Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕರ್ನಾಟಕ ನಂಬರ್ 1 ಆಗಿದ್ದೇ ನಮ್ಮ ಗ್ಯಾರಂಟಿಗಳಿಂದ : ಸಿಎಂ ಸಿದ್ದರಾಮಯ್ಯ

---Advertisement---

ಮಂಡ್ಯ: ಜಿಲ್ಲೆಯ ಸಾಧನಾ ಸಮಾವೇಶದಲ್ಲಿ ತಮ್ಮ ಗ್ಯಾರಂಟಿಗಳ ಬಗ್ಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಹಾಲು ಉತ್ಪಾದಕರ ಸಹಕಾರ ಸಂಘ ಎಷ್ಟು 12 ಲಕ್ಷ. 5 ರೂಪಾಯಿ ಕೊಟ್ಟವರು ಯಾರು..? ಒಂದು ಲೀಟರ್ ಹಾಲಿಗೆ ಐದು ರೂಪಾಯಿ, ಸುಮಾರು ಒಂದು ಲಕ್ಷ ಕುಟುಂಬ ಹಾಲಾಕುತ್ತೆ. ಐದು ರೂಪಾಯಿ ಕೊಟ್ಟವರು ಇದೇ ಸಿದ್ದರಾಮಯ್ಯ ಎಂಬುದನ್ನ ಮರೆಯುವುದಕ್ಕೆ ಸಾಧ್ಯವಿಲ್ಲ. ಈ ವರ್ಷ ಶುಗರ್ ಫ್ಯಾಕ್ಟರಿಗೆ ಈಗ ಹತ್ತು ಕೋಟಿ ರೂಪಾಯಿ ಕೊಟ್ಟಿದ್ದೇವೆ. ಒಟ್ಟು 112 ಕೋಟಿ ರೂಪಾಯಿಯನ್ನ ಶುಗರ್ ಫ್ಯಾಕ್ಟರಿ ಕೊಟ್ಟಿರುವ ಸರ್ಕಾರ ಇದ್ದರೆ ಅದು ನಮ್ಮ ಸರ್ಕಾರ ಅಂತ ಹೇಳ್ತೇನೆ.

ನಮ್ಮ ಪಕ್ಷ ಯಾವಾಗ ಅಧಿಕಾರಕ್ಕೆ ಬಂತು, ನಾನು ಸಿಎಂ ಆದ ಎರೆಉ ಅವಧಿಯಲ್ಲಿ ಬಡವರ ಪರ, ದಲಿತರ ಪರ, ಹಿಂದುಳಿದ, ಅಲ್ಪಸಂಖ್ಯಾತ, ಮಹಿಳೆಯರು, ಕಾರ್ಮಿಕರ ಪರ ಅನೇಕ ಯೋಜನೆಗಳನ್ನ ಕೊಟ್ಟಿದ್ದೇವೆ. ನಮ್ಮ ಉದ್ದೇಶ ಅಸಮಾನತೆಯನ್ನು ತೊಡೆದು ಹಾಕಬೇಕು, ಜಾತಿ ವ್ಯವಸ್ಥೆ ಹೋಗಬೇಕು. ಸಮಾಜದಲ್ಲಿ ಸಮಾನತೆಯನ್ನು ಎಲ್ಲರು ಪಡೆದುಕೊಳ್ಳಬೇಕು ಎಂಬುದು ನಮ್ಮ ಉದ್ದೇಶ ಎಂದು ತಮ್ಮ ಗ್ಯಾರಂಟಿಗಳ ಬಗ್ಗೆ ಮಾತನಾಡಿದ್ದಾರೆ.

ಇದೆ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರಿಗೆ ತಿರುಗೇಟು ನೀಡಿದ ಸಿಎಂ ಸಿದ್ದರಾಮಯ್ಯ ಅವರು, 6 ಲಕ್ಷದ 82 ಸಾವಿರ ಲಕ್ಷ ಟನ್ ಕೊಡಬೇಕಿತ್ತು. ಆದರೆ ಕೇಂದ್ರ ಸರ್ಕಾರ ಕೇವಲ 5 ಲಕ್ಷದ 27 ಸಾವಿರ ಮೆಟ್ರಿಕ್ ಟನ್ ಗೊಬ್ಬರವನ್ನು ಕೊಟ್ಟಿದೆ ಎಂದು ಗೊಬ್ಬರದ ವಿಚಾರವಾಗಿ ಮಾತನಾಡುತ್ತಿರುವ ಬಿಜೆಪಿ ಪಕ್ಷದ ಮಾತುಗಳಿಗೆ ತಿರುಗೇಟು ನೀಡಿದ್ದಾರೆ. ಬಿಜೆಪಿ ನಾಯಕರು ಮೊದಲು ಗೊಬ್ಬರ ಕೊಡಿ ಅಂತ ಕಾಂಗ್ರೆಸ್ ನಾಯಕರಿಗೆ ಟಾಂಗ್ ಕೊಡುತ್ತಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment