Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ | ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಸೇವೆಯಿಂದ ವಜಾ : ಡಾ. ಕೆ.ನಂದಿನಿದೇವಿ ಆದೇಶ

Facebook
Twitter
Telegram
WhatsApp

ಚಿತ್ರದುರ್ಗ, (ಡಿಸೆಂಬರ್.31) : ಚಳ್ಳಕೆರೆ ತಾಲ್ಲೂಕಿನ ಪರಶುರಾಂಪುರ ಗ್ರಾಮ ಪಂಚಾಯಿತಿ ಗ್ರೇಡ್-1 ಗ್ರಾಮ ಪಂಚಾಯಿತಿ ಕಾರ್ಯದರ್ಶಿಯಾಗಿದ್ದ ಎಂ.ಎಸ್.ಮೋಕ್ಷಕುಮಾರ್ ಇವರನ್ನು ಸೇವೆಯಿಂದ ವಜಾಗೊಳಿಸಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಶಿಸ್ತು ಪ್ರಾಧಿಕಾರಿಯಾದ ಡಾ; ಕೆ.ನಂದಿನಿದೇವಿ ಆದೇಶಿಸಿದ್ದಾರೆ.

ಇವರು ಅನಧಿಕೃತ ಗೈರು ಹಾಜರು ಹಾಗೂ ದುರ್ನಡತೆ ಸೇರಿದಂತೆ ಅನೇಕ ಭಾರಿ ಅನಧಿಕೃತ ನಡತೆಯಿಂದ ಸೇವೆಯಲ್ಲಿ ಹಲವು ಭಾರಿ ಎಚ್ಚರಿಕೆ, ವಾಗ್ದಂಡನೆಗೆ ಗುರಿಯಾಗಿರುವರು. 2013ರ ಸೆಪ್ಟೆಂಬರ್ ನಿಂದ 2014 ರ ಮೇ ವರೆಗೆ ಗೈರು ಹಾಜರಾಗಿದ್ದು ಈ ಸಮಯದಲ್ಲಿ ನಕಲಿ ದಾಖಲೆಗಳನ್ನು ಸಲ್ಲಿಸಿ ಗೈರು ಹಾಜರಿಗೆ ಸಂಬಂಧಿಸಿದಂತೆ ವೇತನ ನೀಡಲು ಮನವಿ ಮಾಡಿರುತ್ತಾರೆ. ಪರಿಶೀಲನೆ ವೇಳೆ ಇದು ನಕಲಿ ದಾಖಲೆಗಳನ್ನು ಸಲ್ಲಿಸಿರುವುದು ಕಂಡು ಬಂದಿರುತ್ತದೆ.

ಆದರೆ ನನಗೆ ವೇತನ ನೀಡಿರುವುದಿಲ್ಲ, ಇದಕ್ಕಾಗಿ ನನ್ನ ಕಿಡ್ನಿ ದಾನ ಮಾಡುವುದಾಗಿ ಟಿ.ವಿ.ಮತ್ತು ಪತ್ರಿಕೆಗಳಲ್ಲಿ ಸುದ್ದಿಯನ್ನು ನೀಡಲು ಪ್ರಕಟಣೆ ನೀಡಿದ್ದರು. ಮತ್ತು ಇವರಿಗೆ ಅವರ ದುರ್ನಡತೆ ಬಗ್ಗೆ ಹಲವು ಭಾರಿ ನೋಟಿಸ್ ನೀಡಿದ್ದರೂ ಸಮರ್ಪಕವಾದ ಉತ್ತರ ನೀಡದೆ ಅಸಂಬದ್ದವಾದ ಉತ್ತರವನ್ನು ನೀಡಿರುತ್ತಾರೆ.

ಈ ಬಗ್ಗೆ ತನಿಖೆ ನಡೆಸಲು ನಿವೃತ್ತ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರನ್ನು ನೇಮಕ ಮಾಡಲಾಗಿತ್ತು. ಅವರು ನೀಡಿದ ಅಂತಿಮ ತನಿಖಾ ವರದಿಯನ್ವಯ ಎಂ.ಎಸ್.ಮೋಕ್ಷಕುಮಾರ್ ಇವರನ್ನು ಸೇವೆಯಿಂದ ವಜಾಗೊಳಿಸಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಶಿಸ್ತು ಪ್ರಾಧಿಕಾರಿ ಡಾ. ಕೆ.ನಂದಿನಿದೇವಿ ಆದೇಶಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕರ್ನಾಟಕದಲ್ಲಿಯೇ ತೀರ್ಥಹಳ್ಳಿಯಲ್ಲಿ ಬೆಳೆಯುವ ಅಡಿಕೆ ಬೆಸ್ಟ್ : ಸಂಶೋಧನೆಯಲ್ಲಿ ಬಯಲಾಯ್ತು ಸತ್ಯ

  ಶಿವಮೊಗ್ಗ: ಮಲೆನಾಡು ಭಾಗದಲ್ಲಿ ಹೆಚ್ಚಾಗಿ ಅಡಿಕೆಯನ್ನು ಬೆಳೆಯುತ್ತಾರೆ. ಆದರೆ ರಾಜ್ಯದೆಲ್ಲೆಡೆ ಆಲ್ಮೋಸ್ಟ್ ಎಲ್ಲಾ ಜಿಲ್ಲೆಯಲ್ಲೂ ಅಡಿಕೆ ತೋಟವನ್ನು ಮಾಡಿರುತ್ತಾರೆ. ಆದರೆ ಅಡಿಕೆಯ ಗುಣಮಟ್ಟದ ವಿಚಾರಕ್ಕೆ ಬಂದರೆ ತೀರ್ಥಹಳ್ಳಿಯ ಅಡಿಕೆ ಉತ್ತಮ ಎನ್ನಲಾಗುತ್ತದೆ. ಕೃಷಿ

ಅಕ್ಷಯ ತೃತೀಯಕ್ಕೆ ಚಿನ್ನದ ಬೆಲೆ ಬಲು ದುಬಾರಿ.. ಏರುತ್ತಲೆ ಇದೆ ದರ..!

ಅಕ್ಷಯ ತೃತೀಯಕ್ಕೆ ಚಿನ್ನದ ಬೆಲೆ ಬಲು ದುಬಾರಿ.. ಏರುತ್ತಲೆ ಇದೆ ದರ..! ಬಂಗಾರ ಅಂದ್ರೆ ಯಾರಿಗೆ ಇಷ್ಟವಿಲ್ಲ ಹೇಳಿ. ಬಂಗಾರವನ್ನು ತೆಗೆದುಕೊಳ್ಳಬೇಕೆಂದು ಎಲ್ಲರಿಗೂ ಆಸೆ‌. ಆದರೆ ಇತ್ತಿಚಿನ ದಿನಗಳಲ್ಲಿ ಬಂಗಾರವನ್ನು ಮಧ್ಯಮವರ್ಗದವರು ಮುಟ್ಟುವುದಕ್ಕಾದರೂ ಸಾಧ್ಯವ..?

ಹಸಿಮೆಣಸಿನಕಾಯಿ ಗ್ಯಾಸ್ಟ್ರಿಕ್ ಅಲ್ಲ.. ಇದರಿಂದ ಇದೆ ಅನೇಕ ಲಾಭಗಳು

ಸುದ್ದಿಒನ್ : ಹಸಿರು ಮೆಣಸಿನಕಾಯಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಅರೋಗ್ಯದ ದೃಷ್ಟಿಯಿಂದ ಇದು ಅನೇಕ ಪ್ರಯೋಜನಗಳನ್ನು ಹೊಂದಿದೆ. ಹಸಿರು ಮೆಣಸು ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ ಮತ್ತು ಕಣ್ಣಿನ ದೃಷ್ಟಿ ಸುಧಾರಿಸುತ್ತದೆ. ಕಣ್ಣಿನ ಸಮಸ್ಯೆಗಳನ್ನು

error: Content is protected !!