Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಾಲ್ಕು ಜಿಲ್ಲೆಗಳಿಗೆ ರೆಡ್ ಅಲರ್ಟ್ : ಇನ್ನೂ ಎಷ್ಟು ದಿನ ಮಳೆ ?

---Advertisement---

ಬೆಂಗಳೂರು: ಕರ್ನಾಟಕದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಬಾರೀ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ವರದಿ ನೀಡಿದೆ. ಕರಾವಳಿ ಜಿಲ್ಲೆಗಳು, ಮಲೆನಾಡಿನ ಭಾಗದ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಬೆಂಗಳೂರು ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಬೆಳಗ್ಗೆಯಿಂದಾನೇ ಮೋಡ ಕವಿದ ವಾತಾವರಣ ಮನೆ ಮಾಡಿದೆ. ಹೀಗಾಗಿ ಈ ಭಾಗದಲ್ಲಿ ಸಾಧಾರಣ ಮಳೆಯಾಗಲಿದೆ ಎಂದಜ ಹವಮಾನ ಇಲಾಖೆ ಸೂಚನೆ ನೀಡಿದೆ.

ಉಳಿದಂತೆ ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗೆ ಆಗಸ್ಟ್ 18ರಂದು ರೆಡ್ ಅಲರ್ಟ್ ಘೋಷಣೆ ಮಾಡಿದ್ದು, ದಕ್ಷಿಣ ಕನ್ನಡ, ಹಾಸನ, ಕೊಡಗು, ಮೈಸೂರು, ಧಾರವಾಡ, ಗದಗ, ಬೆಳಗಾವಿ, ಬಾಗಲಕೋಟೆ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಉಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಬೇರೆ ಭಾಗದಲ್ಲೆಲ್ಲಾ ಬಿರುಗಾಳಿ ಸಹಿತ ಸಾಧಾರಣ ಮಳೆಯಾಗಲಿದೆ.

ಕಾರವಳಿಯ ಕರ್ನಾಟಕವೂ ಅತ್ಯಂತ ತೀವ್ರ ಪರಿಣಾಮವನ್ನು ಎದುರಿಸಬೇಕಾಗುತ್ತದೆ. ಆದರೆ ಉತ್ತರ ಮತ್ತು ದಕ್ಷಿಣ ಒಳನಾಡು ಪ್ರದೇಶಗಳು ವಾರದ ಮಧ್ಯದಲ್ಲಿ ಬದಲಾವಣೆಗಳನ್ನು ಗಮನಿಸಬೇಕಿದೆ. ಭಾರೀ ಮಳೆಯಿಂದಾಗಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗುವ ಸಾಧ್ಯತೆ ಇದೆ. ಸಂಚಾರ ಸಮಸ್ಯೆಗಳು ಎದುರಾಗಲಿವೆಮ ಬೆಟ್ಟಗುಡ್ಡಗಳು ಮತ್ತು ಕರಾವಳು ಪ್ರದೇಶಗಲಕಲ್ಲಿ ಭೂಕುಸಿತದ ಸಾಧ್ಯತೆ ಹೆಚ್ಚಾಗಿದೆ. ರೈತರು ಮತ್ತು ಸ್ಥಳೀಯ ಆಡಳಿತವು ಬೆಳೆ ಮತ್ತು ಮೂಲ ಸೌಕರ್ಯದ ಹಾನಿಯನ್ನು ತಗ್ಗಿಸಲು ಮುಂಜಾಗ್ರತ ಕ್ರಮಗಳನ್ನು ತೆಗೆದುಕೊಳ್ಳಬೇಕಿದೆ. ಹಾಗೇ ಹೊರಗೆ ಹೋಗುವ ಜನ ಕೂಡ ಮುಂಜಾಗ್ರತ ಎಚ್ಚರದೊಂದಿಗೆ ಹೋಗಬೇಕಾಗುತ್ತದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment