Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪಂಜಾಬ್ ಸರ್ಕಾರವನ್ನ ವಜಾ ಮಾಡಬೇಕು : ನಳೀನ್ ಕುಮಾರ್ ಕಟೀಲ್

Facebook
Twitter
Telegram
WhatsApp

ಬೆಂಗಳೂರು: ಪಂಜಾಬ್ ಗೆ ಪ್ರಧಾನಿ ಮೋದಿ ಭೇಟಿ ನೀಡಿದಾಗ ಭದ್ರತಾ ವೈಫಲ್ಯದ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಂಜಾಬ್ ಸರ್ಕಾರ ಕಾನೂನು ಕಾಪಾಡಲು ವಿಫಲ ಆಗಿದೆ. ಪ್ರಧಾನಿಗಳ ಭದ್ರತೆಯಲ್ಲಿ ಲೋಪ ಎಸಗಿರುವ ಸರ್ಕಾರ ವನ್ನು ವಜಾ ಮಾಡುವಂತೆ ರಾಜ್ಯಪಾಲರ ಬಳಿ ಮನವಿ ಮಾಡಿದ್ದೇವೆ ಎಂದು ತಿಳಿಸಿದ್ದಾರೆ.

ರಾಜ್ಯಪಾಲರನ್ನು ಥಾವರ್ ಚಂದ್ ಗೆಹ್ಲೋಟ್ ರನ್ನು ಭೇಟಿಯಾದ ನಳೀನ್ ಕುಮಾರ್ ಕಟೀಲ್ ಆ ಬಳಿಕ ಮಾತನಾಡಿದ್ದಾರೆ. ಪಂಜಾಬ್ ಸರ್ಕಾರವನ್ನು ವಜಾ ಮಾಡುವಂತೆ ರಾಜ್ಯಪಾಲರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಮಾಡಿದ್ದೇವೆ. ಅಧಿಕಾರ ಇಲ್ಲದಿದ್ದಾಗ ಕಾಂಗ್ರೆಸ್ ಇಂತಹ ಅರಾಜಕತೆ ಸೃಷ್ಟಿ ಮಾಡುತ್ತದೆ. ದೇಶದಲ್ಲಿ ಪ್ರಧಾನಿ ಹುದ್ದೆ ಪಕ್ಷಕ್ಕೆ ಸೀಮಿತ ಅಲ್ಲ. ಪಂಜಾಬ್ ಸರ್ಕಾರ ವಿಫಲವಾಗಿದೆ ಹಾಗಾಗಿ ವಜಾ ಮಾಡಬೇಕು. ಸುಪ್ರೀಂ ಕೋರ್ಟ್ ನಿಂದ ತನಿಖೆಗೆ ಆದೇಶ ಆಗಿದೆ ಎಂದಿದ್ದಾರೆ.

ಇದೆ ವೇಳೆ ಕಾಂಗ್ರೆಸ್ ನಿಂದ ಪಾದಯಾತ್ರೆ ವಿಚಾರವಾಗಿ ಮಾತನಾಡಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾವುದೇ ಹೋರಾಟಕ್ಕೆ ಅಡ್ಡಿ ಇಲ್ಲ. ಆದರೆ ಮೇಕೆದಾಟು ಯೋಜನೆ ಗೆ ಅವರ ಸರ್ಕಾರದ ಕೊಡುಗೆ ಏನು ಅಂತಾ ಹೇಳಬೇಕು. ಸಿದ್ದರಾಮಣ್ಣನ ಸರ್ಕಾರದಲ್ಲಿ ಯೋಜನೆ ಜಾರಿ ಮಾಡಲಿಲ್ಲ. ಆದರೆ ನಮ್ಮ ಸರ್ಕಾರ ಯೋಜನೆ ಜಾರಿ ಮಾಡಲು ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡ್ತಿದೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬೆಂಗಳೂರು ಸೇರಿದಂತೆ ಹಲವೆಡೆ ಜೋರು ಮಳೆ : ಆರ್ಸಿಬಿ ಮ್ಯಾಚ್ ನೋಡುವ ಆಸೆ ಕಿತ್ತುಕೊಂಡನಾ ವರುಣರಾಯ..!

ಇಂದು ಬೆಳಗ್ಗೆಯಿಂದಾನೇ ಮೋಡಕವಿದ ವಾತಾವರಣ ಮನೆ ಮಾಡಿತ್ತು. ಮಧ್ಯಾಹ್ನದ ವೇಳೆಗೆ ಬೆಂಗಳೂರು ನಗರದಾದ್ಯಂತ ಜೋರು ಮಳೆಯಾಗಿದೆ. ವಿಜಯನಗರ, ರಾಜಾಜಿನಗರ, ಕಾರ್ಪೋರೇಷನ್ ಸೇರಿದಂತೆ ನಗರದ ಹಲವೆಡೆ ಮಳೆಯಾಗಿದೆ. ಆದರೆ ಈ ಮಳೆಯಿಂದ ಇಂದು ಆರ್ಸಿಬಿ ಮ್ಯಾಚ್

IPL 2024 : ಆರ್‌ಸಿಬಿ vs ಸಿಎಸ್‌ಕೆ : ಆರ್‌ಸಿಬಿಗೆ ಉಂಟು 18 ರ ನಂಟು : ಇಂದು ಇತಿಹಾಸ ಮರುಕಳಿಸುತ್ತಾ ?

ಸುದ್ದಿಒನ್ :  IPL 2024 ನಲ್ಲಿ RCB vs CSK ನಡುವಿನ ಇಂದಿನ ಪಂದ್ಯ ಬಹಳ ಮಹತ್ವದ್ದಾಗಿದೆ. ಪ್ರತಿಯೊಬ್ಬ ಕ್ರಿಕೆಟ್ ಅಭಿಮಾನಿಗಳ ಕಣ್ಣು ಈ ಪಂದ್ಯದ ಮೇಲಿದೆ. ಏಕೆಂದರೆ ಇಂದಿನ ಪಂದ್ಯ ನಾಕೌಟ್ ಪಂದ್ಯವಾಗಿದೆ.

ಚಿತ್ರದುರ್ಗ | ಕಳೆದ 24 ಗಂಟೆಯಲ್ಲಿ ಎಲ್ಲೆಲ್ಲಿ ಮಳೆಯಾಗಿದೆ ? ಇಲ್ಲಿದೆ ಮಳೆ ವರದಿ

    ಚಿತ್ರದುರ್ಗ, ಮೇ.18:  ಶುಕ್ರವಾರ ಸಂಜೆ ಸುರಿದ ಮಳೆ ವಿವರದನ್ವಯ ಚಿತ್ರದುರ್ಗ ತಾಲ್ಲೂಕಿನ ಚಿತ್ರದುರ್ಗ-1ರಲ್ಲಿ 42.8ಮಿ.ಮೀ ಮಳೆಯಾಗಿದ್ದು, ಇದು ಜಿಲ್ಲೆಯಲ್ಲಿ ಸುರಿದ ಅತ್ಯಧಿಕ ಮಳೆಯಾಗಿದೆ. ಚಿತ್ರದುರ್ಗ ತಾಲ್ಲೂಕಿನ ಚಿತ್ರದುರ್ಗ-2ರಲ್ಲಿ 9.2ಮಿ.ಮೀ, ಭರಮಸಾಗರದಲ್ಲಿ 4.4ಮಿ.ಮೀ

error: Content is protected !!