Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪಾದಯಾತ್ರೆಗೆ ಬ್ರೇಕ್ ಹಾಕಲು ಟಫ್ ರೂಲ್ಸ್ ಮಾಡಿದ್ದಾರಾ..? ಈ ಪ್ರಶ್ನೆಗೆ ಸಿದ್ದರಾಮಯ್ಯ ಏನಂದ್ರು ಗೊತ್ತಾ..?

Facebook
Twitter
Telegram
WhatsApp

ಬೆಂಗಳೂರು: ಕಳೆದ ಒಂದು ವಾರದಿಂದಲೂ ರಾಜ್ಯದಲ್ಲಿ ಕೊರೊನಾ ಕೇಸ್ ಗಳು ವಿಪರೀತವಾಗಿ ಹೇರಿಕೆಯಾಗುತ್ತಿವೆ. ಇಂದು ಕೂಡ 4 ಸಾವಿರಕ್ಕೂ ಅಧಿಕ ಕೇಸ್ ಗಳು ದಾಖಲಾಗಿವೆ. ಸದ್ಯ ಸರ್ಕಾರ ಕೊರಿನಾ ನಿಯಂತ್ರಣಕ್ಕೆಂದು ರಾಜ್ಯದಲ್ಲಿ ಟಫ್ ರೂಲ್ಸ್ ಜಾರಿ ಮಾಡಿದೆ. ಇದರ ಬೆನ್ನಲ್ಲೇ ಕಾಂಗ್ರೆಸ್ ನವರ ಪಾದಯಾತ್ರೆ ಕಥೆ ಏನು ಅನ್ನೋದೆ ಹಲವರ ಪ್ರಶ್ನೆಯಾಗಿದೆ.

ಈ ಸಂಬಂಧ ಇಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಸಿದ್ದರಾಮಯ್ಯ ಸುದ್ದಿಗೋಷ್ಟಿ ನಡೆಸಿದ್ದಾರೆ. ಈ ವೇಳೆ ಮಾತನಾಡಿರುವ ಸಿದ್ದರಾಮಯ್ಯ ಯಾವುದೇ ಕಾರಣಕ್ಕೂ ಪಾದಯಾತ್ರೆ ನಿಲ್ಲಿಸುವ ಯೋಚನೆ ಇಲ್ಲ. ಜನರಿಗೆ ಅನುಕೂಲವೂ ಆಗಬೇಕು, ತೊಂದರೆಯೂ ಆಗಬಾರದು ಆ ರೀತಿಯಾಗಿ ಪಾದಯಾತ್ರೆ ಮಾಡ್ತೀವಿ ಎಂದಿದ್ದಾರೆ.

ಇನ್ನು ರಾಜ್ಯ ಸರ್ಕಾರ ಕೊರೊನಾ ರೂಲ್ಸ್ ಜಾರಿಗೆ ತಂದ ಮೇಲೆ ಕಾಂಗ್ರೆಸ್ ಪಾದಯಾತ್ರೆಯನ್ನ ಹತ್ತಿಕ್ಕುವುದಕ್ಕಾಗಿಯೇ ಈ ರೂಲ್ಸ್ ಮಾಡಲಾಗಿದೆ ಎಂಬ ಆರೋಪ‌ ಕೇಳಿ ಬಂದಿತ್ತು. ಈ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರ ನೀಡಿದ ಸಿದ್ದರಾಮಯ್ಯ, ಈ ಬಗ್ಗೆ ನನಗೆ ಗೊತ್ತಿಲ್ಲ ಎಂದಿದ್ದಾರೆ.

