Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಇಂದಿನಿಂದ ಸಚಿವರು, ಶಾಸಕರ ಸಭೆ : ಡಿಕೆಶಿ ಗೈರಿನ ಬಗ್ಗೆ ಪರಮೇಶ್ವರ್ ಏನಂದ್ರು..?

---Advertisement---

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಇಂದಿನಿಂದ ನಾಲ್ಕು ದಿನಗಳ ಕಾಲ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಶಾಸಕರ ಜೊತೆಗೆ ಸಭರ ನಡೆಸಲಿದ್ದಾರೆ. ಮೈಸೂರಿನಿಂದಲೇ ಮೊದಲ ಸಭೆ ಆರಂಭಿಸಲಿದ್ದಾರೆ. ಶಾಸಕರಿಗೆ ತಲಾ 50 ಕೋಟಿ ರೂಪಾಯಿ ಅನುದಾನವನ್ನು ಬಿಡುಗಡೆ ಮಾಡಿ ಮುಖ್ಯಮಂತ್ರಿಗಳು ಕೆಲವು ದಿನಗಳ ಹಿಂದೆ ಆದೇಶ ಹೊರಡಿಸಿದ್ದರು. ಆ ಸಂಬಂಧ ಸಚಿವರು, ಶಾಸಕರ ಜೊತೆಗೆ ಚರ್ಚೆ ನಡೆಸಲಿದ್ದಾರೆ.

ಉಸ್ತುವಾರಿ ಸಚಿವರು, ಶಾಸಕರ ಜೊತೆಗಿನ ಸಭೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಇರುವುದಿಲ್ಲ ಎಂಬುದು ತಿಳಿದು ಬಂದಿದೆ. ಸಭೆಗೆ ಆಹ್ವಾನ ನೀಡದೆ ಇರುವುದಕ್ಕೆ ಡಿಕೆಶಿ ಅಸಮಾಧಾನಗೊಂಡಿದ್ದಾರೆಎ ಅಂತಾನು ಮೂಲಗಳು ಹೇಳ್ತಾ ಇದೆ. ಕೆಲ ಶಾಸಕರ ಬಳಿ ಈ ಬಗ್ಗೆ ಬೇಸರವನ್ನು ಹೊರ ಹಾಕಿದ್ದಾರೆ ಎನ್ನಲಾಗಿದೆ.

ಇನ್ನು ಸಭೆಗೆ ಡಿಕೆ ಶಿವಕುಮಾರ್ ಬಾರದೆ ಇರುವುದರ ಬಗ್ಗೆ ಗೃಹ ಸಚಿವ ಜಿ ಪರಮೇಶ್ವರ್ ಮಾತನಾಡಿದ್ದಾರೆ. ಮುಖ್ಯಮಂತ್ರಿಗಳು ಇವತ್ತು ನಮ್ಮ ಪಕ್ಷದ ಶಾಸಕರ ಜೊತೆಗೆ ಜಿಲ್ಲಾವಾರು ಕರೆದು ಮಾತನಾಡುತ್ತಿದ್ದಾರೆ. ಉದ್ದೇಶ ಏನು ಅಂದ್ರೆ ಅವರವರ ಕ್ಷೇತ್ರದಲ್ಲಿ ಒಬ್ಬೊಬ್ಬರಿಗೆ 50 ಕೋಟಿ ಕೊಡಬೇಕೆಂದು ನಿರ್ಧಾರ ಮಾಡಿದ್ದಾರೆ. ಅದುಒಂದು ಭಾಗ. ಮತ್ತು ಬೇರೆ ಬೇರೆ ಕೆಲಸಗಳ ಬಗ್ಗೆ, ಪಕ್ಷದ ಸಂಘಟನೆ ಬಗ್ಗೆ ಅವರು ಮತ್ತು ನಮ್ಮ ಅಧ್ಯಕ್ಷರು ಮಾತನಾಡುವ ಕಾರ್ಯಕ್ರಮ ಹಾಕಿಕೊಂಡಿದ್ದಾರೆ. ಇದು ಹೊಸದೇನು ಅಲ್ಲ. ಹಿಂದೆ ಕೂಡ 2013-15,18 ರಲ್ಲಿ ಇರುವಾಗಲೂ ಮಾಡಿದ್ದರು. ನಾನು ಅಧ್ಯಕ್ಷನಾಗಿದ್ದೆ. ಆಗ ಮುಖ್ಯಮಂತ್ರಿಗಳೇ ಕೆಪಿಸಿಸಿ ಕಚೇರಿಗೆ ಬಂದು ಅಹವಾಲನ್ನ ಕೇಳಿದ್ದರು. ಈಗ ಐದು ವರ್ಷದ ಅವಧಿಯಲ್ಲಿ ಮಧ್ಯಕ್ಕೆ ಬಂದಿದ್ದೇವೆ. ಈಗ ಇದು ಒಳ್ಳೆಯದು. ಡಿಕೆ ಶಿವಕುಮಾರ್ ಅವರು ಸಹ ಇರ್ತಾರೆ. ಅವರಿಗೇನೋ ಆರೋಗ್ಯ ಸರಿ ಇಲ್ಲ ಅಂತಿದ್ರು. ಸ್ವಲ್ಪ ದಿನ ಡೆಂಗ್ಯೂ ಆಗಿತ್ತು. ಅವ್ರು ಇರ್ತಾರೆ ಅಂದ್ಕೊಂಡಿದ್ದೀನಿ ಎಂದಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...