Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಇನ್ನರ್‍ವೀಲ್ಹ್ ಕ್ಲಬ್ ಚಿತ್ರದುರ್ಗ ಅಧ್ಯಕ್ಷರಾಗಿ ವೀಣ ಜಯರಾಂ, ಕಾರ್ಯದರ್ಶಿಯಾಗಿ ಶೋಭ ರಾಮಚಂದ್ರ ಪದಗ್ರಹಣ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜುಲೈ.20 : ಇನ್ನರ್‍ವೀಲ್ಹ್ ಕ್ಲಬ್ ಚಿತ್ರದುರ್ಗ ಅಧ್ಯಕ್ಷರಾಗಿ ವೀಣ ಜಯರಾಂ, ಕಾರ್ಯದರ್ಶಿಯಾಗಿ ಶೋಭ ರಾಮಚಂದ್ರ ಇವರುಗಳ ಪದಗ್ರಹಣ ದವಳಗಿರಿ ಬಡಾವಣೆಯಲ್ಲಿರುವ ಗಾಯತ್ರಿ ಶಿವರಾಂ ಇನ್ನರ್‍ವೀಲ್ಹ್ ಭವನದಲ್ಲಿ ಭಾನುವಾರ ನಡೆಯಿತು.

ಪದಗ್ರಹಣ ಸ್ವೀಕರಿಸಿ ಮಾತನಾಡಿದ ಇನ್ನರ್‍ವೀಲ್ಹ್ ಕ್ಲಬ್ ಚಿತ್ರದುರ್ಗ ಅಧ್ಯಕ್ಷೆ ವೀಣ ಜಯರಾಂ ನಾಲ್ಕು ವರ್ಷಗಳ ಕಾಲ ಸಮಾಜ ಸೇವೆಯಲ್ಲಿ ತೊಡಗಿಕೊಂಡಿದ್ದ ಫಲವಾಗಿ ಇನ್ನರ್‍ವೀಲ್ಹ್ ಕ್ಲಬ್ ಅಧ್ಯಕ್ಷ ಸ್ಥಾನ ಸಿಕ್ಕಿದೆ. ನನ್ನ ಅಧಿಕಾರವಧಿಯಲ್ಲಿ ಹಿರಿಯ ನಾಗರೀಕರು ಹಾಗೂ ಮಹಿಳಾ ಸಬಲೀಕರಣಕ್ಕೆ ಹೆಚ್ಚಿನ ಒತ್ತು ಕೊಡಲಾಗುವುದು. ಸರ್ಕಾರಿ ಶಾಲೆಗಳ ಬಲವರ್ಧನೆ ಜೊತೆಗೆ ಉಚಿತ ಆರೋಗ್ಯ ತಪಾಸಣೆ, ರಕ್ತದಾನ ಶಿಬಿರ, ಗಿಡ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ಇಪ್ಪತ್ತಕ್ಕೂ ಹೆಚ್ಚು ಮಹಿಳೆಯರಿಗೆ ಉಚಿತವಾಗಿ ಟೈಲರಿಂಗ್ ತರಬೇತಿ ನೀಡಿದ್ದೇನೆ. ಇದರಿಂದ ಸ್ವಾವಲಂಭಿಗಳಾಗಿ ಬದುಕಲು ಸಹಕಾರಿಯಾಗಿದೆ ಇನ್ನರ್‍ವೀಲ್ಹ್ ಕ್ಲಬ್ 102 ವರ್ಷಗಳನ್ನು ಪೂರೈಸುತ್ತಿರುವುದು ಅತ್ಯಂತ ಸಂತೋಷದ ಸಂಗತಿ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ವೀಣ ಸ್ವಾಮಿ ಪದಗ್ರಹಣ ನೆರವೇರಿಸಿದರು.
ಜ್ಯೋತಿ ಲಕ್ಷ್ಮಣ್ ಬುಲೆಟಿನ್ ಬಿಡುಗಡೆಗೊಳಿಸಿದರು.
ಭಾಗ್ಯಲಕ್ಷ್ಮಿ, ವನಜಾ ಅನಂತರಾಜ್, ಪೂಜಾ ಪ್ರದೀಪ್ ಇವರುಗಳು ವೇದಿಕೆಯಲ್ಲಿದ್ದರು. ರೂಪ ಜನಾರ್ಧನ್, ಪಾಸ್ಟ್ ಪ್ರೆಸಿಡೆಂಟ್ ಮೋಕ್ಷರುದ್ರಸ್ವಾಮಿ, ಗಾಯತ್ರಿ ಶಿವರಾಂ, ಮಾಧುರಿ ಮಧುಪ್ರಸಾದ್, ಶ್ಯಾಮಲ ಶಿವಪ್ರಕಾಶ್ ಇನ್ನು ಅನೇಕರು ಪದಗ್ರಹಣ ಸಮಾರಂಭದಲ್ಲಿ ಭಾಗವಹಿಸಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment