Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ | ಆಕೆಗೆ ವಾರ್ಷಿಕೋತ್ಸವದ ಸಂಭ್ರಮ.. ಈತನಿಗೆ ಕೊಲೆ ಮಾಡುವ ಹಂಬಲ…

Facebook
Twitter
Telegram
WhatsApp

ಚಿತ್ರದುರ್ಗ, (ಜ.07): ಮದುವೆ ಅಂದ್ರೆ ಮದುವೆ ವಾರ್ಷಿಕೋತ್ಸವದ ಸಂಭ್ರಮ ಇದ್ದೆ ಇರುತ್ತೆ. ಅದರಲ್ಲೂ ಪತಿಯಿಂದ ಏನಾದ್ರೂ ಸ್ಪೆಷಲ್ ಗಿಫ್ಟ್ ಸಿಗುತ್ತೆ ಅನ್ನೋದೆ ಪತ್ನಿಯ ನಿರೀಕ್ಷೆಯಾಗಿರುತ್ತೆ.

ಆತ ಹೆಂಡತಿಗೆ ಕೊಟ್ಟ ಗಿಫ್ಟ್ ಹೆಂಡತಿ ಮಾತ್ರವಲ್ಲ ಇಡೀ ಕುಟುಂಬಸ್ಥರು ಮರೆಯದಂತ ಗಿಫ್ಟ್ ಅದು. ಹೌದು ಮದುವೆ ವಾರ್ಷಿಕೋತ್ಸವ ದಿನದಂದೇ ಕೊಲೆ ಮಾಡಿರುವ ಘಟನೆ ನಡೆದಿದೆ.

ಕಳೆದ ತಿಂಗಳ 25 ರಂದು ನಡೆದ ಕೊಲೆ ಪ್ರಕರಣವೊಂದು ತಡವಾಗಿ ಬೆಳಕಿಗೆ ಬಂದಿದೆ.

ತಾಲ್ಲೂಕಿನ ಕೋಣನೂರು ಗ್ರಾಮದ
26 ವರ್ಷದ ಸುಮಾ ಕೊಲೆಯಾದ ದುರ್ದೈವಿ. ನಾರಪ್ಪ ಕೊಲೆ ಮಾಡಿದ ಆರೋಪಿ.

ಡಿಸೆಂಬರ್ 25 ರಂದು ಇವರಿಬ್ಬರ ಮದುವೆ ವಾರ್ಷಿಕೋತ್ಸವದ ದಿನ. ಆದ್ರೆ ಆರೋಪಿ ನಾರಪ್ಪ ಆತನ ಪತ್ನಿಯನ್ನ ಕೊಲೆಗೈದು ಬಚ್ಚಲು ಮನೆಯಲ್ಲೇ ಪ್ಲಾಸ್ಟಿಂಗ್ ಮಾಡಿಟ್ಟಿದ್ದ. ಆದ್ರೆ ಏನು ಗೊತ್ತಿಲ್ಲದಂತೆ ಇದ್ದದ್ದು ಅಲ್ಲದೆ, ತನ್ನ ಪತ್ನಿ ಕಾಣೆಯಾಗಿದ್ದಾಳೆಂದು ಪೊಲೀಸರಿಗೆ ದೂರು ನೀಡಿದ್ದಾನೆ.

ದೂರು ದಾಖಲಿಸಿಕೊಂಡು  ಪೊಲೀಸರು ತನಿಖೆ ನಡೆಸಿದ್ದು, ಕೊಲೆಗಾರ ಯಾರೆಂಬುದನ್ನ ಬಾಯಿ ಬಿಡಿಸಿದ್ದಾರೆ.

ಪೊಲೀಸರ ತನಿಖೆ ವೇಳೆ ಹೆಂಡತಿಯನ್ನು ಕೊಲೆ ಮಾಡಿ, ಬಚ್ಚಲು ಮನೆಯಲ್ಲೇ ಹೂತಾಕಿರುವುದನ್ನ ಒಪ್ಪಿಕೊಂಡಿದ್ದಾನೆ. ವಿಚಾರ ತಿಳಿದು ಪೋಷಕರು ದುಃಖತಪ್ತರಾಗಿದ್ದಾರೆ. ವರದಕ್ಷಿಣೆಯ ಕಿರುಕುಳದಿಂದ ಈ ರೀತಿ ಮಾಡಿದ್ದಾನೆಂದು ಆರೋಪಿಸಿದ್ದಾರೆ. ಅದಕ್ಕೋಸ್ಕರ ಪ್ರತಿನಿತ್ಯ ಜಗಳವಾಗುತ್ತಿತ್ತು ಎಂದಿದ್ದಾರೆ.

ಆರೋಪಿ ಪರಾರಿಯಾಗಿದ್ದು, ಆತನಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಭರಮಸಾಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಖುಷಿಯಿಂದ ಕ್ಷೇತ್ರದ ಜನರ ಸೇವೆ ಸಲ್ಲಿಸುತ್ತೇನೆ : ಗೋವಿಂದ ಕಾರಜೋಳ

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 27 ; ದೇಶಕ್ಕೆ ಸ್ವಾತಂತ್ರ್ಯ ಸಿಕ್ಕು ಎಪ್ಪತ್ತು ವರ್ಷಗಳಾಗಿದ್ದರು ಮೂಲಭೂತ ಸೌಲಭ್ಯಗಳಿಂದ ವಂಚಿತರಾಗಿರುವ ಇಲ್ಲಿನ ಜನ ಮುಗ್ದರು ಅಮಾಯಕರು, ಕುಡಿಯುವ ನೀರಿಗೂ ಸಮಸ್ಯೆಯಿದೆ ಎಂದು ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ.

ಈ ಚುನಾವಣೆಯಲ್ಲಿ ನಾವು ಗೆದ್ದೇ ಗೆಲ್ಲುತ್ತೇವೆ : ಬಿ.ಎನ್. ಚಂದ್ರಪ್ಪ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 27  : ಕ್ಷೇತ್ರದ ಹದಿನೆಂಟುವರೆ ಲಕ್ಷ ಮತದಾರರು ಶುಕ್ರವಾರ ನಡೆದ ಚುನಾವಣೆಯಲ್ಲಿ ನನ್ನ ಭವಿಷ್ಯ ನಿರ್ಣಯಿಸುತ್ತಾರೆ.

ದಿನಪತ್ರಿಕೆಗಳಲ್ಲಿ ಕಟ್ಟಿಕೊಡುವ ಬಿಸಿ ತಿಂಡಿ ತಿಂದ್ರೆ ಕ್ಯಾನ್ಸರ್ ಬರುತ್ತೆ ಎಚ್ಚರ..!

ಪ್ಲಾಸ್ಟಿಕ್ ಕವರ್ ಅನ್ನು ಬ್ಯಾನ್ ಮಾಡಿ ಬಹಳ ವರ್ಷಗಳೇ ಕಳೆದಿವೆ. ಪ್ಲಾಸ್ಟಿಕ್ ಬಳಕೆ ಮಾಡುವುದರಿಂದ ಮನುಷ್ಯನ ಆರೋಗ್ಯಕ್ಕೆ ಖಂಡಿತ ಕುತ್ತು ಬರಲಿದೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಹೊಟೇಲ್ ಗಳಲ್ಲಿ ಪ್ಲಾಸ್ಟಿಕ್ ಕವರ್ ಗಳನ್ನು

error: Content is protected !!