ಬೆಂಗಳೂರು: ಈ ಹಿಂದೆ ಕಾಂಗ್ರೆಸ್ ಪಕ್ಷದಲ್ಲಿ ಕಷಚಟಪಟ್ಟು ಪಕ್ಷ ಕಟ್ಟಿದರು ಆ ಕ್ಷಣದಲ್ಲಿ ಎಸ್ ಎಂ ಕೃಷ್ಣ ಅವರು ಸಿಎಂ ಆದ್ರೂ. ಅವರಿಗೆ ಮುಖ್ಯಮಂತ್ರಿಯಾಗುವ ಅವಕಾಶ ಮಿಸ್ ಆಯ್ತು. ಈ ಸಂಬಂಧ ಇತ್ತೀಚೆಗಷ್ಟೇ ನೋವನ್ನು ಕೂಡ ಹೊರ ಹಾಕಿದ್ರು. ಇದೀವ ಸಿಎಂ ಆಕಾಂಕ್ಷಿಯಾಗಿರುವ ಡಿಸಿಎಂ ಡಿಕೆ ಶಿವಕುಮಾರ್ ಈ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.
ಅವರ ನೋವು, ಅವರ ಭಾವನೆಯನ್ನು ಹೇಳಿಕೊಳ್ಳುವುದರಲ್ಲಿ ತಪ್ಪೇನಿದೆ. ಅವರು ಒಬ್ಬ ಹಿರಿಯ ನಾಯಕರು, ನಮ್ಮಪಕ್ಷಕ್ಕಾಗಿ ದುಡಿದಿದ್ದಾರೆ. ಅದರಲ್ಲೇನು ತಪ್ಪಿಲ್ಲ ಎಂದಿದ್ದಾರೆ. ಇದರ ನಡುವೆ ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯ ರಾಜಕಾರಣಕ್ಕೆ ಬರ್ತಾರೆ ಎಂಬ ಚರ್ಚೆಯೂ ಆಗ್ತಾ ಇದೆ. ಆ ಬಗ್ಗೆ ಮಾತನಾಡಿದ ಡಿಕೆ ಶಿವಕುಮಾರ್, ಚರ್ಚೆ ಮಾಡ್ತಾ ಇರಲಿ. ಚರ್ಚೆ ಮಾಡುವುದರಲ್ಲಿ ತಪ್ಪೇನಿದೆ. ಅವರವರ ಅಭಿಪ್ರಾಯ ತಿಳಿಸುತ್ತಾರೆ. ಆದ್ರೆ ಅದನ್ನ ಪಬ್ಲಿಕ್ ನಲ್ಲಿ ಮಾತನಾಡುವುದು ತಪ್ಪು ಎಂದಿದ್ದಾರೆ.

ಇದೇ ವೇಳೆ ಇಂದಿನ ಸಚಿವರು, ಶಾಸಕರ ಸಭೆಗೆ ಆಹ್ವಾನ ಇಲ್ಲದೆ ಇರುವುದರ ಬಗ್ಗೆ ಮಾತನಾಡಿ, ಸಿಎಂ ಅವರಿಗೆ ಏನು ಅಧಿಕಾರ ಇದೆ ಅದರಿಂದ ಕೆಲವು ಎಂಎಲ್ಎ ಗಳಿಗೆ ಏನು ಸಮಸ್ಯೆ ಇದೆ ಅದನ್ನ ಕೇಳುವುದಕ್ಕೋಸ್ಕರ ಈ ಸಭೆ ಮಾಡ್ತಾ ಇದ್ದಾರೆ. ನಮ್ಮ ಸುರ್ಜೆವಾಲ ಸಾಹೇಬ್ರು ಅನೇಕ ಸಮಸ್ಯೆಗಳನ್ನ ಅವರ ಗಮನಕ್ಕೆ ತಂದಿದ್ದಾರೆ. ನಮ್ಮ ಎದುರಿಗೆ ಕರೆದು ಮಾತನಾಡಿದ್ದಾರೆ. ನಮಗೆ ಅದೆಲ್ಲ ಏನು ಕಷ್ಟ ಇಲ್ಲ. ನಿಮಗೆ ಕಷ್ಟ ಅಂತ ಕಾಣಿಸ್ತಾ ಇದೆ. ಇವತ್ತು ನಂಗೆ ಒಂದು ಮೀಟಿಂಗ್ ಇದೆ ಎಂದಿದ್ದಾರೆ. ಈ ಮೂಲಕ ಸಭೆಗೆ ಆಹ್ವಾನ ನೀಡದೆ ಇದ್ದರು ನನಗೇನು ಬೇಸರವಿಲ್ಲ ಎಂಬ ಮಾತನ್ನ ಹೇಳಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

















