Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಮ್ಮನ್ನೇ ಗುರಿ ಮಾಡಿ ನಿಯಮ ಹೇರಿದರೆ ಹೆದರಲ್ಲ : ಸಿದ್ದರಾಮಯ್ಯ

Facebook
Twitter
Telegram
WhatsApp

 

ಬೆಂಗಳೂರು: ಕೊರೊನಾ ಹೆಚ್ಚಳದ ಹಿನ್ನೆಲೆ ರಾಜ್ಯದಲ್ಲಿ ಟಫ್ ರೂಲ್ಸ್ ಜಾರಿಯಾಗಿದೆ. ಆದ್ರೆ ಇದು ಕಾಂಗ್ರೆಸ್ ಪಾದಯಾತ್ರೆ ತಪ್ಪಿಸಲು ಹಾಕಿದ ನಿಯಮ ಎಂಬ ಆರೋಪ ಕೇಳಿ ಬರುತ್ತಿದೆ. ಈ ಬೆನ್ನಲ್ಲೆ ಸಿದ್ದರಾಮಯ್ಯ ಸಿಡಿದೆದ್ದಿದ್ದು, ಟ್ವೀಟ್ ಮೂಲಕ ಟಾಂಗ್ ಕೊಟ್ಟಿದ್ದಾರೆ.

ನಾವು ಪಾದಯಾತ್ರೆ ಘೋಷಣೆ ಮಾಡಿದ್ದು ಸರ್ಕಾರ ಕೊವಿಡ್ ನಿರ್ಬಂಧಗಳನ್ನು ಹೇರಿದ ಮೇಲಲ್ಲ. ತಿಂಗಳ ಮೊದಲೇ ದಿನಾಂಕ ನಿಗದಿ ಮಾಡಿ, ಅಗತ್ಯ ತಯಾರಿ ಮಾಡಿಕೊಂಡಿದ್ದೇವೆ. ನಮ್ಮನ್ನೇ ಗುರಿಮಾಡಿ ನಿಯಮ ಹೇರಿದರೆ ನಾವು ಹೆದರಿ ಪಾದಯಾತ್ರೆ ಕೈಬಿಡೋಕಾಗುತ್ತಾ?.

144 ಸೆಕ್ಷನ್ ಹೇರಿದರೆ ಐದಕ್ಕಿಂತ ಹೆಚ್ಚು ಮಂದಿ ಸೇರಬಾರದು ಎಂದಿದೆಯಲ್ವಾ? ನಾನು, @DKShivakumar, @RLR_BTM, ಧ್ರುವನಾರಾಯಣ ಸೇರಿ ನಾಲ್ಕೇ ಮಂದಿ ನಡೆದುಕೊಂಡು ಹೋಗ್ತೇವೆ. ಆಗಲೂ ನಮ್ಮನ್ನು ತಡೆಯುತ್ತಾರಾ? ಬಲಪ್ರಯೋಗ ಮಾಡಿದರೆ ನಮ್ಮ ಸಂವಿಧಾನದತ್ತ ಹಕ್ಕುಗಳನ್ನು ಉಲ್ಲಂಘನೆ ಮಾಡಿದ ಹಾಗಾಗುವುದಿಲ್ಲವೇ?.

ಕೊರೊನಾ ಮೂರನೇ ಅಲೆಯ ನಿರೀಕ್ಷೆ ಇದ್ದರೂ ಸರಿಯಾದ ತಪಾಸಣೆ ನಡೆಸದೆ, ಅಂತರರಾಷ್ಟ್ರೀಯ ವಿಮಾನ ಸಂಚಾರ ತಡೆಯದೆ, ಮಾಸ್ಕ್ ಬಳಕೆ ಕಟ್ಟುನಿಟ್ಟು ಮಾಡದೆ ಈಗ ವಿರೋಧ ಪಕ್ಷವೊಂದು ತನ್ನ ಜವಾಬ್ದಾರಿ ನಿರ್ವಹಿಸಲು ಹೊರಟಾಗ ದುರುದ್ದೇಶದಿಂದ ನಿರ್ಬಂಧಗಳನ್ನು ಹೇರಿರುವುದು ಖಂಡನೀಯ.

