ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ, ಚಳ್ಳಕೆರೆ
ಮೊ : 8431413188
ಸುದ್ದಿಒನ್, ಚಳ್ಳಕೆರೆ, ಜುಲೈ. 23 : ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮಗಳ ಮೂಲಸೌಕರ್ಯಗಳಿಗೆ ಹೆಚ್ಚಿನ ಆದ್ಯತೆಯ ನೀಡುತ್ತೇನೆ ಎಂದು ಗೋಪನಹಳ್ಳಿ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷೆ ಎಚ್ ಕೆ. ಸುಮಿತ್ರ ಶ್ರೀನಿವಾಸ್ ಹೇಳಿದರು.

ಗೋಪನಹಳ್ಳಿ ಗ್ರಾಮ ಪಂಚಾಯತಿಯಲ್ಲಿ ನಡೆದ ಅಧ್ಯಕ್ಷರ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿ ನಂತರ ಅವರು ಮಾತನಾಡಿ, ಅಧ್ಯಕ್ಷರ ಚುನಾವಣೆಯಲ್ಲಿ ನನ್ನನ್ನ ಅವಿರೋಧವಾಗಿ ಆಯ್ಕೆ ಮಾಡಿದ ಎಲ್ಲಾ ಸದಸ್ಯರಿಗೂ ಈ ಮೂಲಕ ಅಭಿನಂದನೆ ತಿಳಿಸುತ್ತೇನೆ. ನಮ್ಮ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಗೋಪನಹಳ್ಳಿ, ಚಿಕ್ಕೇನಹಳ್ಳಿ ಹಾಗೂ ರೆಡ್ಡಿ ಹಳ್ಳಿಗಳು ಒಳಪಟ್ಟಿದ್ದು ಗ್ರಾಮಗಳಲ್ಲಿನ ಮೂಲಸೌಕರ್ಯಗಳಾದ ಚರಂಡಿ ಸ್ವಚ್ಛತೆ ಶುದ್ಧವಾದ ಕುಡಿಯುವ ನೀರು, ಮನೆ ಇಲ್ಲದವರಿಗೆ ಮನೆ ನಿರ್ಮಾಣಕ್ಕೆ ಅವಕಾಶ ಹಾಗೂ ಸ್ಮಶಾನಗಳ ಸ್ವಚ್ಛತೆ, ಹಾಗೂ ವಿದ್ಯುತ್ ಕಂಬಗಳಿಗೆ ಬಲ್ಪಗಳ ವ್ಯವಸ್ಥೆ, ಕಲ್ಪಿಸಲು ನಮ್ಮ ಗ್ರಾಮ ಪಂಚಾಯತಿ ಸದಸ್ಯರ ಒಡಗೂಡಿ ಪ್ರಯತ್ನ ಮಾಡುತ್ತೇನೆ. ಇಂದು ನನಗೆ ಅಧ್ಯಕ್ಷರಾಗಲು ಅವಕಾಶ ಮಾಡಿಕೊಟ್ಟ ಗ್ರಾಮ ಪಂಚಾಯತಿ ಸದಸ್ಯರಿಗೆ ಹಾಗೂ 3 ಗ್ರಾಮಗಳ ಮುಖಂಡರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.
ಚುನಾವಣೆ ಪ್ರಕ್ರಿಯೆಯಲ್ಲಿ ಪಾಲ್ಗೊಂಡ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ರಾಜನಾಯ್ಕ್ ಎಚ್. ಕೆ. ಸುಮಿತ್ರ ಶ್ರೀನಿವಾಸ್ ಇವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಘೋಷಣೆ ಮಾಡಿದರು.
ಈ ವೇಳೆ ಗ್ರಾಮ ಪಂಚಾಯಿತಿ ಸದಸ್ಯರಾದ ಭವಾನಿ ಉಮೇಶ, ಎಸ್ ಡಿ.ನಾಗರಾಜ್, ಗೀತಾ ಪರಮೇಶ, ಲಕ್ಷ್ಮಿ ಹರೀಶ, ಕಲಾವತಿ, ಕೆ.ಟಿ.ಶಿವಣ್ಣ, ಹೊಚಿ ಬೋರಯ್ಯ, ಕೊಡಳ್ಳಮ್ಮ,ಲಕ್ಷ್ಮಕ್ಕ, ಪಿ.ಎನ್.ದೊಡ್ಡೆರಂಗೆಗೌಡ,
ಪಿಡಿಓ ಎನ್ ಆರ್ ತಿಪ್ಪೇಸ್ವಾಮಿ, ಕಾರ್ಯಕ್ರದರ್ಶಿ ಎಸ್ ಆರ್ ಕರಿಯಪ್ಪ, ಜೆಡಿಎಸ್ ನ ತಾಲೂಕು ಕಾರ್ಯದರ್ಶಿ ಹೆಗ್ಗೆರೆ ಆನಂದಪ್ಪ, ಗ್ರಾಮಪಂಚಾಯಿತಿ ಸಿಬ್ಬಂದಿಗಳು ಚಿಕ್ಕೇನಹಳ್ಳಿ ಗ್ರಾಮಸ್ಥರು, ಗೋಪನಹಳ್ಳಿ ಗ್ರಾಮದ ಮುಖಂಡರಾದ ಗಿರೀಶ್, ಪರಮೇಶ್ ಮೂರ್ತಿ,ಹಾಗೂ ರೆಡ್ಡಿಹಳ್ಳಿ ಗ್ರಾಮದ ಮುಖಂಡರು ಇದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.










