ಡಾ.ವಿಷ್ಣುವರ್ಧನ್‍ ಸಮಾಧಿ ನೆಲಸಮ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಿ : ಬಿ.ರಾಮಪ್ಪ

1 Min Read

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 12 : ಸಾಹಸ ಸಿಂಹ ಡಾ.ವಿಷ್ಣುವರ್ಧನ್‍ರವರ ಸಮಾಧಿಯನ್ನು ರಾತ್ರೋ ರಾತ್ರಿ ನೆಲಸಮಗೊಳಿಸಿರುವವರನ್ನು ಪತ್ತೆ ಹಚ್ಚಿ ಕಾನೂನು ರೀತಿಯ ಕ್ರಮ ಕೈಗೊಳ್ಳುವಂತೆ ನಗರಸಭೆ ಮಾಜಿ ಉಪಾಧ್ಯಕ್ಷ ಬಿ.ರಾಮಪ್ಪ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ನಾಗರಹಾವು ಚಿತ್ರದ ಮೂಲಕ ಐತಿಹಾಸಿಕ ಚಿತ್ರದುರ್ಗದ ಕೋಟೆಯನ್ನು ನಾಡಿನಾದ್ಯಂತ ಪರಿಚಯಿಸಿ ಅಭಿಮಾನಿಗಳ ಮನದಲ್ಲಿ ಇಂದಿಗೂ ಅಜರಾಮರವಾಗಿ ಉಳಿದಿರುವ ಮೇರು ನಟ ಡಾ.ವಿಷ್ಣುವರ್ಧನ್‍ರವರ ಸಮಾಧಿಯನ್ನು ನೆಲಸಮಗೊಳಿಸಿರುವುದರ ಹಿಂದೆ ಯಾರ ಪಿತೂರಿಯಿದೆ ಎನ್ನುವುದನ್ನು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಅಮೋಘವಾದ ಅಭಿನಯದ ಮೂಲಕ ಸಮಾಜಕ್ಕೆ ಉತ್ತಮ ಸಂದೇಶ ನೀಡುತ್ತಿದ್ದ ಡಾ.ವಿಷ್ಣುವರ್ಧನ್‍ರವರ ಅಂತ್ಯಕ್ರಿಯೆನ್ನು ಬೆಂಗಳೂರಿನ ಅಭಿಮಾನ್ ಸ್ಟುಡಿಯೋದಲ್ಲಿ ನೆರವೇರಿಸಲಾಗಿತ್ತು. ಅಂದಿನಿಂದ ಇಲ್ಲಿಯವರೆಗೂ ಅಭಿಮಾನಿಗಳು ಸಮಾಧಿಗೆ ಪೂಜೆ ಸಲ್ಲಿಸಿಕೊಂಡು ಬರುತ್ತಿದ್ದರು. ಈಗ ಏಕಾಏಕಿ ಸಮಾಧಿಯನ್ನು ಧ್ವಂಸಗೊಳಿಸಿರುವುದು ತರವಲ್ಲ. ಸರ್ಕಾರ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಸಮಾಧಿಯನ್ನು ಪುನರ್ ನಿರ್ಮಿಸಿ ಆ ಜಾಗದಲ್ಲಿ ಸ್ಮಾರಕ ನಿರ್ಮಾಣ ಮಾಡಿ ಅಭಿಮಾನಿಗಳ ಆತಂಕವನ್ನು ದೂರ ಮಾಡಬೇಕೆಂದು ಬಿ.ರಾಮಪ್ಪ ಆಗ್ರಹಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *

Enable Notifications OK No thanks