ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಜುಲೈ. 25 : ರಾಷ್ಟ್ರೀಯ ಹೆದ್ದಾರಿ-13 ಪಿಳ್ಳೆಕೆರನಹಳ್ಳಿಯಲ್ಲಿರುವ ಬಾಪೂಜಿ ಪಬ್ಲಿಕ್ ಸ್ಕೂಲ್ ಹಾಗೂ ಬಾಪೂಜಿ ಬಟರ್ ಕಪ್ಸ್ ಟೂನ್ಸ್ ಮಾಂಟೇಸರಿಯಲ್ಲಿ ಶುಕ್ರವಾರ ಮಕ್ಕಳಿಗೆ ಉಚಿತ ವೈದ್ಯಕೀಯ ತಪಾಸಣೆ ನಡೆಸಲಾಯಿತು.
ಮಕ್ಕಳ ತಜ್ಞ ಡಾ. ಪ್ರವೀಣ್ ಆರೋಗ್ಯ ತಪಾಸಣೆ ನಡೆಸಿ ಮಾತನಾಡುತ್ತ ಮಕ್ಕಳಿಗೆ ಶಿಕ್ಷಣ ಎಷ್ಟು ಮುಖ್ಯವೋ ಆರೋಗ್ಯಕ್ಕೂ ಅಷ್ಟೆ ಮಹತ್ವ ಕೊಡಬೇಕು. ಇತ್ತೀಚಿನ ದಿನಗಳಲ್ಲಿ ಚಿಕ್ಕ ಚಿಕ್ಕ ಮಕ್ಕಳು ಹೃದಯಾಘಾತಕ್ಕೊಳಗಾಗುತ್ತಿರುವುದು ಆಘಾತದ ಸಂಗತಿ. ಹಾಗಾಗಿ ನಿರ್ಲಕ್ಷೆ ಮಾಡುವ ಬದಲು ಮಕ್ಕಳ ಆರೋಗ್ಯ ತಪಾಸಣೆ ನಡೆಸುವುದು ಉತ್ತಮ ಎಂದು ಹೇಳಿದರು.
ಬಾಪೂಜಿ ಶಿಕ್ಷಣ ಮಹಾವಿದ್ಯಾಲಯದ ಕಾರ್ಯದರ್ಶಿ ಡಾ.ಕೆ.ಎಂ.ವೀರೇಶ್, ನಿರ್ದೇಶಕ ಚೇತನ್, ಮೇಘನಾ ಚೇತನ್ ಹಾಗೂ ಶಿಕ್ಷಕ ವೃಂದದವರು ಆರೋಗ್ಯ ತಪಾಸಣೆ ಸಂದರ್ಭದಲ್ಲಿ ಹಾಜರಿದ್ದರು.


