ಬೆಂಗಳೂರು: ಡಾ.ವಿಷ್ಣುವರ್ಧನ್ ಲೆಜೆಂಡರಿ ನಟರಲ್ಲಿ ಒಬ್ಬರು. ಅವರಿಗೆ ಸಿಗಬೇಕಾದ ಹಲವು ಗೌರವಗಳು ಸಿಗಲೇ ಇಲ್ಲ ಎಂಬುದು ಅಭಿಮಾನಿಗಳಿಗೆ ಈಗಲೂ ಬೇಸರವಿದೆ. ಇದೀಗ ವಿಷ್ಣುದಾದ ಅಳಿಯ ಅನಿರುದ್ಧ್ ಸರ್ಕಾರದ ಬಳಿ ಮನವಿಯೊಂದನ್ನ ಮಾಡಿದ್ದಾರೆ. ಡಾ.ವಿಷ್ಣುವರ್ಧನ್ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ನೀಡುವಂತೆ ಕೇಳಿದ್ದಾರೆ.
ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದು, ಮನವಿ ಪತ್ರವನ್ನು ನೀಡಿದ್ದಾರೆ. ನಾನು ಈ ಪತ್ರವನ್ನು ಸಾಹಸಸಿಂಹ ಎಂದು ಹೆಮ್ಮೆಯಿಂದ ಕರೆಯಲ್ಪಡುವ, ಕನ್ನಡಿಗರ ಹೃದಯ ಸಿಂಹಾಸನದಲ್ಲಿ ಸದಾ ಸ್ಥಾನ ಪಡೆದ ದಿಗ್ಗಜ ನಟರಾದ ಡಾ.ವಿಷ್ಣುವರ್ಧನ್ ಅವರ ಕೋಟ್ಯಾಂತರ ಅಭಿಮಾನಗಳ ಪರವಾಗಿ, ಗೌರವದೊಂದಿಗೆ ಹಾಗೂ ಹೃದಯಪೂಋವಕ ಮನವಿಯೊಂದಿಗೆ ಈ ಪತ್ರವನ್ನು ಬರೆಯುತ್ತಿದ್ದೇನೆ.
ಕನ್ನಡ ಚಲನಚಿತ್ರರಂಗಕ್ಕೂ ಹಾಗೂ ನಮ್ಮ ರಾಜ್ಯದ ಸಾಂಸ್ಕೃತಿಕ ಪರಂಪರೆಗೂ ಅವರು ನೀಡಿರುವ ಕೊಡುಗೆ ಅಪರೂಪ ಹಾಗೂ ಅಪಾರ. ಅವರು ತಮ್ಮ ಸಾಮಾಜಿಕ ಜವಾಬ್ದಾರಿಯನ್ನು ನಿಭಾಯಿಸಿದ ರೀತಿ ಕೂಡ ಅನೇಕರಿಗೆ ಪ್ರೇರಣೆಯಾಗಿದೆ. ಅವರು ನಾಯಕ ನಟರಾಗಿ 225ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿ, ಹಲವು ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಅವರು ನಮ್ಮನ್ನು ಭೌತಿಕವಾಗಿ ಅಗಲಿ 15 ವರ್ಚಗಳು ದಾಟಿದ್ದರು, ಜನರ ಹೃದಯದಲ್ಲಿ ಅವರು ಹೊಂದಿರುವ ಸ್ಥಾನ ಅಚಲವಾದದ್ದು. ಆದರೆ ಇದುವರೆಗೂ ಭಾರತ ಸರ್ಕಾರದಿಂದ ಅವರಿಗೆ ಪದ್ಮಶ್ರೀ ಪ್ರಶಸ್ತಿ ಕೂಡ ದೊರೆತಿಲ್ಲ. ನಮ್ಮ ರಾಜ್ಯದ ಅತ್ಯುನ್ನತ ಪ್ರಶಸ್ತಿಯಾದ ಕರ್ನಾಟಕ ರತ್ನ ಪ್ರಶಸ್ತಿ ಕೂಡ ಸಿಕ್ಕಿಲ್ಲ. ಹೀಗಾಗಿ ಕನಿಷ್ಠ ಪಕ್ಷ ಮರಣೋತ್ತರವಾಗಿಯಾದರೂ ಇವರಿಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ನೀಡಬೇಕೆಂದು ಕೋರಿ ಅನಿರುದ್ದ್ ಪತ್ರವನ್ನ ಬರೆದಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.















