Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಿಜೆಪಿ ಕಾರ್ಯಕ್ರಮ ಅಲ್ಲ, ಸರ್ಕಾರಿ ಕಾರ್ಯಕ್ರಮ : ಸಂಸದ ಡಿ ಕೆ ಸುರೇಶ್ ಸ್ಪಷ್ಟನೆ

Facebook
Twitter
Telegram
WhatsApp

 

ರಾಮನಗರ: ಜಿಲ್ಲೆಯಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದಲ್ಲಿ ಸಚಿವರು, ಶಾಸಕರ ನಡುವೆಯೇ ಮಾರಾಮಾರಿಯಂತ ಗಲಾಟೆ ನಡೆದು ಹೋಗಿದೆ. ಸಂಸದ ಡಿ ಕೆ ಸುರೇಶ್ ಮತ್ತು ಸಚಿವ ಅಶ್ವಥ್ ನಾರಾಯಣ್ ಬೆಂಬಲಗರು ಗಲಾಟೆ ಮಾಡಿಕೊಂಡಿದ್ದಾರೆ. ಈ ಸಂಬಂಧ ಸಂಸದ ಡಿ ಕೆ ಸುರೇಶ್ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.

ಸಚಿವರಾದ ಮೇಲೆ ಎಲ್ಲಾ ಕೆಲಸವನ್ನ ನಾನೇ ಮಾಡಿದ್ದೇನೆ ಎಂದರೆ ಹೇಗೆ..? ಸಚಿವರು ಸವಾಲಿಗೆ ಕರೆದಾಗ ನಾನು ಸುಮ್ಮನೆ ಕೂರಲು ಆಗೋದಿಲ್ಲ. ಕಾರ್ಯಕ್ರಮಕ್ಕೆ ಬಂದಿದ್ದೇನೆ. ಜನರ ಎದುರಿಗೆ ಆಕ್ರೋಶವಾಗಿ ಮಾತನಾಡಿ ಸವಾಲಿಗೆ ಕರೆದರೆ ಸುಮ್ಮನೆ ಕೂರೋದಕ್ಕೆ ಆಗಲ್ಲ. ಇದು ಗುಂಡಾ ವರ್ತನೆ ಅಲ್ಲ. ಅವರು ಹೇಳಿದ್ದನ್ನು ಕೇಳಿಸಿಕೊಂಡು ಸಿಎಂ ಎದುರೇ ಉತ್ತರ ನೀಡಿದ್ದೇನೆ.

ಇದು ಪಕ್ಷದ ಕಾರ್ಯಕ್ರಮ ಅಲ್ಲ. ಸರ್ಕಾರಿ ಕಾರ್ಯಕ್ರಮ. ಪ್ರತಿಮೆ ನಿರ್ಮಾಣಕ್ಕೆ ಸಂಸದರಾಗಿ ಹಣ ಬಿಡುಗಡೆ ಮಾಡಲು ಎಷ್ಟು ಕಷ್ಟ ಪಟ್ಟಿದ್ದೀವಿ. ಪ್ರತಿಮೆ ಅನಾವರಣಕ್ಕೆ ಕೂಡ ತೊಡಕುಗಳಾಗಿದ್ದವು. ಅದನ್ನು ಸಮಿತಿ ರಚನೆ ಮಾಡಿ ಬಗೆಹರಿಸಿದ್ದೇವೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಗಾಳಿ ಮಳೆಗೆ ಕರೆಂಟ್ ಹೋದ್ರೆ ಈ ನಂಬರ್ ಗೆ ವಾಟ್ಸಾಪ್ ಮಾಡಿ

ಬೆಂಗಳೂರು: ಇನ್ನು ಮಳೆಗಾಲ ಶುರುವಾಯ್ತು. ಈ ಮಳೆಗಾಲ ಬಂತು ಅಂದ್ರೆ ಸಾಕು ಎಲ್ಲೆಡೆ ಮರಗಿಡಗಳು ಬೀಳುತ್ತವೆ, ಪವರ್ ಕಟ್ ಸಮಸ್ಯೆಗಳು ಕೂಡ ಕಾಡುತ್ತವೆ. ಈ ವೇಳೆ ಬೆಸ್ಕಾಂನವರು ಜನರ ಕೈಗೆ ಸಿಗುವುದು ಕಷ್ಟವಾಗಿದೆ. ಆದರೆ

ಹಣ ಉಳಿತಾಯಕ್ಕೆ RD ಅಥವಾ FD.. ಯಾವುದು ಬೆಟರ್..?

ಮನುಷ್ಯನ ಈಗಿನ ಜೀವನಶೈಲಿಯಿಂದ ಹಣದ ಅವಶ್ಯಕತೆ ಬಹಳ ಇದೆ. ಬೆಲೆ ಏರಿಕೆಯ ನಡುವೆ ಮುಂದಿನ ಜೀವನಕ್ಕಾಗಿ ಹಣ ಉಳಿಸಲೇಬೇಕಾಗಿದೆ‌. ಆದರೆ ಹಣ ಉಳಿಕೆಗೆ ಅಥವಾ ಇರುವ ಹಣಕ್ಕೆ ಬ್ಯಾಂಕ್ ನಲ್ಲಿ ಯಾವ ಮಾರ್ಗವನ್ನು ಬಳಸಬೇಕೆಂಬುದು

ರೇವಣ್ಣ ಜಾಮೀನು ಅರ್ಜಿ ಇಂದು ವಿಚಾರಣೆ : ಅನಾರೋಗ್ಯದಿಂದ ಆಸ್ಪತ್ರೆಯಲ್ಲಿರುವ ರೇವಣ್ಣಗೆ ಜೈಲಾ..? ಬೇಲಾ..?

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆಯ ಕಿಡ್ನ್ಯಾಪ್ ಕೇಸಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣ ಅವರನ್ನು ಬಂಧಿಸಲಾಗಿದೆ. 8ನೇ ತಾರೀಖಿನ ತನಕವೂ ವಶಕ್ಕೆ ಪಡೆದಿದ್ದರು. ಆದರೆ ಇಂದು ಅವರ

error: Content is protected !!