Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಜನವರಿ 3 ರಿಂದ 15-18 ವರ್ಷದ ಮಕ್ಕಳಿಗೆ ಕೋವಿಡ್ ಲಸಿಕೆ : ತಹಶೀಲ್ದಾರ್ ಜಿ.ಹೆಚ್.ಸತ್ಯನಾರಾಯಣ

Facebook
Twitter
Telegram
WhatsApp

ವರದಿ : ಕೆ.ಎಂ.ಮುತ್ತುಸ್ವಾಮಿ ಕಣ್ಣನ್

ಚಿತ್ರದುರ್ಗ, (ಜ.01): ಹದಿನೈದರಿಂದ ಹದಿನೆಂಟು ವರ್ಷದೊಳಗಿನ ಮಕ್ಕಳಿಗೆ ಜ.3 ರಿಂದ ಕೋವಿಡ್ ಲಸಿಕೆ ನೀಡಲಾಗುತ್ತದೆ. ಎಲ್ಲಾ ಇಲಾಖೆಯವರು ಸಹಕರಿಸಿ ಲಸಿಕಾ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ತಹಶೀಲ್ದಾರ್ ಜಿ.ಹೆಚ್.ಸತ್ಯನಾರಾಯಣ ಮನವಿ ಮಾಡಿದರು.

ಕೋವಿಡ್ ಲಸಿಕೆ ನೀಡಿಕೆ ಸಂಬಂಧ ತಾಲ್ಲೂಕು ಕಚೇರಿಯಲ್ಲಿ ಶನಿವಾರ ನಡೆದ ತಾಲ್ಲೂಕು ಚಾಲನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ತಾಲ್ಲೂಕಿನಾದ್ಯಂತ 24084 ಮಕ್ಕಳಿಗೆ ಲಸಿಕೆ ನೀಡುವ ಗುರಿಯಿದ್ದು, ಗ್ರಾಮ ಪಂಚಾಯಿತಿ ಪಿ.ಡಿ.ಓ.ಗಳು ಹಾಗೂ ಎಲ್ಲಾ ಇಲಾಖೆಯ ಸಿಬ್ಬಂದಿಯವರು ಕೈಜೋಡಿಸಬೇಕು ಎಂದು ಸೂಚಿಸಿದ ತಹಶೀಲ್ದಾರ್ ಇಲ್ಲಿಯವರೆಗೂ ಕೋವಿಡ್ ಒಂದು ಮತ್ತು ಎರಡನೆ ಅಲೆಯಲ್ಲಿ ಯಾವ ರೀತಿ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸಲಾಯಿತೋ ಅದೇ ರೀತಿ ಇನ್ನು ಮುಂದೆಯೂ ಸಾರ್ವಜನಿಕರು ಜಾಗೃತರಾಗಿರುವಂತೆ ತಿಳಿಸುವ ಹೊಣೆಗಾರಿಕೆ ಎಲ್ಲರ ಮೇಲಿದೆ ಎಂದರು.

ತಾಲ್ಲೂಕು ವೈದ್ಯಾಧಿಕಾರಿ ಡಾ.ಗಿರೀಶ್ ಮಾತನಾಡಿ ಚಿತ್ರದುರ್ಗ ತಾಲ್ಲೂಕಿನಾದ್ಯಂತ 73 ಲಸಿಕಾ ತಂಡ, 42 ಮೇಲ್ವಿಚಾರಕರ ತಂಡ ರಚಿಸಲಾಗಿದ್ದು, ಜ.10 ರಿಂದ ಮುಂಚೂಣಿ ಆರೋಗ್ಯ ಕಾರ್ಯಕರ್ತರಿಗೆ ಹಾಗೂ ಹಿರಿಯ ನಾಗರೀಕರಿಗೆ ಶಕ್ತಿ ವರ್ಧಕ ಲಸಿಕೆ ನೀಡಲಾಗುವುದು. ಜ.23 ರಿಂದ 26 ರವರೆಗೆ ಪಲ್ಸ್ ಪೊಲಿಯೋ ಕೂಡ ಮಕ್ಕಳಿಗೆ ನೀಡಲಾಗುವುದು.  ಒಂದು ಮತ್ತು ಎರಡನೆ ಡೋಸ್ ಕೊರೋನಾ ಲಸಿಕೆ ಪಡೆದ 60 ವರ್ಷ ಮೇಲ್ಪಟ್ಟವರಿಗೆ ದೇಹದಲ್ಲಿ ಶಕ್ತಿ ವೃದ್ದಿಸಲಿಕ್ಕಾಗಿ ಲಸಿಕೆ ನೀಡಲಾಗುವುದು ಎಂದು ತಿಳಿಸಿದರು.

ಆರೋಗ್ಯ ಶಿಕ್ಷಣಾಧಿಕಾರಿ ಎನ್.ಮಂಜುನಾಥ್ ಮಾತನಾಡಿ ಜ.3 ರಿಂದ 8 ರವರೆಗೆ ತಾಲ್ಲೂಕಿನಾದ್ಯಂತ ಎಲ್ಲಾ ಗ್ರಾಮಗಳಲ್ಲಿ ಲಸಿಕೆ ಅಧಿವೇಶನ ನಡೆಯಲಿದ್ದು, ಕೋವಿಡ್ ಜೊತೆಯಲ್ಲಿಯೇ ನಾವು ನೀವುಗಳೆಲ್ಲರೂ ವಾಸಿಸಬೇಕಿರುವುದರಿಂದ ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಹಿರಿಯ ನಾಗರೀಕರಿಗೆ ಶಕ್ತಿ ವರ್ಧಕ ಲಸಿಕೆಯನ್ನು ನೀಡಲಾಗುವುದು. ಇದರ ಪ್ರಯೋಜನವನ್ನು ಎಲ್ಲರೂ ಪಡೆದುಕೊಂಡು ಕೊರೋನಾದಿಂದ ದೂರವಿರುವಂತೆ ವಿನಂತಿಸಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಬಸವರಾಜಯ್ಯ ಮಾತನಾಡಿ ಹದಿನೈದರಿಂದ ಹದಿನೆಂಟು ವರ್ಷದೊಳಗಿನ ಮಕ್ಕಳಿಗೆ ಕೋವಿಡ್ ಲಸಿಕೆ ನೀಡುತ್ತಿರುವುದರಿಂದ ಎಲ್ಲಾ ಶಾಲೆಗಳಲ್ಲಿ ಕೊಠಡಿಗಳನ್ನು ಸಿದ್ದಪಡಿಸಿಟ್ಟುಕೊಳ್ಳುವಂತೆ ಶಿಕ್ಷಕರುಗಳಿಗೆ ಸೂಚಿಸಲಾಗಿದೆ ಎಂದು ಸಭೆಯ ಗಮನಕ್ಕೆ ತಂದರು.
ಆರ್.ಬಿ.ಎಸ್.ಕೆ.ತಂಡದ ಡಾ.ಮಹೇಂದ್ರ, ಡಾ.ವಾಣಿ, ಡಾ.ಮಂಜುಳ, ಹಿರಿಯ ಆರೋಗ್ಯ ಸುರಕ್ಷಾಧಿಕಾರಿ ಪರ್ವಿನ್, ತಾಲ್ಲೂಕು ಕಚೇರಿಯ ಕಂದಾಯ ನಿರೀಕ್ಷಕ ಶರಣಪ್ಪ, ನವೀನ್, ಭರಮಸಾಗರ ಸಿ.ಡಿ.ಪಿ.ಓ.ನರಸಿಂಹರಾಜು ಇನ್ನು ಮೊದಲಾದವರು ಸಭೆಯಲ್ಲಿ ಭಾಗವಹಿಸಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಜೂನ್ 3 ರಂದು ಮತದಾನ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ. ಮೇ.03: ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರ ಆಯ್ಕೆಯ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ 4615 ಮತದಾರರು ಇದ್ದು , ಜೂನ್ 3 ರಂದು ಮತದಾನ ಜರುಗಲಿದೆ ಎಂದು ಆಗ್ನೇಯ

ಚಿತ್ರದುರ್ಗದ ರಾಜಬೀದಿಗಳಲ್ಲಿ ವಿಜೃಂಭಣೆಯಿಂದ ಸಾಗಿದ ಏಕನಾಥೇಶ್ವರಿ ಅಮ್ಮನವರ ಮೆರವಣಿಗೆ ಮತ್ತು ಗ್ರಾಮ ದೇವತೆ ಬರಗೇರಮ್ಮನವರ ಮೆರವಣಿಗೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 03 : ಏಕನಾಥೇಶ್ವರಿ ಅಮ್ಮನ ಮೆರವಣಿಗೆ ನಗರದ ರಾಜಬೀದಿಗಳಲ್ಲಿ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು. ಕೋಟೆ

ನೇಹಾ ಹತ್ಯೆ ವೇಳೆ ನೆರವಿಗೆ ಧಾವಿಸಿದ ಜೋಶಿ ವಿರುದ್ಧ ಪ್ರಚಾರ ಮಾಡ್ತಿದ್ದೀರಾ ಎಂದು ಕೇಳಿದ್ದಕ್ಕೆ ನೇಹಾ ತಂದೆ ಏನಂದ್ರು..?

ಹುಬ್ಬಳ್ಳಿ: ಲೋಕಸಭಾ ಚುನಾವಣೆಯ ಮೊದಲ ಹಂತದ ಚುನಾವಣೆ ನಡೆದಿದ್ದು, ಈಗ ಎರಡನೇ ಹಂತದ ಚುನಾವಣೆಗೆ ಭರ್ಜರಿ ಪ್ರಚಾರ ಕಾರ್ಯವೂ ನಡೆಯುತ್ತಿದೆ. ಹುಬ್ಬಳ್ಳಿ ಧಾರವಾಢ ಕಾಂಗ್ರೆಸ್ ಅಭ್ಯರ್ಥಿಯಾಗಿ ವಿನೋದ್ ಸೂಟಿ ಸ್ಪರ್ಧೆ ಮಾಡಿದ್ದು ಅದಕ್ಕೆ ವಿರುದ್ಧ

error: Content is protected !!