Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ವೀರೇಂದ್ರ ಪಪ್ಪಿ ವಶಕ್ಕೆ : ಸಹೋದರ ಹೇಳಿದ್ದೇನು..?

---Advertisement---

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 22 : ಇಂದು ಇಡಿ ಅಧಿಕಾರಿಗಳು ಶಾಸಕರ ಮನೆ ಮೇಲೆ ದಾಳಿ ನಡೆಸಿದ್ದಾರೆ. ಈ ಸಂಬಂಧ ವೀರೇಂದ್ರ ಪಪ್ಪಿ ಅವರ ಸಹೋದರ ನಾಗರಾಜ್ ಪ್ರತಿಕ್ರಿಯೆ ನೀಡಿದ್ದಾರೆ.

 

ಈ ವಿಚಾರವಾಗಿ ಇನ್ನು ಏನು ಗೊತ್ತಿಲ್ಲ. ಕಾನೂನು ಪ್ರಕಾರ ಅವರು ಏನು ಕೇಳುತ್ತಾರೋ ಅದನ್ನ ನೀಡುತ್ತೇವೆ. ಒಳಗೆ ಹೋದ್ಮೇಲೆ ಅವರು ಏನು ಕೇಳುತ್ತಾರೆ ಎಂಬುದು ಗೊತ್ತಾಗುತ್ತೆ. ನಾನು ಈಗ ಬೆಂಗಳೂರಿನಿಂದ ಬಂದಿದ್ದೀನಿ. ಎಂಎಲ್ಎ ಅವರು ಕೂಡ ಬೆಂಗಳೂರಿನಿಂದ ಈಗ ಬರ್ತಾ ಇದ್ದಾರೆ. ಇಡಿ ಅಂತ ಹೇಳ್ತಾ ಇದ್ದಾರೆ. ನೋಡ್ಬೇಕು ಏನು ಅಂತ.

ರಾಜಕೀಯ ಪ್ರೇರಿತ ಏನು ಅದೆಲ್ಲ ನಮಗೆ ಗೊತ್ತಿಲ್ಲ. ಅಕ್ರಮ ಅದು ಇದು ಅಂತ ಇದ್ರೆ ಅವರು ಏನು ಕೇಳ್ತಾರೆ ಅದಕ್ಕೆ ಉತ್ತರ ಕೊಡುವುದಕ್ಕೆ ನಾವೂ ಸಿದ್ದ ಎಂದಿದ್ದಾರೆ. ಸಿಕ್ಕಿಂ ಹೊಟೇಲ್ ನಲ್ಲಿ ವೀರೇಂದ್ರ ಪಪ್ಪಿ ಅವರನ್ನ ವಶಕ್ಕೆ ಪಡೆದಿದ್ದಾರೆ ಎಂಬ ಮಾಹಿತಿ ಇದೆ. ಈ ಮೂಲಕ ವಿಚಾರಣೆಗೆ ಅವರನ್ನು ಕರೆದುಕೊಂಡು ಬರ್ತಿದ್ದಾರೆ ಎಂದು ಹೇಳಲಾಗ್ತಿದೆ.

ಚಳ್ಳಕೆರೆ ನಗರದ ಹಳೆ ಟೌನ್ ನಲ್ಲಿರುವ ಅವರ ನಾಲ್ಕು ಮನೆಗಳ ಮೇಲೆ ಮಾಡಲಾಗಿದ್ದು, ವೀರೇಂದ್ರ ಪಪ್ಪಿ ಅವರ ಸಹೋದರರಾದ ಕೆ. ಸಿ. ನಾಗರಾಜ್,ಕೆ.ಸಿ.ತಿಪ್ಪೇಸ್ವಾಮಿ ಅವರ ಮನೆ ಮೇಲೂ ಸಹ ದಾಳಿ ಮಾಡಲಾಗಿದ್ದು ಪರಿಶೀಲನೆ ಮಾಡಲಾಗುತ್ತಿದೆ. ಬೆಂಗಳೂರಿನಿಂದ ಸುಮಾರು ಐದು ಕಾರುಗಳಲ್ಲಿ ಬಂದಿರುವ ಇಡಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲಿಸುತ್ತಿದ್ದಾರೆ. ಅಕ್ರಮ ಹಣ ವರ್ಗಾವಣೆಯ ಆರೋಪದ ಮೇಲೆ ವೀರೇಂದ್ರ ಪಪ್ಪಿ ಅವರ ಮನೆ ಮೇಲೆ ದಾಳಿಯಾಗಿದೆ. ಈ ದಾಳಿಯ ವೇಳೆ ಹಲವು ದಾಖಲೆಗಳನ್ನ ಪರಿಶೀಲನೆ ಮಾಡಿದ್ದಾರೆ. ಇನ್ನು ಇಡಿ ಅಧಿಕಾರಿಗಳು ಏನೇ ಪ್ರಶ್ನೆಗಳನ್ನ ಕೇಳಿದ್ರು ಅದಕ್ಕೆ ಉತ್ತರ ಕೊಡ್ತೀನಿ ಎಂದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...