ಇನ್ನು ಇದೇ ವೇಳೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಮಾತನಾಡಿ, ಬಿಜೆಪಿಯವರಿಗೆ ರಾಜಕಾರಣ ಟಫ್ ಎನಿಸುತ್ತಿದೆ. ಅದಕ್ಕೆ ಈ ರೀತಿಯಾಗಿ ಅಧಿಕಾರಿಗಳ ಜೊತೆ ಬರೆಸುತ್ತಾ ಇದ್ದಾರೆ. ಯಾರ್ಯಾರಿಗೆ ಎಲ್ಲೆಲ್ಲಿ ಕೊರೊನಾ ಆಗಿದೆ ಅಂತ ತಿಳಿಸಿದ್ರೆ, ನಾವೂ ಅಲ್ಲಿ ಹೋಗಿ ಧೈರ್ಯ ಹೇಳಿ ಬರ್ತೇವೆ.

ಇದು ಕೊರೊನಾ ಲಾಕ್ಡೌನ್ ಅಲ್ಲ, ಕೊರೊನಾ ಕರ್ಫ್ಯೂ ಅಲ್ಲ ಬಿಜೆಪಿ ಲಾಕ್ಡೌನ್, ಬಿಜೆಪಿ ಕರ್ಫ್ಯೂ. ಪ್ರತಿಭಟನೆ, ರ್ಯಾಲಿ ಮಾಡಬೇಡಿ ಎಂದಿದ್ದಾರೆ. ಆದ್ರೆ ನಾವೂ ನಡೀತಾ ಇರೋದು ನೀರಿಗಾಗಿ. ಪ್ರತಿಭಟನೆ ಮಾಡಲ್ಲ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಿರಿಯೂರು | ಬೈಕ್ ಅಪಘಾತ, ಸ್ಥಳದಲ್ಲೇ ಓರ್ವ ಸಾವು..!

ಸುದ್ದಿಒನ್,  ಹಿರಿಯೂರು, ಮೇ. 05 : ನಗರದ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಆಲೂರು ಕ್ರಾಸ್ ಚಾನೆಲ್ ಬಳಿ ಸ್ಕೂಟಿ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಾಯಗೊಂಡ

ಪ್ರಜ್ವಲ್ ರೇವಣ್ಣ ಜೊತೆ ವಿಡಿಯೋದಲ್ಲಿದ್ದ ಮಹಿಳಾ ಅಧಿಕಾರಿಗಳಿಗೂ ಸಂಕಷ್ಟ : ಎಸ್ಐಟಿಯಿಂದ ನೋಟೀಸ್

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋದಲ್ಲಿ ಸರ್ಕಾರಿ ಅಧಿಕಾರಿಗಳು ಕೂಡ ಇರುವುದು ಗಮನಕ್ಕೆ ಬಂದಿದೆ. ಪೊಲೀಸ್ ಅಧಿಕಾರಿ, ಅರಣ್ಯಾಧಿಕಾರಿ, ಬೆಂಗಳೂರಿನ ಎಇಇ ಫೋಟೋ, ವಿಡಿಯೋಗಳು ವೈರಲ್ ಆಗಿದ್ದವು. ಇದೀಗ ಅವರಿಗೆಲ್ಲಾ ಟೆನ್ಶನ್ ಶುರುವಾಗಿದೆ. ಎಸ್ಐಟಿ

ಈಗ ನಡೆಯುತ್ತಿರುವ ಲೋಕಸಭಾ ಚುನಾವಣೆ ಎರಡನೇ ಸ್ವಾತಂತ್ರ್ಯ ಹೋರಾಟ : ಮುಖ್ಯಮಂತ್ರಿ ಸಿದ್ದರಾಮಯ್ಯ

  ಬೆಳಗಾವಿ , ಮೇ 05 : ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 400 ಸ್ಥಾನಗಳನ್ನು ನೀಡಿದರೆ ಸಂವಿಧಾನವನ್ನು ಬದಲಾವಣೆ ಮಾಡುವುದಾಗಿ ಬಿಜೆಪಿ ಹಾಗೂ ಆರ್ ಎಸ್ ಎಸ್ ಹೇಳುತ್ತಿದ್ದು, ಈ ಚುನಾವಣೆ ಎರಡನೇ ಸ್ವಾತಂತ್ರ್ಯ

error: Content is protected !!