Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಸ್ತ್ರೀ ಭೂಣ ಹತ್ಯೆ ಕಾಯ್ದೆ ಜಾರಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಎಐಎಂಎಸ್ಎಸ್ ಮನವಿ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 02 : ಸ್ತ್ರೀ ಭೂಣ ಹತ್ಯೆ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಅಖಿಲ ಭಾರತ ಮಹಿಳಾ ಸಾಂಸ್ಕøತಿಕ ಸಂಘಟನೆ ಜಿಲ್ಲಾ ಸಮಿತಿಯಿಂದ ಜಿಲ್ಲಾಧಿಕಾರಿ ಮೂಲಕ ರಾಜ್ಯದ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.

ಮಹಿಳೆಯರ ಮೇಲೆ ದೌರ್ಜನ್ಯ, ಭ್ರೂಣ ಹತ್ಯೆ, ಶಿಶು ಹತ್ಯೆ, ಬಾಲ್ಯ ವಿವಾಹ, ಲಿಂಗ ತಾರತಮ್ಯ, ವರದಕ್ಷಿಣೆ ಪಿಡುಗು, ಕೌಟುಂಬಿಕ ಕಿರುಕುಳ ಅಪೌಷ್ಟಿಕತೆ, ಅಭದ್ರತೆ ವಿರುದ್ದ ನಿರಂತರವಾಗಿ ಹೋರಾಟಗಳನ್ನು ನಡೆಸಿಕೊಂಡು ಬರುತ್ತಿದೆ. ಸ್ತ್ರೀಭೂಣ ಹತ್ಯೆಗೆ ಕೈಜೋಡಿಸುವವರ ವಿರುದ್ದ ಕಠಿಣ ಶಿಕ್ಷೆ ವಿಧಿಸಬೇಕು. ಬಾಲ್ಯ ವಿವಾಹ ಶಿಕ್ಷಾರ್ಹ ಅಪರಾಧ.

ಪೋಷಕರುಗಳಿಗೂ ಕಠಿಣ ಶಿಕ್ಷೆಯಾಗಬೇಕು. ಗರ್ಭಪಾತ ತಡೆಗಟ್ಟಬೇಕು. ಸ್ತ್ರೀಭೂಣ ಹತ್ಯೆ, ಬಾಲ್ಯ ವಿವಾಹ ಕುರಿತು ಪಠ್ಯದಲ್ಲಿ ಮಕ್ಕಳಿಗೆ ಜಾಗೃತಿ ಮೂಡಿಸಬೇಕು. ಅಶ್ಲೀಲ ಸಿನಿಮಾ, ಜಾಹಿರಾತು, ಸಾಹಿತ್ಯ, ವೆಬ್‍ಸೈಟ್‍ಗಳನ್ನು ನಿಷೇಧಿಸಿ ಮದ್ಯ ಮಾದಕ ಮಹಿಳೆಯರ ಮತ್ತು ಮಕ್ಕಳ ಕಳ್ಳಸಾಗಾಣಿಕೆ ನಿಲ್ಲಬೇಕು. ಫಾಸ್ಟ್‍ಟ್ರಾಕ್ ನ್ಯಾಯಾಲಯಗಳ ಸಂಖ್ಯೆ ಹೆಚ್ಚಿಸಬೇಕು. ಆಂತರಿಕ ದೂರು ಸಮಿತಿಗಳನ್ನು ಶಾಲಾ-ಕಾಲೇಜುಗಳಲ್ಲಿ ರಚಿಸಬೇಕೆಂದು ಒತ್ತಾಯಿಸಿದರು.

ಎ.ಐ.ಎಂ.ಎಸ್.ಎಸ್. ಜಿಲ್ಲಾ ಸಂಚಾಲಕಿ ಸುಜಾತ ಡಿ. ಕುಮುದ ಇವರುಗಳು ಈ ಸಂದರ್ಭದಲ್ಲಿದ್ದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment