ಬೆಂಗಳೂರು: ರಾಜ್ಯಾದ್ಯಂತ ಮಳೆ ಜೋರಾಗಿದೆ. ದಿನವೂ ಬಿಡದೆ ಹಲವೆಡೆ ಮಳೆ ಸುರಿಯುತ್ತಿದೆ. ಇನ್ನು ಸೆಪ್ಟೆಂಬರ್ 6ರವರೆಗೂ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಒಂದು ವಾರಗಳ ಕಾಲ ಮಳೆಯಾಗಲಿದ್ದು, ಹವಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.
ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ತುಮಕೂರಿ, ದಕ್ಷಿಣ ಕನ್ನಡ, ಉಡುಪಿ, ಉತ್ತರಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ವಿಜಯನಗರ ಭಾಗದಲ್ಲಿ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಸೂಚನೆ ನೀಡಿದೆ.
ಸಿಲಿಕಾನ್ ಸಿಟಿಯಲ್ಲಿ ಬೆಳಗ್ಗೆಯಿಂದಾನೂ ಮೋಡ ಕವಿದ ವಾತಾವರಣ ಕಾಣಿಸಿಕೊಂಡಿದೆ. ಸಂಜೆ ವೇಳೆಗೆ ಸಾಧಾರಣ ಮಳೆಯಾಗುವ ಸೂಚನೆ ನೀಡಿದೆ ಹವಮಾನ ಇಲಾಖೆ. ಮುಂದಿನ ಒಂದು ವಾರಗಳ ಕಾಲ ಜೋರು ಮಳೆಯಾಗಲಿದೆ. ಸದ್ಯ ಈ ಮಳೆಯ ಸೂಚನೆ ರೈತರಿಗೆ ಸಂತಸ ತಂದಿದೆ. ಬೆಳೆಗೆ ಬೇಕಾದ ಮಳೆ ಈ ಸಮಯಕ್ಕೆ ಬಂದರೆ ಉತ್ತಮ ಫಸಲು ಸಿಗಲಿದೆ.
ಇನ್ನು ಪ್ರತಿದಿನ ಮಳೆ ಬೀಳುತ್ತಿರುವ ಕಾರಣ ರಾಜ್ಯದ ಜಲಾಶಯಗಳಲ್ಲೂ ನೀರಿನ ಒಳ ಹರಿವು ಹೆಚ್ಚಾಗಿದೆ. ಹೀಗೆ ಪ್ರತಿದಿನವೂ ಮಳೆಬಂದರೆ ಕೆರೆ, ಕಟ್ಟೆಗಳು, ಜಲಾಶಯಗಳು ಕೋಡಿ ಬೀಳುವುದು ಗ್ಯಾರಂಟಿ. ಸದ್ಯ ಸೆಪ್ಟೆಂಬರ್ 6ರವರೆಗೆ ಮಳೆ ಮುಂದುವರೆಯಲಿದೆ ಎಂದು ಹವಮಾನ ಇಲಾಖೆ ಸೂಚನೆ ನೀಡಿದೆ. ಅದರಲ್ಲೂ ಕರಾವಳಿ ಹಾಗೂ ಮಲೆನಾಡಿನ ಭಾಗದಲ್ಲಿ ಜೋರು ಮಳೆಯಾಗಲಿದೆ ಎಂದು ಹವಮಾನ ಇಲಾಖೆ ವರದಿ ನೀಡಿದೆ.










