Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ : ಪ್ರಕೃತಿ ಶಾಲೆಯಲ್ಲಿ 79ನೇ ಸ್ವಾತಂತ್ರ ದಿನಾಚರಣೆ

---Advertisement---

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 15 : ನಗರದ ಪ್ರಕೃತಿ ಆಂಗ್ಲ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 79ನೇ ಸ್ವತಂತ್ರ ದಿನಾಚರಣೆಯನ್ನು ಆಚರಿಸಲಾಯಿತು.

ಶಾಲೆಯ ಅಧ್ಯಕ್ಷರಾದ ರೋಟೇರಿಯನ್ ಎಂ.ಕೆ. ರವೀಂದ್ರ ಡಿಸ್ಟ್ರಿಕ್ಟ್ ಗೌರ್ನರ್ ಡಿಸ್ಟ್ರಿಕ್ಟ್ ಆರ್ ಐ 3160 ರವರು ಧ್ವಜಾರೋಹಣವನ್ನು ಮಾಡಿದರು. ಸ್ವಾತಂತ್ರ್ಯ ಹೋರಾಟಗಾರ ಬಲಿದಾನವನ್ನು ನೆನೆಸುತ್ತಾ ನಮ್ಮ ದೇಶವು ಪ್ರಗತಿಪದ್ಧದಲ್ಲಿ ಸಾಗುತ್ತಿದೆ ಎಂದು ಮಕ್ಕಳಿಗೆ ತಿಳಿಸಿದರು.

ಒಂದು ಮತ್ತೆ ಎರಡನೇ ತರಗತಿಯ ವಿದ್ಯಾರ್ಥಿಗಳು ಪ್ರಾರ್ಥನೆಯನ್ನು ಮಾಡಿದರು. 4 ನೇ ತರಗತಿ ವಿದ್ಯಾರ್ಥಿಯಾದ ಭಾನುಪ್ರಿಯ ಟಿ. ಅಧ್ಯಕ್ಷರಿಗೆ ತಮ್ಮ ಪಥಸಂಚಲನದ ತಂಡದ ಪರಿಚಯವನ್ನು ಮಾಡಿಕೊಟ್ಟರು.
ನಾಲ್ಕನೇ ತರಗತಿಯ ವಿದ್ಯಾರ್ಥಿ ಗಳು ಪಥಸಂಚಲನವನ್ನು ಮಾಡಿದರು. ಶಾಲೆಯ ಅಧ್ಯಾಪನ ಮಕ್ಕಳು ರಾಷ್ಟ್ರೀಯ ಹೋರಾಟಗಾರರ ವೇಷಭೂಷಣ ಸ್ಪರ್ಧೆಯನ್ನು ಮಾಡಿದರು.
ಈ ಮಕ್ಕಳಿಗೆ ಪಾರಿತೋಷಕವನ್ನು ವಿತರಿಸಲಾಯಿತು.
ಪ್ಲೇ ಹೋಂ ಮಕ್ಕಳು ನಮ್ಮ ರಾಷ್ಟ್ರದ ವಿವಿಧ ಚಿನ್ಹೆಯನ್ನು ಗುರುತಿಸಿದರು. ವಿಶೇಷವಾಗಿ ಪ್ರತಿ ತಿಂಗಳು ಶೇಖಡ ನೂರರಷ್ಟು ಹಾಜರಾತಿ ಯಾದ ವಿದ್ಯಾರ್ಥಿಗಳಿಗೆ ಹಾಜರಾತಿ ಪ್ರಮಾಣ ಪತ್ರವನ್ನು ವಿತರಿಸಲಾಯಿತು. ವಿದ್ಯಾರ್ಥಿಯಾದ ಮೊಹಮ್ಮದ್ ಅರ್ಬಾದ್ ಹಿಂದಿ ಭಾಷಣವನ್ನು ಮತ್ತು ಭುವನ,ಟಿ ಕನ್ನಡ ಭಾಷಣವನ್ನು ಮಾಡಿದರು.
ಐದು ಆರು ಮತ್ತು ಏಳನೇ ತರಗತಿ ವಿದ್ಯಾರ್ಥಿಗಳು ದೇಶಭಕ್ತಿ ಗೀತೆಗೆ ನೃತ್ಯವನ್ನು ಮಾಡಿದರು.

ಕಾರ್ಯದರ್ಶಿಗಳಾದ ಕಾರ್ತಿಕ್. ಎಂ ಅವರು ವಂದನಾಪಣೆಯನ್ನು ನೆರವೇರಿಸಿದರು. ಈ ಕಾರ್ಯಕ್ರಮದ ನಿರೂಪಣೆಯನ್ನು ನಮ್ಮ ಶಾಲೆಯ ವಿದ್ಯಾರ್ಥಿಗಳಾದ ಧನ್ಯ ಎಲ್. ನಾಯ್ಡು ಸಂಜನಾ ಎಸ್ ತನೋಜ್ ಕುಮಾರ್ ಪಲ್ಲವಿ ಪಿ.ವಿ ಕೃತಿಕ ವಿ ಮಾಡಿದರು. ಶಾಲೆಯ ಎಲ್ಲಾ ಟ್ರಸ್ಟ್ ಗಳು ಮತ್ತು ನಮ್ಮ ಶಾಲೆಯ ಮುಖ್ಯ ಶಿಕ್ಷಕರಾದ ನಂದ ಟಿ ಎಲ್ಲ ಶಿಕ್ಷಕ ವರ್ಗದವರು ಮತ್ತು ಪೋಷಕರು ಉಪಸ್ಥಿತರಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment