ರಾಮನಗರ: ಗ್ರೇಟರ್ ಬೆಂಗಳೂರು ಮಾಡುವುದಕ್ಕೆ ಹೊರಟಿರುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಈ ಗ್ರೇಟರ್ ಬೆಂಗಳೂರು ಯೋಜನೆಗೆ ರಾಮನಗರ ರೈತರ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವ ಪ್ರಕ್ರಿಯೆ ನಡೆದಿದೆ. ಇದಕ್ಕೆ ರೈತರು ವಿರೋಧ ವ್ಯಕ್ತಪಡಿಸಿದ್ದು, ಇಂದು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಸರ್ಕಾರದ ವಿರುದ್ಧ ಘೋಷಣೆ ಕೂಗಿದ್ದಾರೆ.
ಈ ವಿಚಾರ ತಿಳಿದ ತಕ್ಷಣ ರಾಮನಗರ ಜಿಲ್ಲಾಧಿಕಾರಿಗಳ ಕಚೇರಿ ಬಳಿ ಬಂದ ಡಿಕೆ ಶಿವಕುಮಾರ್ ಅವರು, ರೈತರೊಂದಿಗೆ ಸಂವಾದ ನಡೆಸಿದ್ದಾರೆ. ರೈತರಿಗೆ ಸಮಾಧಾನ ಮಾಡುವುದಕ್ಕೆ ಪ್ರಯತ್ನಿಸಿದ್ದಾರೆ. ಆದರೆ ಮಾತನಾಡುವ ನಡುವೆಯೇ ರೈತರು ಹಾಗೂ ಡಿಕೆ ಶಿವಕುಮಾರ್ ನಡುವಿನ ಮಾತುಕತೆ ಜೋರಾಗಿದೆ. ಈ ವೇಳೆ ಡಿಕೆ ಶಿವಕುಮಾರ್ ಅವರು ರೈತರ ಮೇಲೆ ರೇಗಿದ್ದಾರೆ.
ನನ್ನ ಶಾಸಕನಿಗೆ ಅವಮಾನ ಮಾಡಿದರೆ ಹೇಗೆ..? ನಿಮ್ಮಿಂದ ಧಿಕ್ಕಾರ ಕೂಗುವುದಕ್ಕೆ ಮಾತ್ರ ಸಾಧ್ಯ. ಏನು ಮಾಡ್ತೀರಾ, ಮಾಡಿಕೊಳ್ಳಿ. ಕಾನೂನಿನಲ್ಲಿ ಏನು ಸಹಾಯ ಮಾಡಬೇಕೋ ಮಾಡುತ್ತೇನೆ. ಅದನ್ನ ಬಿಟ್ಟು ಹೀಗೆ ಕೂಗಾಡಿದರೆ ಏನು ಆಗಲ್ಲ. ಯಾವನ್ ಬಂದಿದ್ದ ನಿಮ್ಮ ಪರವಾಗಿ ಎಂದು ಗರಂ ಆಗಿದ್ದಾರೆ. ಈ ಬೆಳವಣಿಗೆ ರೈತರಿಗೆ ಬೇಸರ ತರಿಸಿದೆ. ಈ ಯೋಜನೆಯಲ್ಲಿ ಶಾಸಕ ಬಾಲಕೃಷ್ಣ ಅವರ ಪಾತ್ರ ಇರಬಹುದು ಎಂಬುದು ರೈತರ ಅನುಮಾನವಾಗಿದೆ. ಇದೇ ಕಾರಣಕ್ಕಾಗಿಯೇ ರೈತರು ಇಂದು ಪ್ರತಿಭಟನೆ ನಡೆಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.


















