Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸರ್ಕಾರಿ ಶಾಲೆಗಳನ್ನು ಮುಚ್ಚುವುದನ್ನು ವಿರೋಧಿಸಿ 50 ಲಕ್ಷ ಸಹಿ ಸಂಗ್ರಹ : ಆಗಸ್ಟ್ 21 ರಂದು ಬೃಹತ್ ಚಳುವಳಿ

---Advertisement---

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 13 : ಸರ್ಕಾರಿ ಶಾಲೆಗಳ ಮುಚ್ಚುವಿಕೆ ವಿರೋಧಿಸಿ 50 ಲಕ್ಷ ಸಹಿಗಳನ್ನು ಸಂಗ್ರಹಿಸಿ ಮುಖ್ಯಮಂತ್ರಿಗಳಿಗೆ ಸಲ್ಲಿಸಲು ಎಐಡಿಎಸ್‍ಒ ಕರ್ನಾಟಕ ಸಿದ್ಧತೆ ನಡೆಸಿಕೊಂಡಿದ್ದು

ಆಗಸ್ಟ್ 21 ರಂದು ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ರಾಜ್ಯವ್ಯಾಪಿ ಚಳುವಳಿಯ ಸಮಾರೋಪ ಸಭೆಯನ್ನು ಆಯೋಜಿಸಲಾಗಿದೆ.

ರಾಜ್ಯ ಸರ್ಕಾರವು 6,200 ಸರ್ಕಾರಿ ಶಾಲೆಗಳನ್ನು “ವಿಲೀನ”ಗೊಳಿಸುವ ಹೆಸರಿನಲ್ಲಿ ಮುಚ್ಚಲು ಹೊರಟಿರುವುದನ್ನು ವಿರೋಧಿಸಿ ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್ (AIDSO) ಹಮ್ಮಿಕೊಂಡಿದ್ದ ಐತಿಹಾಸಿಕ 50 ಲಕ್ಷ ಸಹಿ ಸಂಗ್ರಹ ಅಭಿಯಾನವು ಯಶಸ್ವಿಯಾಗಿ ಪೂರ್ಣಗೊಂಡಿದೆ. “ಸರ್ಕಾರಿ ಶಾಲೆಗಳನ್ನು ಉಳಿಸಿ ಮತ್ತು ಬಲಪಡಿಸಿ” ಎಂಬ ಕರೆಯೊಂದಿಗೆ ಪ್ರಾರಂಭವಾದ ಈ ಅಭಿಯಾನವು ರಾಜ್ಯದ ಇತಿಹಾಸದಲ್ಲಿಯೇ ಅತಿದೊಡ್ಡ ವಿದ್ಯಾರ್ಥಿ ಚಳುವಳಿಗಳಲ್ಲಿ ಒಂದಾಗಿ ಹೊರಹೊಮ್ಮಿದೆ.

50,000 ಕ್ಕೂ ಹೆಚ್ಚು ಸ್ವಯಂಸೇವಕರು ರಾಜ್ಯಾದ್ಯಂತ ಈ ಅಭಿಯಾನದಲ್ಲಿ ಭಾಗವಹಿಸಿದ್ದು, ಪೋಷಕರು, ವಿದ್ಯಾರ್ಥಿಗಳು ಸ್ಥಳೀಯ ನಾಗರಿಕರ ಜೊತೆ ಸೇರಿ ನೂರಾರು ಪ್ರತಿಭಟನಾ ಸಭೆಗಳನ್ನು ನಡೆಸಿದ್ದಾರೆ. ಹಲವು ಜಿಲ್ಲೆಗಳಲ್ಲಿ, ಈ ಹೋರಾಟವು, ಅಧಿಕಾರಿಗಳು ಅನೇಕ ಶಾಲೆಗಳಲ್ಲಿ ಮೂಲಸೌಕರ್ಯಗಳನ್ನು ಸುಧಾರಿಸುವಂತೆ ಮಾಡಿದೆ. ಅಲ್ಲದೆ, ಕರ್ನಾಟಕದಾದ್ಯಂತ ಹಲವಾರು ಶಿಕ್ಷಕರು, ಮುಖ್ಯೋಪಾಧ್ಯಾಯರು ಮತ್ತು ಶಿಕ್ಷಣ ತಜ್ಞರಿಂದ ಈ ಚಳುವಳಿಗೆ ಬೆಂಬಲ ವ್ಯಕ್ತವಾಗಿದೆ. ರಾಜ್ಯದ 30 ಜಿಲ್ಲೆಗಳ 150 ಕ್ಕೂ ಹೆಚ್ಚು ತಾಲೂಕುಗಳನ್ನು ಈ ಅಭಿಯಾನವು ತಲುಪಿದ್ದು, 1000 ಕ್ಕೂ ಹೆಚ್ಚು ಶೈಕ್ಷಣಿಕ ಸಂಸ್ಥೆಗಳ ವಿದ್ಯಾರ್ಥಿಗಳು ಇದರಲ್ಲಿ ಭಾಗವಹಿಸಿದ್ದರು.

