ಬೆಂಗಳೂರು: ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, 18 ಕೃಷಿ ಹಾಗೂ ತೋಟಗಾರಿಕ ಉತ್ಪನ್ನಗಳಿಗೆ ರಾಜ್ಯ ಸರ್ಕಾರ ಬೆಂಬಲ ಬೆಲೆ ನೀಡಲು ನಿರ್ಧಾರ ಮಾಡಿದೆ. ಈ ಬಗ್ಗೆ ಕೃಚಿ ಸಚಿವ ಚೆಲುವರಾಯಸ್ವಾಮಿ ಮಾಹಿತಿ ನೀಡಿದ್ದಾರೆ. ರಾಗಿ, ಭತ್ತ, ಜೋಳ, ತೊಗರಿ, ಶೇಂಗಾ, ಹತ್ತಿ ಸೇರಿದಂತೆ ಹದಿನೆಂಟು ಬೆಳೆಗಳಿಗೆ ಸರ್ಕಾರ ಬೆಂಬಲ ಬೆಲೆ ನೀಡಲಿದೆ ಎಂಬ ಮಾಹಿತಿಯನ್ನ ನೀಡಿದರು. ಈ ಸಂಬಂಧ ಸೆಪ್ಟೆಂಬರ್ ನಿಂದ ರಿಜಿಸ್ಟ್ರೇಷನ್ ಆರಂಭವಾಗಲಿದೆ.
ಸರ್ಕಾರದಿಂದ 15 ಲಕ್ಷ ಮೆಟ್ರಿಕ್ ಟನ್ ಉತ್ಪನ್ನವನ್ನು ಕೊಳ್ಳುವುದಕ್ಕೆ ತೀರ್ಮಾನ ಮಾಡಲಾಗಿದೆ. ಅದರಲ್ಲಿ ಆರು ಲಕ್ಷ ಮೆಟ್ರಿಕ್ ಟನ್ ರಾಗಿ ಖರೀದಿಸಲು ತೀರ್ಮಾನ ಮಾಡಲಾಗಿದೆ. ಎಕರೆಗೆ ಹತ್ತು ಕ್ವಿಂಟಾಲ್ ಗೆ 4886 ರೂಪಾಯಿಗೆ ಖರೀದಿ ಮಾಡಲಾಗುವುದು. ಮೂರು ಲಕ್ಷ ಮೆಟ್ರಿಕ್ ಟನ್ ಭತ್ತ ಖರೀದಿಗೆ ನಿರ್ಧಾರ ಮಾಡಲಾಗಿದೆ. ಕ್ವಿಂಟಾಲ್ ಗೆ 2369 ರೂಪಾಯಿಗೆ ಖರೀದಿ ಮಾಡ್ತೀವಿ. ಪ್ರತಿ ರೈತರಿಂದ ಗರಿಷ್ಠ 25 ಕ್ವಿಂಟಾಲ್ ಖರೀದಿ ಮಾಡಲಾಗುವುದು.

ಹಾಗೆಯೇ ಮೂರು ಲಕ್ಷ ಮೆಟ್ರಿಕ್ ಟನ್ ಬಿಳಿ ಜೋಳ ಖರೀದಿಗೆ ನಿರ್ಧಾರ ಮಾಡಲಾಗಿದೆ. ಗರಿಷ್ಠ ಒಬ್ಬ ರೈತರಿಂದ 150 ಕ್ವಿಂಟಾಲ್ ಖರೀದಿ ಮಾಡಲಾಗುವುದು. ಪ್ರತಿ ಕ್ವಿಂಟಾಲ್ ಗೆ 3669 ರೂಪಾಯಿಯಂತೆ ಖರೀದಿಸಲಾಗುವುದು. ಅಷ್ಟೇ ಅಲ್ಲ ಸಿರಿಧಾನ್ಯವನ್ನೂ ಸರ್ಕಾರ ಖರೀದಿ ಮಾಡಲಿದೆ. ನವಣೆ, ಸಾಮೆ, ಹಾರಕ ಸೇರಿದಂತೆ ಮುಂತಾದ ಸಿರಿಧಾನ್ಯವನ್ನು ಖರೀದಿ ಮಾಡಲಿದೆ. ಸಿರಿ ಧಾನ್ಯಗಳು ಕ್ವಿಂಟಲ್ ಗೆ 4886 ರೂಪಾಯಿ ಬೆಂಬಲ ಬೆಲೆ ನೀಡಲಾಗುವುದು. ಇದಕ್ಕೆ 114 ರೂಪಾಯಿ ಉತ್ತೇಜನ ಮೊತ್ತ ಸೇರಿಸಿ ಒಟ್ಟು ಐದು ಸಾವಿರ ಕೊಡಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ. ಇದು ರೈತರಿಗೆ ಹೆಚ್ಚು ಖುಷಿ ಕೊಟ್ಟ ವಿಚಾರವಾಗಿದೆ.



















