ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817
ಚಿತ್ರದುರ್ಗ. ಆ. 04 : ನಗರದ ಜೆಸಿಆರ್ ಬಡಾವಣೆಯಲ್ಲಿನ ಸರ್ಕಾರಿ ಮಾದರಿ ಹಿರಿಯ ಶಾಲೆಯಲ್ಲಿ ರೋಟರಿ ಕ್ಲಬ್ವತಿಯಿಂದ ಶಾಲೆಯಲ್ಲಿನ ಮಕ್ಕಳಿಗೆ ದಂತ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು.
ಈ ಶಿಬಿರದಲ್ಲಿ ಶಾಲೆಯಲ್ಲಿನ 150 ಮಕ್ಕಳ ದಂತವನ್ನು ತಪಾಸಣೆಯನ್ನು ಡಾ. ಜಯಚಂದ್ರ ಮತ್ತು ತಂಡ ನಡೆಸಿಕೊಟ್ಟರು, ಈ ಸಮಯದಲ್ಲಿ ಮಕ್ಕಳಿಗೆ ನೀಡಲಾದ ಚೀಟಿಯನ್ನು ನಗರದ ಎಸ್.ಜೆ.ಎಂ. ದಂತ ಮಹಾ ವಿದ್ಯಾಲಯಕ್ಕ ಭೇಟಿ ನೀಡುವುದರ ಮೂಲಕ ಉಚಿತವಾಗಿ ಚಿಕಿತ್ಸೆಯನ್ನು ಪಡೆಯಲು ಅವಕಾಶವನ್ನು ಕಲ್ಪಿಸಲಾಗಿದೆ. ಈ ಸಂದರ್ಭದಲ್ಲಿ ರೋಟರಿ ಕ್ಲಬ್ನ ಎಸ್.ವಿರೇಶ್, ವೀರಭದ್ರಸ್ವಾಮಿ, ವೆಂಕಟೇಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.






