ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಚಿತ್ರದುರ್ಗ. ಜುಲೈ19: ಕೈಮಗ್ಗ ಮತ್ತು ಜವಳಿ ಇಲಾಖೆಯು ಕೈಮಗ್ಗ ಮತ್ತು ವಿದ್ಯುತ್ ಮಗ್ಗ ನೇಕಾರರುಗಳಿಗೆ ಹಾಗೂ ನೇಕಾರಿಕೆಗೆ ಸಂಬಂಧಿಸಿದ ಇತರೆ ಚಟುವಟಿಕೆಗಳಲ್ಲಿ ತೊಡಗಿರುವ ನೇಕಾರರಿಗೆ ಪ್ರಸಕ್ತ ಸಾಲಿನ ನೇಕಾರರ ಸಮ್ಮಾನ್ ಯೋಜನೆಯಡಿ ವಾರ್ಷಿಕವಾಗಿ ರೂ.5,000/-ಗಳ ಆರ್ಥಿಕ ನೆರವು ನೀಡಲು ಅವಕಾಶ ಕಲ್ಪಿಸಲಾಗಿದ್ದು, ಈ ಸಂಬಂಧ ಅರ್ಜಿ ಆಹ್ವಾನಿಸಲಾಗಿದೆ.
2024-25ನೇ ಸಾಲಿನಲ್ಲಿ ನೇಕಾರರ ಸಮ್ಮಾನ್ ಯೋಜನೆಯಡಿ ಸೌಲಭ್ಯ ಪಡೆದಿರುವ ಕೈಮಗ್ಗ ಮತ್ತು ವಿದ್ಯುತ್ ಮಗ್ಗ ನೇಕಾರರ ಪಟ್ಟಿಯಲ್ಲಿ ಪ್ರಸಕ್ತ ಸಾಲಿನಲ್ಲಿ ಮೃತರಾಗಿರುವ, ನೇಕಾರಿಕೆ ವೃತ್ತಿ ಬಿಟ್ಟಿರುವ ಮತ್ತು ಬೇರೆ ಕಡೆ ಸ್ಥಳಾಂತರಗೊಂಡಿರುವ ನೇಕಾರರನ್ನು ಹೊರತುಪಡಿಸಿ ನೇಯ್ಗೆ ಚಟುವಟಿಕೆಯಲ್ಲಿ ತೊಡಗಿರುವ ಅರ್ಹ ನೇಕಾರರ ವಿವರಗಳನ್ನು ಸ್ಥಳೀಯ ಕೈಮಗ್ಗ ಅಭಿವೃದ್ಧಿ ನಿಗಮ, ನೇಕಾರ ಸಹಕಾರ ಸಂಘಗಳ ಮೂಲಕ ಅಥವಾ ನೇರವಾಗಿ ಉಪನಿರ್ದೇಶಕರ ಕಚೇರಿ, ಕೈಮಗ್ಗ ಮತ್ತು ಜವಳಿ ಇಲಾಖೆ, ಬಿ.ಡಿ.ರಸ್ತೆ, ಯೂನಿಯನ್ ಪಾರ್ಕ್ ಹತ್ತಿರ, ಮಸೀದಿ ಪಕ್ಕ, ಚಿತ್ರದುರ್ಗ ಕಚೇರಿಗೆ ಆಗಸ್ಟ್ 16ರೊಳಗಾಗಿ ವಿವರಗಳನ್ನು ಸಲ್ಲಿಸುವುದು.
ಕಳೆದ ಸಾಲಿನಲ್ಲಿ ನೊಂದಣೆಯಾಗದೇ ಇರುವ ನೇಕಾರಿಕೆ ಚಟುವಟಿಕೆಯಲ್ಲಿ ತೊಡಗಿರುವ ಅರ್ಹ ಕೈಮಗ್ಗ ಹಾಗೂ ವಿದ್ಯುತ್ ಮಗ್ಗ ನೇಕಾರರಿಗೆ ಹೊಸದಾಗಿ ಅರ್ಜಿ ನಮೂನೆಯೊಂದಿಗೆ ಆಧಾರ್ ಕಾರ್ಡ್, ರೇಷನ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕ, ನೇಕಾರರ ಗುರುತಿನ ಚೀಟಿ, ನೇಕಾರಿಕೆ ವೃತ್ತಿಯಲ್ಲಿ ತೊಡಗಿರುವ ಪೋಟೋ ಪ್ರತಿ ಹಾಗೂ ನೇಕಾರಿಕೆ ವೃತ್ತಿಯಲ್ಲಿ ಪಡೆಯುತ್ತಿರುವ ವಿವರಗಳೊಂದಿಗೆ ಆಗಸ್ಟ್ 30ರೊಳಗಾಗಿ ಹೊಸದಾಗಿ ಅರ್ಜಿ ಸಲ್ಲಿಸುವುದು.
ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಚೇರಿ, ಕೈಮಗ್ಗ ಮತ್ತು ಜವಳಿ ಇಲಾಖೆ, ಬಿ.ಡಿ.ರಸ್ತೆ, ಯೂನಿಯನ್ ಪಾರ್ಕ್ ಹತ್ತಿರ, ಮಸೀದಿ ಪಕ್ಕ, ಚಿತ್ರದುರ್ಗಯ ಕಚೇರಿ ದೂರವಾಣಿ ಸಂಖ್ಯೆ 08194-221426 ಗೆ ಸಂಪರ್ಕಿಸಬಹುದು ಎಂದು ಕೈಮಗ್ಗ ಮತ್ತು ಜವಳಿ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್