Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ತೆಂಗು ನಾಟಿ ಮಾಡ್ತಾ ಇದ್ದೀರಾ..? ಹಾಗಾದ್ರೆ ನಿಮ್ಗೆ ಸಿಗುತ್ತೆ 56 ಸಾವಿರ : ಹೇಗೆ ಗೊತ್ತಾ..?

---Advertisement---

ರೈತರು ನೆಮ್ಮದಿಯಾಗಿದ್ರೆ ದೇಶ ಸಂತೃಪ್ತವಾಗಿ ಇರುತ್ತದೆ. ಜನರ ಹೊಟ್ಟೆ ತುಂಬುತ್ತದೆ. ಹೀಗಾಗಿಯೇ ಸರ್ಕಾರ ರೈತರಿಗೆ ಅನುಕೂಲವಾಗುವಂತ ಯೋಜನೆಗಳನ್ನ ನೀಡುತ್ತಾ ಇರುತ್ತದೆ. ಸಹಾಯಧನಗಳನ್ನು ಕೊಡ್ತಾ ಇರುತ್ತದೆ. ಇದೊಇಗ ತೋಟಗಾರಿಕಾ ಇಲಾಖೆಯಿಂದ ತೆಂಗು ನಾಟಿನಮಾಡಿದವರಿಗೆ ಗುಡ್ ನ್ಯೂಸ್ ಒಂದು ಸಿಕ್ಕಿದೆ. ಸಹಾಯಧನದ ರೂಪದಲ್ಲಿ 56 ಸಾವಿರ ರೂಪಾಯಿ ಸಿಗಲಿದೆ. ಅದೇಗೆ..? ಅದಕ್ಕೆ ಏನು ಮಾಡಬೇಕು ಎಂಬ ಮಾಹಿತಿ ಇಲ್ಲಿದೆ.

2025ನೇ ಸಾಲಿನ ತೆಂಗು ಅಭಿವೃದ್ಧಿ ಮಂಡಳಿ ಯೋಜನೆಯಡಿ ಹೊಸದಾಗಿ ತೆಂಗು ನಾಟಿ ಮಾಡಿದವರಿಗೆ ಈ ಸಹಾಯಧನ ಸಿಗುತ್ತಿದೆ. ಹೊಸ ಭಾಗಗಳಲ್ಲಿ ತೆಂಗು ನಾಟಿ ಮಾಡಿದರೆ 28 ಸಾವಿರ ರೂಪಾಯಿ ಪ್ರತಿ ಹೆಕ್ಟೇರ್ ಗೆ ನೀಡಲಾಗುತ್ತದೆ. ವರ್ಷಕ್ಕೆ ಒಟ್ಟಾರೆ 56 ಸಾವಿರ ರೂಪಾಯಿ ಸಹಾಯಧನ ಸಿಗಲಿದೆ. ತೆಂಗು ಬೆಳೆಯನ್ನ ಹೊಸ ಪ್ರದೇಶದಲ್ಲಿ ನಾಟಿ ಮಾಡಿದರೆ ಮಾತ್ರ ಸಹಾಯಧನಕ್ಕೆ ಅರ್ಹರಾಗಿರುತ್ತಾರೆ.

ಇಲ್ಲಿ ಷರತ್ತುಗಳು ಅನ್ವಯವಾಗುತ್ತವೆ. ಬದುಗಳ ಅಂಚಿನಲ್ಲಿ ನಾಟಿ ಮಾಡಿದರೆ ಅದನ್ನು ಪರಿಗಣಿಸುವುದಿಲ್ಲ. ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್, ರಾಷ್ಟ್ರೀಕೃತ ಬ್ಯಾಂಕ್ ನ ಪಾಸ್ ಪುಸ್ತಕದ ಜೆರಾಕ್ಸ್, ಅಧಿಕೃತ ಸಸ್ಯ ನಾಟು ಮಾಡುವುದರಿಂದ ಖರೀದಿಸಿದ ಸಸಿ ಖರೀದಿ ಬಿಲ್ಲು ಹಾಗೂ ಅರ್ಜಿಯೊಂದಿಗೆ ತಮ್ಮ ತಾಲೂಕು ತೋಟಗಾರಿಕೆ ಇಲಾಖೆ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ. ಅಥವಾ ತಮ್ಮ ಊರ ಬಳಿಯ ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿಯನ್ನು ಸಂಪರ್ಕ ಮಾಡುವುದಕ್ಕೆ ಉಪನಿರ್ದೇಶಕ ರಾಘವೇಂದ್ರ ಪ್ರಸಾದ್ ತಿಳಿಸಿದ್ದಾರೆ. ಒಟ್ಟಾರೆ ಹೊಸದಾಗಿ ತೆಂಗು ನಾಟಿ ಮಾಡುವವರಿಗೆ ಸ್ವಲ್ಪ ಹಣದ ಸಹಾಯ ಈ ಮೂಲಕ ಆಗಲಿದೆ. ರೈತರು ಈಗಲೇ ತಮ್ಮ ಹತ್ತಿರದ ಕೃಷಿ ಇಲಾಖೆಗೆ ಸಂಪರ್ಕ ಮಾಡುವುದು ಒಳ್ಳೆಯದು‌.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment