Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಮ್ಮ ಮೆಟ್ರೋ ಯೆಲ್ಲೋ ಲೈನ್ ಉದ್ಘಾಟನೆ : ವೇದಿಕೆ ಮೇಲೆ ಸಿಎಂ – ಪಿಎಂ ಮಾತಿನ ಕೌಂಟರ್..!

---Advertisement---

ಬೆಂಗಳೂರು: ಇಂದು ಪ್ರಧಾನಿ ನರೇಂದ್ರ ಮೋದಿಯವರು ಬೆಂಗಳೂರಿಗೆ ಆಗಮಿಸಿ, ಯೆಲ್ಲೋ ಲೈನ್ ಮೆಟ್ರೋ ಉದ್ಘಾಟನೆ ಮಾಡಿದ್ದಾರೆ. ಜೊತೆಗೆ ಮೂರು ವಂದೇ ಭಾರತ್ ಟ್ರೈನ್ ಗೆ ಚಾಲನೆಯನ್ನು ನೀಡಿದ್ದಾರೆ. ಬಳಿಕ ಎಲ್ಲರೂ ಒಂದು ರೌಂಡ್ ಮೆಟ್ರೋದಲ್ಲಿಯೇ ಪ್ರಯಾಣ ಮಾಡಿ ಬಂದಿದ್ದಾರೆ. ಇದೆಲ್ಲಾ ಆದ್ಮೇಲೆ ವೇದಿಕೆ ಕಾರ್ಯಕ್ರಮ ಶುರುವಾಗಿದ್ದು, ಈ ವೇದಿಕೆಯಲ್ಲಿ ಸಿಎಂ ಹಾಗೂ ಪಿಎಂ ಕೌಂಟರ್ ಕೊಡುವ ಕಾರ್ಯಕ್ರಮ ನಡೆದಿದೆ.

ಮೊದಲು ವೇದಿಕೆ ಮೇಲೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬೆಂಗಳೂರಿಗೆ ಮೆಟ್ರೋ ತಂದಿದ್ದು ಮನಮೋಹನ್ ಸಿಂಗ್. ಮೆಟ್ರೋಗಾಗಿ ರಾಜ್ಯ ಸರ್ಕಾರ ಹೆಚ್ಚು ಖರ್ಚು ಮಾಡಿದೆ ಎಂದು ನರೇಂದ್ರ ಮೋದಿ ಅವರಿಗೆ ಕೌಂಟರ್ ಕೊಟ್ಟರು. ಬಳಿಕ ಮಹಾರಾಷ್ಟ್ರ, ಗುಜರಾತ್ ನಂತೆ ಕರ್ನಾಟಕಕ್ಕೂ ಹೆಚ್ಚು ಒತ್ತು ಕೊಡಿ ಎಂದು ಮೋದಿ ಅವರಿಗೆ ಹೇಳಿದರು.

ಇದಾದ ಮೇಲೆ ಪ್ರಧಾನಿ ಮೋದಿ ಅವರ ಸರದಿ ಬಂತು. ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ವೇದಿಕೆ ಮೇಲೆಯೇ ಟಕ್ಕರ್ ನೀಡಿದ್ದಾರೆ. ರಾಜ್ಯ, ಕೇಂದ್ರ ಸರ್ಕಾರಗಳು ಇರುವುದೇ ಜನರ ಸೇವೆಗಾಗಿ. ದೇಶದ ಜನರಿಗಾಗಿ ನಾವೂ ಒಂದಾಗಿ ಕೆಲಸ ಮಾಡಬೇಕು. ಮೇಕ್ ಇನ್ ಇಂಡಿಯಾದಲ್ಲಿ ಇನ್ನಷ್ಟು ಸಾಧನೆ ಮಾಡಬೇಕಿದೆ. ಅದಕ್ಕೆ ಬೆಂಗಳೂರು ಹಾಗೂ ಕರ್ನಾಟಕದ ಅವಶ್ಯಕತೆ ಇದೆ. ನಮ್ಮ ವಸ್ತುಗಳಲ್ಲಿ ಯಾವುದೇ ಡಿಫೆಕ್ಟ್ ಇರದಂತೆ ತಯಾರಿಸಬೇಕಿದೆ ಎಂದು ಯುವಜನತೆಗೆ ಸಂದೇಶ ಕೊಡುವುದರ ಜೊತೆಗೆ ಕಾಂಗ್ರೆಸ್ ಸರ್ಕಾರಕ್ಕೆ ತಿರುಗೇಟು ಕೂಡ ನೀಡಿದ್ದಾರೆ. ಇಂದು ಬೆಂಗಳೂರಿಗೆ ಬಂದ ಮೋದಿ ಅವರು ನಾಲ್ಕು ಗಂಟೆಯಲ್ಲಿ ಮೂರು ಕಾರ್ಯಕ್ರಮ ಅಟೆಂಡ್ ಮಾಡಿ, ದೆಹಲಿಗೆ ವಿಮಾನ ಹತ್ತಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

Leave a Comment