ಸಂಗ್ರಹಿಸಲಾದ ಸಹಿಗಳನ್ನು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆಯಲಿರುವ ಬೃಹತ್ ಸಮಾರೋಪ ಸಮಾರಂಭದಲ್ಲಿ ಮಾನ್ಯ ಮುಖ್ಯಮಂತ್ರಿಗಳಿಗೆ ಔಪಚಾರಿಕವಾಗಿ ಸಲ್ಲಿಸಲಾಗುವುದು. ಈ ಕಾರ್ಯಕ್ರಮದಲ್ಲಿ ಸಾವಿರಾರು ವಿದ್ಯಾರ್ಥಿಗಳು, ಪೋಷಕರು, ಶಿಕ್ಷಕರು ಮತ್ತು ಸಾರ್ವಜನಿಕ ಶಿಕ್ಷಣದ ಹಿತೈಷಿಗಳು ಭಾಗವಹಿಸಲಿದ್ದಾರೆ.

ಕಾರ್ಯಕ್ರಮದ ವಿವರಗಳು:
ಮುಖ್ಯ ಅತಿಥಿಗಳು: ಬರಗೂರು ರಾಮಚಂದ್ರಪ್ಪ – ಸಾಹಿತಿಗಳು ಮತ್ತು ಶಿಕ್ಷಣ ತಜ್ಞರು
ಉದ್ಘಾಟನೆ: ಸಂತೋಷ್ ಹೆಗಡೆ – ನಿವೃತ್ತ ಸುಪ್ರೀಂ ಕೋರ್ಟ್ ನ್ಯಾಯಾಧೀಶರು, ಮಾಜಿ ಲೋಕಾಯುಕ್ತರು
ಅತಿಥಿಗಳು:
* ಪ್ರೊ. ಎ. ಮುರಿಗೆಪ್ಪ – ವಿಶ್ರಾಂತ ಕುಲಪತಿಗಳು, ಹಂಪಿ ಕನ್ನಡ ವಿಶ್ವವಿದ್ಯಾಲಯ
* ಕಿಶೋರ್ – ದಕ್ಷಿಣ ಭಾರತದ ಖ್ಯಾತ ಚಲನಚಿತ್ರ ನಟ
ಮುಖ್ಯ ಭಾಷಣಕಾರರು: ಶಿಬಾಶಿಷ್ ಪ್ರಹರಾಜ್ – ಪ್ರಧಾನ ಕಾರ್ಯದರ್ಶಿಗಳು, ಎಐಡಿಎಸ್‍ಒ ಕೇಂದ್ರ ಕೌನ್ಸಿಲ್
ಪ್ರಾಸ್ತಾವಿಕ ನುಡಿಗಳು: ಅಜಯ್ ಕಾಮತ್ – ರಾಜ್ಯ ಕಾರ್ಯದರ್ಶಿಗಳು, ಎಐಡಿಎಸ್‍ಒ ಕರ್ನಾಟಕ
ಅಧ್ಯಕ್ಷತೆ: ಅಶ್ವಿನಿ ಕೆ ಎಸ್ – ರಾಜ್ಯಾಧ್ಯಕ್ಷರು, ಎಐಡಿಎಸ್‍ಒ ಕರ್ನಾಟಕ

ಈ ಚಳುವಳಿಯು ಕರ್ನಾಟಕದ ವಿದ್ಯಾರ್ಥಿ ಚಳುವಳಿಯ ಇತಿಹಾಸದಲ್ಲಿ ಒಂದು ವಿಶಿಷ್ಟ ಹೆಜ್ಜೆಯಾಗಿದೆ ಎಂದು ಎಐಡಿಎಸ್‍ಒ ನಂಬುತ್ತದೆ. ಸರ್ಕಾರಿ ಶಾಲೆಗಳ ರಕ್ಷಣೆ ಮತ್ತು ಬಲವರ್ಧನೆಗಾಗಿ ನಡೆಯಲಿರುವ ಈ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಧ್ವನಿ ಎತ್ತಬೇಕೆಂದು ಎಐಡಿಎಸ್‍ಒ ಸಾರ್ವಜನಿಕರಲ್ಲಿ ಮನವಿ ಮಾಡುತ್ತದೆ.

ರಾಜ್ಯ ಮಟ್ಟದ ಸಮಾವೇಶದ ಪೋಸ್ಟರ್ ಅನ್ನು ನಗರದ ಭಗತ್ ಸಿಂಗ್ ಪಾರ್ಕ್ ಬಳಿ ಬಿಡುಗಡೆ ಮಾಡಲಾಯಿತು.
ಈ ಸಂದರ್ಭದಲ್ಲಿ ಎಐಡಿಎಸ್ಓ ಜಿಲ್ಲಾ ಸಂಚಾಲಕರು ಕೆ.ಈರಣ್ಣ, ಸದಸ್ಯರು ಎಂ.ಶಾಂತಿ ಉಪಸ್ಥಿತರಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment