ಬೆಂಗಳೂರು: ಈ ಬಾರಿ ಜಾಮೀನು ಸಿಗಲಿದೆ, ಹೊರ್ಎ ಬಂದು ಮತ್ತೆ ಹೊಸ ರಾಜಕೀಯ ಜೀವನ ಶುರು ಮಾಡಬಹುದು ಎಂದುಕೊಂಡಿದ್ದ ಪ್ರಜ್ವಲ್ ರೇವಣ್ಣನಿಗೆ ತೀರಾ ಹಿನ್ನಡೆಯಾಗಿದೆ. ಕೋರ್ಟ್ ನಿಂದ ಅಪರಾಧಿ ಎಂದು ಘೋಷಣೆಯಾಗಿದೆ. ಅತ್ಯಾಚಾರ ಆರೋಪದ ಪ್ರಕರಣದ ತನಿಖೆ ನಡೆಸುತ್ತಿದ್ದ ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್, ಮಹತ್ವದ ತೀರ್ಪು ಪ್ರಕಟಿಸುವ ಮೂಲಕ ಬಿಗ್ ಶಾಕ್ ನೀಡಿದೆ.
ಅತ್ಯಾಚಾರ ಕೇಸಲ್ಲಿ ಪ್ರಜ್ವಲ್ ಅವರನ್ನ ಕೋರ್ಟ್ ಇಂದು ಅಪರಾಧಿ ಎಂದು ತೀರ್ಪು ನೀಡಿದ್ದು, ನಾಳೆ ಶಿಕ್ಷೆಯ ಪ್ರಮಾಣವನ್ನು ಪ್ರಕಟಣೆ ಮಾಡಲಿದೆ. ಪ್ರಜ್ವಲ್ ರೇವಣ್ಣ ವಿರುದ್ಧ ನಾಲ್ಕು ಕೇಸ್ ಗಳು ದಾಖಲಾಗಿದ್ದವು. ಈ ಕೇಸಲ್ಲಿ ಒಂದು ಪ್ರಕರಣದ ತೀರ್ಪು ಮಾತ್ರ ಬಂದಿದೆ. ಮನೆ ಕೆಲಸದಾಕೆ ನೀಡಿದ ದೂರಿನಲ್ಲಿ ಆರೋಪ ಸಾಬೀತಾದ ಹಿನ್ನೆಲೆ ಅಪರಾಧಿ ಎಂದು ತೀರ್ಪು ನೀಡಿದೆ.
ಎರಡು ಕಡೆಯ ವಕೀಲರ ವಾದವನ್ನ ಆಲಿಸಿದ್ದ ನ್ಯಾಯಾಧೀಶರು, ತೀರ್ಪನ್ನು ನೀಡಿದ್ದಾರೆ. ಅಪರಾಧಿ ಎಂದು ಸಾಬೀತಾದ ಹಿನ್ನೆಲೆ ಪ್ರಜ್ವಲ್ ರೇವಣ್ಣನಿಗೆ ದೊಡ್ಡ ಹಿನ್ನಡೆಯಾಗಿದೆ. ನಾಳೆ ಶಿಕ್ಷೆಯ ಪ್ರಮಾಣ ಪ್ರಕಟವಾಗಲಿದೆ. ಶಿಕ್ಷೆಯ ಪ್ರಮಾಣಕ್ಕೂ ಮುನ್ನ ಕೂಡ ವಾದ ಪ್ರತಿವಾದವನ್ನು ಕೋರ್ಟ್ ಆಲಿಸಲಿದೆ. ಈ ವೇಳೆ ಪ್ರಜ್ವಲ್ ರೇವಣ್ಣ ಅವರ ಪರ ವಕೀಲರು ಕೋರ್ಟ್ ಗೆ ಮನವಿಯನ್ನು ಮಾಡಬಹುದು. ತಮ್ಮ ಕಕ್ಷಿದಾರನ ರಾಜಕೀಯ ಭವಿಷ್ಯವನ್ನು ಮುಂದಿಟ್ಟುಕೊಂಡು ಶಿಕ್ಷೆ ಪ್ರಮಾಣವನ್ನು ಕಡಿಮೆ ಮಾಡುವುದಕ್ಕೆ ಮನವಿ ಮಾಡಬಹುದು. ಕೋರ್ಟ್ ನತ್ತ ಸದ್ಯ ಎಲ್ಲರ ಚಿತ್ತವಿದೆ. ನಾಳೆ ಯಾವ ರೀತಿಯ ಶಿಕ್ಷೆಯನ್ನ ವಿಧಿಸಬಹುದು..? ಎಷ್ಟು ವರ್ಷಗಳ ಕಾಲ ಶಿಕ್ಷೆಯ ಪ್ರಮಾಣವನ್ನ ವಿಧಿಸಬಹುದು ಎಂಬುದು ನಾಳೆ ಗೊತ್ತಾಗಲಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.










