8884018800 ನಂಬರ್ ಗೆ ಮಿಸ್ಡ್ ಕಾಲ್ ಮಾಡಿದ್ರು ಸಾಕು, ಆ ಫಾರ್ಮ್ ಮೊಬೈಲ್ ಗೆ ಬರುತ್ತೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಳ್ಳಕೆರೆ | ರೈತ ಆತ್ಮಹತ್ಯೆ

ಸುದ್ದಿಒನ್, ಚಳ್ಳಕೆರೆ, ಮೇ. 12 : ತಾಲೂಕಿನ ಬಾಲೇನಹಳ್ಳಿ ಗ್ರಾಮದ ಮೋಹನ್ ಕುಮಾರ್(36) ಎಂಬ ರೈತ ಬೆಳಗಾಗಿ ಮಾಡಿದ ಸಾಲವನ್ನು ತೀರಿಸಲಾಗದೆ ಭಾನುವಾರ ಬೆಳಗಿನ ಜಾವ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ

ಹೊಸದುರ್ಗ | ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಫೇಲ್,‌ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ

  ಸುದ್ದಿಒನ್, ಚಿತ್ರದುರ್ಗ, ಮೇ. 12  : ಇತ್ತಿಚೀಗಷ್ಟೆ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಚಿತ್ರದುರ್ಗ ಜಿಲ್ಲೆ 21ನೇ ಸ್ಥಾನ ಪಡೆದುಕೊಂಡಿದೆ. ಇತ್ತ ವಿದ್ಯಾರ್ಥಿನಿಯೊಬ್ಬಳು ಪರೀಕ್ಷೆಯಲ್ಲಿ ಫೇಲ್ ಆಗಿದ್ದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ

ಖ್ಯಾತ ಕಿರುತೆರೆ ನಟಿ ಪವಿತ್ರಾ ಜಯರಾಮ್ ಅಪಘಾತದಲ್ಲಿ ಸಾವು…!

ಬೆಂಗಳೂರು : ಇಂದು ತಾಯಂದಿರ ದಿನ. ಎಲ್ಲರೂ ತಮ್ಮ ತಾಯಂದಿರ ಫೋಟೋ ಹಾಕಿಕೊಂಡು ವಿಶ್ ಮಾಡುತ್ತಿದ್ದಾರೆ. ತಾಯಂದಿರಿಗೆ ಗಿಫ್ಟ್ ಕೊಟ್ಟು ಸಂಭ್ರಮಿಸುತ್ತಿದ್ದಾರೆ. ಆದರೆ ಈ ನಟಿಯ ಮಕ್ಕಳಿಗೆ ಆ ಯೋಗ ಇಲ್ಲ. ಅಮ್ಮನನ್ನು ತಬ್ಬಿ

error: Content is protected !!