ರಾಜ್ಯದ ಯಾವೊಬ್ಬ ವ್ಯಕ್ತಿಗೂ ಕೊರೊನಾ ಬರಬಾರದು ಎಂಬುದು ನಮ್ಮ ಆಶಯವೂ ಹೌದು. ಆದರೆ @BJP4Karnataka ಸರ್ಕಾರ ನಿಬಂಧನೆಗಳನ್ನು ಹೇರಿರುವ ಹಿಂದೆ ಬೇರೆಯೇ ಉದ್ದೇಶ ಇದೆ. ಅವರ ಈ ಷಡ್ಯಂತ್ರವನ್ನು ಬಯಲು ಮಾಡುತ್ತೇವೆ ಎಂದು ಸರಣಿ ಟ್ವೀಟ್ ಮೂಲಕ ಆಕ್ರೋಶ ಹೊರಹಾಕಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮುಂದಿನ ವರ್ಷದಿಂದ ಎಸ್ಎಸ್ಎಲ್ಸಿ ಮಕ್ಕಳಿಗಿಲ್ಲ ಗ್ರೇಸ್ ಮಾರ್ಕ್ಸ್..!

ಬೆಂಗಳೂರು: ಈ ಬಾರಿಯ ಎಸ್ಎಸ್ಎಲ್ಸಿ ಫಲಿತಾಂಶ ಕಳೆದ ಬಾರಿಗಿಂತ ಕಡಿಮೆ ಬಂದಿದೆ. ಅದರಲ್ಲೂ ಕಳೆದ ವರ್ಷಕ್ಕಿಂತ ಹೆಚ್ಚಿನ ಗ್ರೇಸ್ ಮಾರ್ಕ್ಸ್ ನೀಡಲಾಗಿದ್ದರು, ಫಲಿತಾಂಶ ಹೇಳಿಕೊಳ್ಳುವ ಮಟ್ಟಕ್ಕೆ ಬಂದಿಲ್ಲ. ಈ ಗ್ರೇಸ್ ಮಾರ್ಕ್ಸ್ ವಿಚಾರವಾಗಿ ಸಿಎಂ

ರಾಜಕೀಯ ನಿಂತ ನೀರಲ್ಲ, ಕೆಲವ ಬದಲಾವಣೆಗಳು ಅನಿವಾರ್ಯ : ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಮೇ. 17 :  ನಾನು ನನ್ನ ಶಾಸಕ ಸ್ಥಾನ ಅವಧಿ ಮುಗಿದ ಮೇಲೆ ಬೇರೆ ಪಕ್ಷಕ್ಕೆ

ಸಾಲ ಇರುವ ಜಮೀನು ನೀಡಿ ಜ್ಯೂ.ಎನ್ಟಿಆರ್ ಗೆ ಮೋಸ ಮಾಡಿದ ಯುವತಿ ವಿರುದ್ಧ ನಟ ದೂರು..!

ಜ್ಯೂ. NTR ಆಸ್ತಿಯೊಂದನ್ನು ಖರೀದಿಸಲು ಹೋಗಿ ಮೋಸ ಹೋಗಿದ್ದಾರೆ. ಇದೀಗ ಮೋಸ ಮಾಡಿದ ಯುವತಿ ವಿರುದ್ಧ ಕೋರ್ಟ್ ಮೊರೆ ಹೋಗಿದ್ದಾರೆ. ಆಸ್ತಿ ಮೇಲೆ ಕೋಟ್ಯಾಂತರ ರೂಪಾಯಿ ಸಾಲವಿದ್ದು, ನ್ಯಾಯ ಕೇಳುತ್ತಿದ್ದಾರೆ. ಜ್ಯೂ. NTR, ಆರ್

error: Content is protected !!