Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನೀರಾವರಿ ಸಚಿವ ಮಾಧುಸ್ವಾಮಿ ಮತ್ತೊಮ್ಮೆ ಕಣ್ಣೀರು..!

Facebook
Twitter
Telegram
WhatsApp

ತುಮಕೂರು: ತಮ್ಮೂರಿಗೆ ನೀರಾವರಿ ಯೋಜನೆ ಜಾರಿ ಮಾಡುವ ವಿಚಾರದಲ್ಲಿ ಗೆದ್ದಿರುವ ಸಚಿವ ಮಾಧುಸ್ವಾಮಿ ಆ ವಿಚಾರಕ್ಕೆ ಮತ್ತೆ ಎಮೋಷನಲ್ ಆಗಿದ್ದಾರೆ. ಮಾತನಾಡುವಾಗ ಕಣ್ಣೀರು ಹಾಕಿರುವ ಘಟನೆ ನಡೆದಿದೆ.

ಇಂದು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಪಟ್ಟಣದ ಸಮೀಪ ಇರುವ ತಿಮ್ಲಾಪುರ ಕೆರೆ ತುಂಬಿದ ಹಿನ್ನೆಲೆ ಇಂದು ಗೌರಾರ್ಪಣೆ ಕಾರ್ಯಕ್ರಮ ನಡೆದಿದೆ. ಈ ಕಾರ್ಯಕ್ರಮದಲ್ಲಿ ಮಾತನಾಡುವಾಗ ಮಾಧುಸ್ವಾಮಿ ಕಣ್ಣಲ್ಲು ನೀರು ಬಂದಿದೆ. ನಾನು ಹಠ ಮಾಡಿದ್ದು ತಿಮ್ಲಾಪುರ ಕೆರೆಗೆ ನೀರು ತರುತ್ತೇನೆ ಎಂದು. ಶೆಟ್ಟಿಕೆರೆಗೆ ಅಲ್ಲ. ಯಾಕಂದ್ರೆ ತಿಮ್ಲಾಪುರ ಕೆರೆ ನಂಬಿಕೊಂಡು ಸಾಕಷ್ಟು ಹಿಂದುಳಿದ ವರ್ಗದವರಿದ್ದಾರೆ.

ನಾನು ಈ ಕೆರೆಯ ಬಗ್ಗೆಯಷ್ಟೇ ಮಾತನಾಡುತ್ತಿದ್ದೇನೆ ಎಂದರೆ ಆ ಕೆರೆಯಿಂದ ಎಷ್ಟು ಜನರಿಗೆ ಉಪಯೋಗವಾಗಿದೆ ಎಂದು ಅರ್ಥ. ಎಲ್ಲೆಲ್ಲಿ ಏನು ಮಾಡಬೇಕು..? ಅದರಿಂದಾಗುವ ಅನುಕೂಲವೇನು ಅನ್ನೋದು ಎಲ್ಲಾ ರಾಜಕಾರಣಿಗಳಿಗೂ ಗೊತ್ತಿರಬೇಕು. ಆ ರೀತಿ ಯೋಚಿಸಿದಾಗ ಜಾರಿಗೆ ತರುವ ಯೋಜನೆಗಳು ಯಶಸ್ವಿಯಾಗುತ್ತವೆ ಎಂದು ಖುಷಿಯಿಂದ ತಮ್ಮ ಯೋಜನೆ ಬಗ್ಗೆ ಹೇಳಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಮೇ 1ರಂದು ವಿದ್ಯುತ್ ವ್ಯತ್ಯಯ

ಚಿತ್ರದುರ್ಗ. ಏ.30: ಚಿತ್ರದುರ್ಗ ವಿಭಾಗ ವ್ಯಾಪ್ತಿಯಲ್ಲಿರುವ ಪಂಡರಹಳ್ಳಿ ಲೈನ್‍ನ ಟ್ಯಾಪಿಂಗ್ ಪಾಯಿಂಟ್‍ನಿಂದ ಪಂಡರಹಳ್ಳಿ 66/11 ಕೆವಿ ವಿ.ವಿ ಕೇಂದ್ರದವರೆಗೆ ಡ್ರೇಕ್ ಕಂಡಕ್ಟರ್ ಬಳಸಿ ಉದ್ದೇಶಿತ 66 ಕೆವಿ ಲೈನ್ ಮತ್ತು ಕೊಯೊಟ್ ಕಂಡಕ್ಟರ್ ಬಳಸಿ

ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು : ಕೋರ್ ಕಮಿಟಿಯಲ್ಲಿ ತೀರ್ಮಾನ

ಹುಬ್ಬಳ್ಳಿ: ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷದಿಂದ ಅಮಾನತು ಮಾಡಲಾಗಿದೆ. ಜಿ.ಟಿ ದೇವೇಗೌಡರ ನೇತೃತ್ವದ ಕೋರ್ ಕಮಿಟಿಯಲ್ಲಿ ಈ ಸಂಬಂಧ ನಿರ್ಧಾರವಾಗಿದ್ದು, ಅಮಾನತು ಮಾಡಲಾಗಿದೆ. ಈ ಸಂಬಂಧ

ಬಿಜೆಪಿ ನಾಯಕನಿಗೆ ಮಾತ್ರ ಪೆನ್ ಡ್ರೈವ್ ಕೊಟ್ಟಿದ್ದೆ : ಶಾಕಿಂಗ್ ವಿಡಿಯೋ ಬಿಟ್ಟ ಡ್ರೈವರ್ ಕಾರ್ತಿಕ್

ಹಾಸನ: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ದಿನೇ ದಿನೇ ಹಲವು ವಿಚಾರಗಳು ಹೊರಗೆ ಬರುತ್ತಿವೆ. ನಿನ್ನೆಯಷ್ಟೇ ವಕೀಲ, ಬಿಜೆಪಿ ನಾಯಕ ದೇವರಾಜೇಗೌಡ, ಪೆನ್ ಡ್ರೈವ್ ವಿಚಾರವಾಗಿ ಮಾತನಾಡಿ, ಕಾರ್ತಿಕ್ ಬಳಿ ಪೆನ್ ಡ್ರೈವ್

error: Content is protected !!